Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.14 ರಂದು ನೇರ ಸಂದರ್ಶನ*
  • *ಬಿಲ್ಲವ ಸಮಾಜದ ಆಟಿಡೊಂಜಿ ದಿನಾಚರಣೆ : ಸಮುದಾಯ ಭವನಕ್ಕೆ ಶಂಕುಸ್ಥಾಪನೆ*
  • *ಮಡಿಕೇರಿಯಲ್ಲಿ ಗಮನ ಸೆಳೆದ ಕಕ್ಕಡ ನಮ್ಮೆ*
  • *ಕರವೇ ಮಡಿಕೇರಿ ತಾಲ್ಲೂಕು ಸಾಮಾನ್ಯ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
  • *ಜನತಾ ಕಾಲೋನಿಯಲ್ಲಿ ಎದೆಹಾಲಿನ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ*
  • *ಕೊಡಗು : ಕನ್ನಡ ನಾಡು-ನುಡಿ ಬಗ್ಗೆ ಅಭಿಮಾನವಿರಲಿ ; ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರವಾಸಿಗರ ಮಿನಿ ಬಸ್ ಪಲ್ಟಿ : ಸೋಮವಾರಪೇಟೆ ಬಳಿ ಘಟನೆ*
  • *ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*
  • *ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ*

ಆಗಷ್ಟ್ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.10 NEWS DESK : ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವು ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಆಲ್‍ಬೆಂಡಜೋಲ್ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಕ್ಕಳಲ್ಲಿನ ಅಪೌಷ್ಟಿಕತೆ ಹಾಗೂ ರಕ್ತಹೀನತೆ ತಡೆಯುವಲ್ಲಿ ಆಲ್‍ಬೆಂಡಜೋಲ್ ಮಾತ್ರೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಮಾತ್ರೆ ಕೊಡಿಸಬೇಕು ಎಂದರು. ದೇಶದಾಧ್ಯಂತ ಆಗಸ್ಟ್ 10 ರಂದು “ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ” ಹಾಗೂ ಆಗಸ್ಟ್ 17 ರಂದು ಮಾಪ್ ಆಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, 1-19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‍ಬೆಂಡಜೋಲ್- 400 ಎಂಜಿ ಮಾತ್ರೆ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ವಿವರಿಸಿದರು. ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವು 10 ಫೆಬ್ರವರಿ 2015ರಲ್ಲಿ ಪ್ರಾರಂಭ ಮಾಡಲಾಗಿದ್ದು, ಮೊದಲಿಗೆ 11 ರಾಜ್ಯಗಳಲ್ಲಿ ಇದನ್ನು ಜಾರಿಗೆ ತರಲಾಯಿತು. 2018 ಫೆಬ್ರವರಿಯಲ್ಲಿ ಈ ಕಾರ್ಯಕ್ರಮವನ್ನು 34 ರಾಜ್ಯಗಳಿಗೆ ವಿಸ್ತರಣೆ ಮಾಡಲಾಗಿದ್ದು, ಇದೀಗ 19 ನೇ ಸುತ್ತಿನ ಕಾರ್ಯಕ್ರಮವಾಗಿರುತ್ತದೆ ಎಂದು ತಿಳಿಸಿದರು. ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ 1-5 ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. 6-19 ವರ್ಷದ ಮಕ್ಕಳಿಗೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು 6-19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 1-2 ವರ್ಷದ ಮಕ್ಕಳಿಗೆ ಅರ್ಧ ಆಲ್‍ಬೆಂಡಜೋಲ್ ಮಾತ್ರೆ ಹಾಗೂ 2-19 ವರ್ಷದ ಮಕ್ಕಳಿಗೆ ಒಂದು ಆಲ್‍ಬೆಂಡಜೋಲ್ ಮಾತ್ರೆ ನೀಡಬೇಕಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸ್ವಚ್ಚ ಭಾರತ್ ಮಿಷನ್, ಪಂಚಾಯತ್ ರಾಜ್, ಮುನ್ಸಿಪಲ್  ಕಾರ್ಪೋರೇಷನ್ ಇಲಾಖೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಆರ್‌ಸಿಹೆಚ್ ಅಧಿಕಾರಿ ಡಾ.ಸನತ್ ಕುಮಾರ್ ಅವರು ಮಾತನಾಡಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ನಮ್ಮ ಜಿಲ್ಲೆಯಲ್ಲಿ 1-19 ವರ್ಷದೊಳಗಿನ ಮಕ್ಕಳ ಗುರಿ 1,20,874 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 23,634, ಅಂಗನವಾಡಿಯಿಂದ ಹೊರಗುಳಿದ ಮಕ್ಕಳು 955, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 80,506 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 9135, ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 3700, ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 473 ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು 2471 ಇರುತ್ತಾರೆ ಎಂದು ಮಾಹಿತಿ ನೀಡಿದರು. “ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ” ಹಾಗೂ ಆಗಸ್ಟ್ 17 ರಂದು ನಡೆಯುವ ಮಾಪ್‍ಆಪ್ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳು ಕೈಜೋಡಿಸಿ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನ ಮತ್ತು ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಆಲ್‍ಬೆಂಡಝಲ್ ಮಾತ್ರೆ ತೆಗೆದುಕೊಳ್ಳಲು ಪ್ರೋತ್ಸಾಹ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು. ಶಾಲಾ ಶಿಕ್ಷಣ ಇಲಾಖೆ ಡಿವೈಪಿಸಿ ಕೃಷ್ಣಪ್ಪ ಅವರು ಮಾತನಾಡಿದರು. ತಾಲ್ಲೂಕು ವೈದ್ಯಾಧಿಕಾರಿ ಸುನಿಲ್, ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಪಾಲಾಕ್ಷ, ದೇವರಾಜು, ದಿವಾಕರ, ಶಾಲೆಯ ಮುಖ್ಯೋಪಾಧ್ಯಯರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.14 ರಂದು ನೇರ ಸಂದರ್ಶನ*

