Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*
  • *ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*
  • *ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*
  • *ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸೆ.9 ರಂದು ಸಿಎನ್‌ಸಿ ಸತ್ಯಾಗ್ರಹ*
  • **ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ**
  • *ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಐದು ವರ್ಷ ಕಳೆದರೂ ದರೋಡೆ ಪ್ರಕರಣ ಭೇದಿಸದ ಪೊಲೀಸರು : ಸರೋಜಿನಿ ಕಣ್ಣೀರು*
  • *ಆ.12 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • ಹಾರಂಗಿ ಜಲಾಶಯಕ್ಕೆ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಭೇಟಿ : ಪರಿಶೀಲನೆ
  • *ಕೊಡಗಿನಲ್ಲಿ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»**ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ**
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

**ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ**

ಆಗಷ್ಟ್ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.6 : ದಕ್ಷಿಣ ಕೊಡಗಿನ ವಿವಿಧೆಡೆ ನಡೆದಿರುವ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಈ ಕುರಿತು ಕ್ಷೇತ್ರದ ಶಾಸಕರು ತನಿಖೆಗೆ ಆದೇಶಿಸಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಿರುವ ರಸ್ತೆ ಅಭಿವೃದ್ಧಿಯ ಡಾಂಬರು ಕೇವಲ 6 ತಿಂಗಳಿಗೆ ಕಿತ್ತು ಬರುತ್ತಿದೆ. ರಸ್ತೆ ಡಾಂಬರೀಕರಣ ಮಾತ್ರವಲ್ಲದೆ ಗುಂಡಿ ಮುಚ್ಚುವ ಕಾರ್ಯ ಕೂಡ ಕಳಪೆಯಾಗಿದೆ. ಇದು ವ್ಯಾಪಕ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ. ಕುಟ್ಟ – ಶ್ರೀಮಂಗಲ – ಮಡಿಕೇರಿ ರಸ್ತೆ, ಕುಟ್ಟ – ಕಾನೂರು – ಪೊನ್ನಂಪೇಟೆ ರಸ್ತೆ, ಬಿಟ್ಟಂಗಾಲ – ಬಾಳುಗೋಡು – ಮಾಕುಟ್ಟ ರಸ್ತೆ, ಹೀಗೆ ಅನೇಕ ರಸ್ತೆಗಳಿವೆ. ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಅಗತ್ಯ ಅನುದಾನ ದೊರೆಯುತ್ತಿಲ್ಲ, ಬಂದಿರುವ ಅಲ್ಪ ಅನುದಾನವನ್ನು ಕೂಡ ಸದುಪಯೋಗ ಪಡಿಸದೆ ಕಳಪೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚರಿಸಲಾಗದೆ ವಾಹನ ಚಾಲಕರು ಸರಕಾರ ಹಾಗೂ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದ್ದಾರೆ. ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ವಿರೋಧ ಪಕ್ಷ ಬಿಜೆಪಿ ಧ್ವನಿ ಎತ್ತಿದರೆ ಆಡಳಿತ ಪಕ್ಷ ಕಾಂಗ್ರೆಸ್ ನ ಹಿಂಬಾಲಕರು ಅಭಿವೃದ್ಧಿ ಕಾರ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುತ್ತಿದ್ದಾರೆ. ಪ್ರಶ್ನೆ ಮಾಡುವ ವಿರೋಧ ಪಕ್ಷದ ಹಕ್ಕನ್ನು ಕಸಿದುಕೊಳ್ಳುವ ಮತ್ತು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಶ್ನೆ ಮಾಡುವವರಿಗೆ ಧಮ್ಕಿ ಹಾಕುವ ಕೆಲಸವನ್ನು ಕೂಡ ಕೆಲವು ಕಡೆಗಳಲ್ಲಿ ಮಾಡಿದ್ದು, ಈ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ ಎಂದು ಆರೋಪಿಸಿರುವ ರಾಕೇಶ್ ದೇವಯ್ಯ ಆಡಳಿತ ಪಕ್ಷದ ಮಂದಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮರೆತಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಪ್ರಶ್ನೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡದೆ ಆಡಳಿತದ ಸವಾಲುಗಳಾಗಿ ಪರಿಗಣಿಸಿ ಮತ ನೀಡಿದ ಜನರಿಗಾಗಿ ತಪ್ಪುಗಳನ್ನು ತಿದ್ದಿಕೊಳ್ಳುವ ಪ್ರಾಮಾಣಿಕತೆ ತೋರಲಿ ಎಂದು ಒತ್ತಾಯಿಸಿದ್ದಾರೆ. ಕಳಪೆ ಕಾಮಗಾರಿಗಳಿಗೆ ಅವಕಾಶ ನೀಡುವುದಿಲ್ಲವೆಂದು ಆರಂಭದಿoದಲೂ ಘೋಷಿಸುತ್ತಲೇ ಬಂದಿರುವ ಶಾಸಕರು ತಕ್ಷಣ ದಕ್ಷಿಣ ಕೊಡಗಿನ ಹದಗೆಟ್ಟ ರಸ್ತೆಗಳನ್ನು ಖುದ್ದು ಪರಿಶೀಲಿಸಬೇಕು. ಕಳಪೆ ಕಾಮಗಾರಿ ಕುರಿತು ಸಂಬoಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಕಳಪೆ ಕಾಮಗಾರಿ ಕೈಗೊಂಡ ಗುತ್ತಿಗೆದಾರರಿಗೆ ಯಾವುದೇ ಕಾರಣಕ್ಕೂ ಬಿಲ್ ಹಣ ಪಾವತಿ ಮಾಡಬಾರದು ಎಂದು ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ. ಕಳಪೆ ಕಾಮಗಾರಿಯಾಗಿರುವ ರಸ್ತೆಗಳ ಬಿಲ್ ಪಾವತಿಯಾಗಿಲ್ಲ ಎಂಬ ಹಾರಿಕೆಯ ಉತ್ತರಕ್ಕೆ ಪ್ರಾಮಾಣಿಕತೆ ಸೀಮಿತವಾಗದಿರಲಿ. ಈಗ ಬಿಲ್ ಪಾವತಿಯಾಗದಿದ್ದರೆ ಮುಂದಿನ ದಿನಗಳಲ್ಲಿ ಬಿಲ್ ಪಾವತಿ ಮಾಡುತ್ತಾರೆ. ಆಗ ರಸ್ತೆ ಮಾಡಿ 3 ವರ್ಷ ಕಳೆದಿದೆ, ನಾವು ಏನೂ ಮಾಡಲು ಸಾಧ್ಯವಿಲ್ಲ ಎಂಬ ಉತ್ತರ ಅಧಿಕಾರಿಗಳಿಂದ ಬಂದರೂ ಆಶ್ಚರ್ಯವಿಲ್ಲ ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*

