
ಮಡಿಕೇರಿ ಆ.8 NEWS DESK : ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ನಗರದ ಪತ್ರಿಕಾಭವನ ಸಭಾಂಗಣದಲ್ಲಿ ನಡೆದು, ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ಆಯೋಜಿತ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಅತ್ಯುತ್ತಮ ಉದ್ಯಮಕ್ಕಾಗಿನ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ತಮಿಳು ಪತ್ರಕರ್ತರ ಸಂಘದ ಪ್ರಶಸ್ತಿಗೆ ಭಾಜನರಾದ ಎಸ್.ಎಂ.ಮುಬಾರಕ್, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಭಾಜನರಾಗಿದ್ದ ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಸಿ. ದಿನೇಶ್, ಎನ್ಎಸ್ಎಸ್ ಸಂಸ್ಥೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಡಾ. ಎಂ.ಎನ್.ವನಿತ್ ಕುಮಾರ್ ಹಾಗೂ ಬುದ್ಧ ನಾಡಭೂಣ ಪ್ರಶಸ್ತಿಗೆ ಭಾಜನರಾದ ಜಯಪ್ಪ ಹಾನಗಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಾಧಕರ ಸನ್ಮಾನವನ್ನು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ., ಸಂಘದ ಸಲಹೆಗಾರರಾದ ಟಿ.ಪಿ.ರಮೇಶ್, ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿಗಳಾದ ಎಂ.ಪಿ.ಕೇಶವ ಕಾಮತ್, ಸಂಘದ ಸ್ಥಾಪಕಾಧ್ಯಕ್ಷ ಎಸ್.ಎ. ಮುರಳೀಧರ್ ಸೇರಿದಂತೆ ಸಂಘದ ಪದಾಧಿಕಾರಿಗಳು ನಡೆಸಿಕೊಟ್ಟರು. ಗುರುತಿನ ಚೀಟಿ ವಿತರಣೆ :2026-27ನೇ ಸಾಲಿಗೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಕೊಡಗು ಪತ್ತಕರ್ತರ ಸಂಘದ ಸದಸ್ಯರಿಗೆ ಗುರುತಿನ ಚೀಟಿಗಳನ್ನು ಇದೇ ಸಂದರ್ಭ ಸಾಂಕೇತಿಕವಾಗಿ ವಿತರಿಸಲಾಯಿತು. ಸಭಾಧ್ಯಕ್ಷತೆ ವಹಿಸಿದ್ದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ಸಂಘದ “ಸ್ವಾಸ್ಥ್ಯ, ಸುಂದರ ಮತ್ತು ಸದೃಢ ಸಮಾಜ ನಿರ್ಮಾಣ” ಧ್ಯೇಯ ವಾಕ್ಯಕ್ಕೆ ಪೂರಕವಾಗಿ ಸಂಘ ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುವ ಮೂಲಕ ಜನ ಮನವನ್ನು ತಲುಪಿರುವ ತೃಪ್ತಿ ಇರುವುದಾಗಿ ತಿಳಿಸಿದರು. ವೇದಿಕೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಕೋಶಾಧಿಕಾರಿ ಟಿ.ಕೆ.ಸಂತೋಷ್, ಸಂಘದ ಕ್ಷೇಮಾಭಿವೃದ್ಧಿ ನಿಧಿಯ ಅಧ್ಯಕ್ಷರಾದ ಜಿ.ವಿ.ರವಿ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಕೂರ್ಗ್ ಉಪಸ್ಥಿತರಿದ್ದರು.ಪತ್ರಕರ್ತ ನವೀನ್ ಚಿಣ್ಣಪ್ಪ ಪ್ರಾರ್ಥಿಸಿ, ಉಪಾಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ ಸ್ವಾಗತಿಸಿದರು. ಅನಿಲ್, ವಿನೋದ್ ಮೂಡಗದ್ದೆ, ಸುನಿಲ್, ರವಿ ಕುಮಾರ್, ಪಿ.ಎಂ.ರವಿ ಸನ್ಮಾನಿತರನ್ನು ಪರಿಚಯಿಸಿದರು.










