
ಮಡಿಕೇರಿ NEWS DESK ಆ.6 : ಸುಮಾರು ಐದು ವರ್ಷಗಳ ಹಿಂದೆ ನಡೆದ ದರೋಡೆ ಪ್ರಕರಣಕ್ಕೆ ಸಂಬ0ಧಿಸಿದ0ತೆ ತಮಗೆ ಇಲ್ಲಿಯವರೆಗೂ ನ್ಯಾಯ ದೊರಕಿಲ್ಲ. ಸೂಕ್ತ ತನಿಖೆೆಯ ಮೂಲಕ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಪೊಲೀಸ್ ಇಲಾಖೆಯೂ ಮೌನವಾಗಿದೆ ಎಂದು ಸುಂಟಿಕೊಪ್ಪ ಸಮೀಪದ ಹಾರಬೈಲು ಗ್ರಾಮದ ನಿವಾಸಿ ಸರೋಜಿನಿ ಅವರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾರಬೈಲು ಗ್ರಾಮದಲ್ಲಿ ತಾನು ಏಕಾಂಗಿಯಾಗಿ ವಾಸವಿದ್ದು, 2021ರ ಏ.27 ರಂದು ಸಂಜೆ 7.30ರ ಸುಮಾರಿಗೆ ಮನೆಯ ಹಿಂಭಾಗದಿ0ದ ಒಳನುಗ್ಗಿದ ಮೂವರು ಅಪರಿಚಿತ ವ್ಯಕ್ತಿಗಳು ತಮ್ಮನ್ನು ಗೋಡೆಗೆ ಒತ್ತಿ ಹಿಡಿದು, ಬಾಯಿಗೆ ಬಟ್ಟೆ ತುರುಕಿ ಹಿಂಸೆ ನೀಡಿದ್ದಾರೆ. ನಾನು ಪ್ರಜ್ಞಾಹೀನಳಾಗಿ ಬಿದ್ದಾಗ ಅಪರಿಚಿತರು ನನ್ನ ಮೈಮೇಲೆ ಇದ್ದ ಹಾಗೂ ಬೀರುವಿನಲ್ಲಿದ್ದ 3.90ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಮತ್ತು ನಗದನ್ನು ಕದ್ದೊಯ್ದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ವಿಷಯಕ್ಕೆ ಸಂಬAಧಿಸಿದAತೆ ಸುಂಟಿಕೊಪ್ಪ ಠಾಣೆಗೆ ಅದೇ ದಿನ ದೂರನ್ನು ನೀಡಿದ್ದೆ ಮತ್ತು ಆರೋಪಿಗಳನ್ನು ಪತ್ತೆ ಹಚ್ಚಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಸೂಕ್ತ ಕ್ರಮ ಕೈಗೊಂಡಿಲ್ಲ, ನಾನು ಕಷ್ಟಪಟ್ಟು ದುಡಿದು ಸಂಪಾದಿಸಿದ್ದೆಲ್ಲವನ್ನು ಕಳೆದುಕೊಂಡಿದ್ದೇನೆ ಎಂದು ಕಣ್ಣೀರು ಹಾಕಿದರು. ಒಬ್ಬ ಸಾಮಾನ್ಯ ನಾಗರಿಕಳಾಗಿ ಕಾನೂನಿನ ಮೇಲಿನ ಗೌರವ ಮತ್ತು ವಿಶ್ವಾಸವನ್ನು ಹೊಂದಿದ್ದೇನೆ. ನನಗೆ ಸಂಬ0ಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ, ಪಾರದರ್ಶಕ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆದು ನ್ಯಾಯ ದೊರಕಿಸಿಕೊಡಬೇಕೆಂದು ಸರೋಜಿನಿ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸರೋಜಿನಿ ಅವರ ಮೈದುನ ಬಿ.ಕೆ.ದಿನೇಶ್ ಉಪಸ್ಥಿತರಿದ್ದರು.









