Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ವಿದ್ಯಾಲಯದಲ್ಲಿ ಅಂತರ್-ಶಾಲಾ ಬೆಳ್ಳಿ ಹಬ್ಬದ ಚೆಸ್ ಪಂದ್ಯಾವಳಿ ಉದ್ಘಾಟನೆ* 
  • *ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*
  • *ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*
  • *ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*
  • *ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸೆ.9 ರಂದು ಸಿಎನ್‌ಸಿ ಸತ್ಯಾಗ್ರಹ*
  • **ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ**
  • *ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಐದು ವರ್ಷ ಕಳೆದರೂ ದರೋಡೆ ಪ್ರಕರಣ ಭೇದಿಸದ ಪೊಲೀಸರು : ಸರೋಜಿನಿ ಕಣ್ಣೀರು*
  • *ಆ.12 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • ಹಾರಂಗಿ ಜಲಾಶಯಕ್ಕೆ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಭೇಟಿ : ಪರಿಶೀಲನೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*

ಆಗಷ್ಟ್ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.6 : ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಕರ್ನಾಟಕ ರಾಜ್ಯ ಸರಕಾರ 2023 ರಲ್ಲಿ “ಮೀಸಲಾತಿ”ಗೆ ಸಂಬoಧಿಸಿದoತೆ ಜಾರಿಗೆ ತಂದಿರುವ ಕಾನೂನನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲಿ ಎಂದು ಕರ್ನಾಟಕ ರಾಜ್ಯ ಸಮಾನ ಮನಸ್ಕರ ವೇದಿಕೆಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೀಸಲಾತಿ ಎನ್ನುವುದು “ಯಾರಪ್ಪನ ಗಂಟು ಅಲ್ಲ”, ಭಿಕ್ಷೆಯೂ ಅಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನೀಡಿರುವ ಹಕ್ಕಾಗಿದೆ. ಕೇಂದ್ರದ ಮೋದಿ ನೇತೃತ್ವದ ಕೇಂದ್ರ ಸರಕಾರ ಪರಿಶಿಷ್ಟ ಜಾತಿ-ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಮುಂದಾಗಬೇಕು. ರಾಜ್ಯದ 28 ಸಂಸದರು 224 ಶಾಸಕರು ಹಾಗೂ ರಾಜ್ಯಸಭಾ ಸದಸ್ಯರು ಮೀಸಲಾತಿ ಪರ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು. ರಾಷ್ಟçದ ಒಟ್ಟು ಜನಸಂಖ್ಯೆ ಶೇ.7 ರಷ್ಟಿರುವ ಮೇಲ್ವರ್ಗದ ಮಂದಿಗೆ ಅಗತ್ಯ ಮೀಸಲಾತಿ ಸೌಲಭ್ಯಗಳನ್ನು ಯಾವುದೇ ಸದ್ದುಗದ್ದಲವಿಲ್ಲದೆ ಒದಗಿಸುವ ಪ್ರಧಾನಿ ಪರಿಶಿಷ್ಟರು, ಒಬಿಸಿ ಮಂದಿಯ ಮೀಸಲಾತಿಯ ಹಕ್ಕುಗಳನ್ನು ಸಂವಿಧಾನಬದ್ಧವಾಗಿ ಒದಗಿಸಲು ಮುಂದಾಗಬೇಕು. ಸಂವಿಧಾನದ ಒಂಭತ್ತನೆ ಪರಿಚ್ಛೇದಕ್ಕೆ ರಾಜ್ಯದ ಮೀಸಲಾತಿ ಕಾನೂನು ಒಳಪಡದೆ ಇರುವ ಹಿನ್ನೆಲೆಯಲ್ಲಿ ರಾಜ್ಯದ ಪರಿಶಿಷ್ಟ ಜಾತಿಯವರು ಶೇ.17ರ ಮೀಸಲಾತಿಗೆ ಬದಲಾಗಿ ಶೇ.15 ರಷ್ಟನ್ನೆ ಪಡೆಯುವಂತಾಗಿದೆ. ಪರಿಶಿಷ್ಟ ಪಂಗಡ ಸಮುದಾಯದವರು ಶೇ.7ರ ಮೀಸಲಾತಿಗೆ ಬದಲಾಗಿ ಶೇ.3 ಮೀಸಲಾತಿಯನ್ನಷ್ಟೆ ಪಡೆಯುತ್ತಿದ್ದಾರೆ. ಒಬಿಸಿ ವರ್ಗಕ್ಕೆ ಸೇರಿದವರಿಗೆ ಶೇ.32 ಮಿಸಲಾತಿಯ ಸೌಲಭ್ಯವಷ್ಟೆ ದೊರಕುತ್ತಿದೆ. ಇದು ಸಾಮಾಜಿಕ ನ್ಯಾಯಕ್ಕೆ ಮಾಡುತ್ತಿರುವ ಅಪಚಾರವಾಗಿದೆ ಎಂದು ವಿ.ಎಸ್.ಉಗ್ರಪ್ಪ ತಿಳಿಸಿದರು. *ನಿಯೋಗ ತೆರಳಿ* ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ವಪಕ್ಷಗಳ ನಿಯೋಗದೊಂದಿಗೆ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿ, ರಾಜ್ಯಕ್ಕೆ ದೊರಕಬೇಕಾದ ಮೀಸಲಾತಿಯ ಸೌಲಭ್ಯಗಳ ಬಗ್ಗೆ ಮನದಟ್ಟು ಮಾಡಿಕೊಡಬೇಕು. ಮೀಸಲಾತಿಯ ಕಾನೂನನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ-ಪಂಗಡ ಮತ್ತು ಒಬಿಸಿ ವರ್ಗಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರ ಅಗತ್ಯ ಹಣಕಾಸಿನ ನೆರವನ್ನು ಅವರ ಕಲ್ಯಾಣ ಕಾರ್ಯಕ್ರಮಗಳಿಗೆ ಒದಗಿಸಲು ಮುಂದಾಗಬೇಕು. ಪ್ರಸ್ತುತ ಸಂವಿಧಾನದ ಪರಿಚ್ಛೇದಕ್ಕೆ ರಾಜ್ಯದ ಮೀಸಲಾತಿಯ ಕಾನೂನು ಸೇರದೆ ಇರುವ ಹಿನ್ನೆಲೆಯಲ್ಲಿ ಉದ್ಯೋಗ ಮತ್ತು ಶಿಕ್ಷಣದ ಮೀಸಲಾತಿಗಳನ್ನು ಸಮುದಾಯದ ಮಂದಿ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಇದೆಯೆಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯದ ಪರಿಶಿಷ್ಟರು, ಆದಿವಾಸಿಗಳು, ಇತರೆ ಹಿಂದುಳಿದ ವರ್ಗಗಳು ಮೀಸಲಾತಿಯ ನೈಜ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ರಾಜ್ಯದ ಸಂಸದರು, ಶಾಸಕರು ಈ ಬಗ್ಗೆ ಬಾಯಿ ಬಿಡುತ್ತಿಲ್ಲ, ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಕೂಡ ಸಂಸತ್ ನಲ್ಲಿ ಮಾತನಾಡುತ್ತಿಲ್ಲ ಎಂದು ಟೀಕಿಸಿದರು. ರಾಜ್ಯದಲ್ಲಿ ಶೇ.17.1ರಷ್ಟು ಸುಮಾರು 1.25 ಕೋಟಿಯಷ್ಟು ಪರಿಶಿಷ್ಟ ಜಾತಿ ಸಮುದಾಯದವರಿದ್ದಾರೆ. ಪರಿಶಿಷ್ಟ ಜಾತಿ ಮೀಸಲಾತಿಯಡಿ 101 ಜಾತಿಗಳಿವೆ. ಅದೇ ರೀತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೇ.7 ರಷ್ಟು ಸುಮಾರು 50 ಲಕ್ಷ ಮಂದಿ ಇದ್ದಾರೆ. ಶೇ.42 ರಷ್ಟು ಒಬಿಸಿ ಸುಮಾರು 2.90 ಕೋಟಿ ಮಂದಿ ಸೇರಿದಂತೆ ಒಟ್ಟಾಗಿ ಮೀಸಲಾತಿಯಡಿ 4.50 ಕೋಟಿ ಜನರು ಬರುತ್ತಾರೆ. ಈ ಜನಸಂಖ್ಯೆಗೆ ಅನುಗುಣವಾದ ಮೀಸಲಾತಿ ಸೌಲಭ್ಯವನ್ನು ಒದಗಿಸಬೇಕೆಂದು ವಿ.ಎಸ್.ಉಗ್ರಪ್ಪ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಾನ ಮನಸ್ಕರ ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷ ಎಂ.ನರಸಿoಹಯ್ಯ, ಪ್ರಧಾನ ಕಾರ್ಯದರ್ಶಿ ಸಿ.ಜಿ.ಜಯಶ್ರೀ, ಕೊಡಗು ಜಿಲ್ಲಾ ವಾಲ್ಮೀಕಿ ಮತ್ತು ನಾಯಕ್ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್.ಅಶೋಕ್, ವೇದಿಕೆಯ ಪ್ರಮುಖರಾದ ಎಸ್.ಸಿದ್ದಪ್ಪಯ್ಯ ಹಾಗೂ ಈ.ರಾಜಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ವಿದ್ಯಾಲಯದಲ್ಲಿ ಅಂತರ್-ಶಾಲಾ ಬೆಳ್ಳಿ ಹಬ್ಬದ ಚೆಸ್ ಪಂದ್ಯಾವಳಿ ಉದ್ಘಾಟನೆ* 