ಆಗಷ್ಟ್ 6, 2026

*ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*

ಆಗಷ್ಟ್ 6, 2026

*ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*

ಆಗಷ್ಟ್ 6, 2026

*ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*

ಆಗಷ್ಟ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.6 : ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಎಲ್ಲಾ ರಾಜಕೀಯ ಪಕ್ಷಗಳು ಕೊಡಗು ಜಿಲ್ಲೆಯನ್ನು ಕಡೆಗಣಿಸುತ್ತಲೇ ಬಂದಿವೆ.…

*ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*

ಆಗಷ್ಟ್ 6, 2026

*ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸೆ.9 ರಂದು ಸಿಎನ್‌ಸಿ ಸತ್ಯಾಗ್ರಹ*

ಆಗಷ್ಟ್ 6, 2026

**ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ**

ಆಗಷ್ಟ್ 6, 2026

*ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*

ಆಗಷ್ಟ್ 6, 2026

*ಐದು ವರ್ಷ ಕಳೆದರೂ ದರೋಡೆ ಪ್ರಕರಣ ಭೇದಿಸದ ಪೊಲೀಸರು : ಸರೋಜಿನಿ ಕಣ್ಣೀರು*

ಆಗಷ್ಟ್ 6, 2026

*ಆ.12 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಆಗಷ್ಟ್ 5, 2026

ಹಾರಂಗಿ ಜಲಾಶಯಕ್ಕೆ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಭೇಟಿ : ಪರಿಶೀಲನೆ

ಆಗಷ್ಟ್ 5, 2026

*ಕೊಡಗಿನಲ್ಲಿ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ

ಆಗಷ್ಟ್ 5, 2026

*ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳಲ್ಲಿ AI ಬಳಕೆ ಕುರಿತು ಸಂಸತ್‌ನಲ್ಲಿ ಪ್ರಶ್ನಿಸಿದ ಸಂಸದ ಯದುವೀರ್ ಒಡೆಯರ್*

ಆಗಷ್ಟ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.