ಆಗಷ್ಟ್ 10, 2026

*ಬಿಲ್ಲವ ಸಮಾಜದ ಆಟಿಡೊಂಜಿ ದಿನಾಚರಣೆ : ಸಮುದಾಯ ಭವನಕ್ಕೆ ಶಂಕುಸ್ಥಾಪನೆ*

ಆಗಷ್ಟ್ 10, 2026

*ಮಡಿಕೇರಿಯಲ್ಲಿ ಗಮನ ಸೆಳೆದ ಕಕ್ಕಡ ನಮ್ಮೆ*

ಆಗಷ್ಟ್ 10, 2026

*ಬಿಲ್ಲವ ಸಮಾಜದ ಆಟಿಡೊಂಜಿ ದಿನಾಚರಣೆ : ಸಮುದಾಯ ಭವನಕ್ಕೆ ಶಂಕುಸ್ಥಾಪನೆ*

ಆಗಷ್ಟ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು ಆ.10 NEWS DESK : ನಮ್ಮ ಆಚಾರ–ವಿಚಾರ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮೂಲಕ ಮಕ್ಕಳಲ್ಲಿ…

*ಮಡಿಕೇರಿಯಲ್ಲಿ ಗಮನ ಸೆಳೆದ ಕಕ್ಕಡ ನಮ್ಮೆ*

ಆಗಷ್ಟ್ 10, 2026

*ಕರವೇ ಮಡಿಕೇರಿ ತಾಲ್ಲೂಕು ಸಾಮಾನ್ಯ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ*

ಆಗಷ್ಟ್ 10, 2026

*ಜನತಾ ಕಾಲೋನಿಯಲ್ಲಿ ಎದೆಹಾಲಿನ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮ*

ಆಗಷ್ಟ್ 10, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ*

ಆಗಷ್ಟ್ 10, 2026

*ಕೊಡಗು : ಕನ್ನಡ ನಾಡು-ನುಡಿ ಬಗ್ಗೆ ಅಭಿಮಾನವಿರಲಿ ; ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 10, 2026

*ಪ್ರವಾಸಿಗರ ಮಿನಿ ಬಸ್ ಪಲ್ಟಿ : ಸೋಮವಾರಪೇಟೆ ಬಳಿ ಘಟನೆ*

ಆಗಷ್ಟ್ 10, 2026

*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*

ಆಗಷ್ಟ್ 10, 2026

*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*

ಆಗಷ್ಟ್ 10, 2026

*ಕಾರ್ಪೋರೇಟ್ ಸಂಸ್ಕೃತಿಗೆ ಉತ್ತೇಜನ : ಕಾರ್ಮಿಕ ಸಂಘಟನೆಗಳಿoದ ಪ್ರತಿಭಟನೆ*

ಆಗಷ್ಟ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.