ಆಗಷ್ಟ್ 6, 2026

*ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*

ಆಗಷ್ಟ್ 6, 2026

*ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*

ಆಗಷ್ಟ್ 6, 2026

*ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*

ಆಗಷ್ಟ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.6 NEWS DESK  : ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಗುಜರಾತ್ ನ ಅಹಮದಾಬಾದ್ ನಲ್ಲಿ ತೆಗೆದುಕೊಂಡ ನಿರ್ಣಯದಂತೆ “ಸಂಘಟನಾ…

*ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*

ಆಗಷ್ಟ್ 6, 2026

*ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*

ಆಗಷ್ಟ್ 6, 2026

*ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸೆ.9 ರಂದು ಸಿಎನ್‌ಸಿ ಸತ್ಯಾಗ್ರಹ*

ಆಗಷ್ಟ್ 6, 2026

**ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ**

ಆಗಷ್ಟ್ 6, 2026

*ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*

ಆಗಷ್ಟ್ 6, 2026

*ಐದು ವರ್ಷ ಕಳೆದರೂ ದರೋಡೆ ಪ್ರಕರಣ ಭೇದಿಸದ ಪೊಲೀಸರು : ಸರೋಜಿನಿ ಕಣ್ಣೀರು*

ಆಗಷ್ಟ್ 6, 2026

*ಆ.12 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಆಗಷ್ಟ್ 5, 2026

ಹಾರಂಗಿ ಜಲಾಶಯಕ್ಕೆ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಭೇಟಿ : ಪರಿಶೀಲನೆ

ಆಗಷ್ಟ್ 5, 2026

*ಕೊಡಗಿನಲ್ಲಿ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ

ಆಗಷ್ಟ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.