
ಮಡಿಕೇರಿ, ಆ.14 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಆಗಸ್ಟ್ 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿರುವ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.









