
ಮಡಿಕೇರಿ NEWS DESK ಆ.12 : ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಇವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನ ನೀಡಿ ಸರಕಾರದ ವಿಶೇಷ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ಆದೇಶಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದ ಎ.ಎಸ್.ಪೊನ್ನಣ ಅವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರಕಾರದಲ್ಲಿ ವಿಧಾನಸಭೆಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಈ ಹುದ್ದೆಯ ಬಗ್ಗೆ ಪೊನ್ನಣ್ಣ ಅವರಿಗೆ ಆಸಕ್ತಿ ಇಲ್ಲದ ಕಾರಣ ಮತ್ತು ಕಾರ್ಯಕರ್ತರ ವಿರೋಧದ ಹಿನ್ನೆಲೆಯಲ್ಲಿ ಇದೀಗ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.









