
ಸುಂಟಿಕೊಪ್ಪ ಜು.31 NEWS DESK : ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ದೂರವಿರುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಯೋಜನಾಧಿಕಾರಿಗಳಾದ ಪುರುಷೋತ್ತಮ್ ಹೇಳಿದರು. ಚೆಟ್ಟಳ್ಳಿ ಪ್ರೌಢಶಾಲೆಯ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು ಬಿ ಸಿ ಟ್ರಸ್ಟ್ ಹಾಗೂ ಸುಂಟಿಕೊಪ್ಪ ವಲಯದ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ದುಶ್ಚಟಗಳ ದಾಸತ್ವದಿಂದ ನಮ್ಮ ಆರೋಗ್ಯ ಕುಟುಂಬ ಮತ್ತು ಸಮಾಜದಿಂದ ದೂರವಿರಿಸುತ್ತದೆ. ಅಲ್ಲದೆ ಮಾನವರ ದೇಹಕ್ಕೆ ಕ್ಯಾನ್ಸರ್, ಶ್ವಾಸಕೋಶ, ಲಿವರ್ ಸೇರಿದಂತೆ ಇತರ ಅಂಗಾಗಳನ್ನು ನಾಶಪಡಿಸುತ್ತದೆ. ಮೊಬೈಲ್, ಸಾಮಾಜಿಕ ಜಾಲತಾಣದ ಅತಿಯಾದ ಬಳಕೆಯಿಂದ ನಿದ್ರೆ ಕಡಿಮೆ, ಏಕಾಗ್ರತೆ ಸಮಸ್ಯೆ ಕಾಡಲಾರಂಭಿಸುತ್ತದೆ ದುಶ್ಚಟಗಳಿಂದ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದೆ ಎಂದು ಹೇಳಿದರು. ವಕೀಲರಾದ ರೇವತಿ ಮಾತನಾಡಿ, ಹದಿಹರೆಯದ ಮಕ್ಕಳಲ್ಲಿ ಕಂಡು ಬರುವ ಸಮಸ್ಯೆಗಳ ಬಗ್ಗೆ ವಿವರಿಸಿದ ಅವರು ಲೈಂಗಿಕ ಕಿರುಕುಳ ಬಂದಲ್ಲಿ ತಕ್ಷಣವೇ 1098 ಕರೆ ಮಾಡಿ ಮಾಹಿತಿಯನ್ನು ಹಂಚಿಕೊಳ್ಳಿ,ನಿಮ್ಮ ಸುತ್ತ ಮುತ್ತಲಿನಲ್ಲಿ ಬಾಲ್ಯ ವಿವಾಹಕ್ಕೆ ಆಸ್ಪದ ಕೊಡದಂತೆ ತಿಳಿಸಿದರು. ಮಾದಕ ದ್ರವ್ಯ ಸೇವನೆ ಅಥವಾ ಮಾರಾಟ ಕಂಡು ಬಂದಲ್ಲಿ ಕೂಡಲೇ ಪೆÇಲೀಸರಿಗೆ ಮಾಹಿತಿ ನೀಡುವಂತೆ ಹೇಳಿದರು. ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮವನ್ನು ಪ್ರಭಾರ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಕಾಶಿ ವಹಿಸಿದರು. ಒಕ್ಕೂಟದ ಪದಾಧಿಕಾರಿಗಳಾದ ಆಶಾ, ಮಂಜುಳಾ, ಉದಯ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ಸಂತೋಷ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಯು.ಸುನಂದಾ ಸ್ವಾಗತಿಸಿ, ಸೇವಾಪ್ರತಿನಿಧಿ ಚೆಲ್ವಿ ವಂದಿಸಿದರು.









