Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*
  • *ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ, ವಿಶೇಷ ಪೂಜೆ*
  • *ಭಾಗಮಂಡಲ : ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್*
  • *ಮಡಿಕೇರಿ : ಮೊಹಮ್ಮದ್ ನಲಪ್ಪಾಡ್ ವಿವಾಹದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್*
  • *ಮಡಿಕೇರಿಯಲ್ಲಿ ಎಸ್.ಜಾನಕಿ ಗೀತ ನಮನ* 
  • *ಕೊಡಗು ಸೇರಿದಂತೆ 6 ಜಿಲ್ಲೆಗಳನ್ನು “ಲಾಯಲ್ ಪ್ರವಾಸೋದ್ಯಮ ಕೇಂದ್ರ”ವನ್ನಾಗಿ ಪರಿವರ್ತಿಸಿ*
  • *ಕೊಡಗು ಸೈನಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*
  • *ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*
  • *ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*
  • *ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಸೇರಿದಂತೆ 6 ಜಿಲ್ಲೆಗಳನ್ನು “ಲಾಯಲ್ ಪ್ರವಾಸೋದ್ಯಮ ಕೇಂದ್ರ”ವನ್ನಾಗಿ ಪರಿವರ್ತಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಸೇರಿದಂತೆ 6 ಜಿಲ್ಲೆಗಳನ್ನು “ಲಾಯಲ್ ಪ್ರವಾಸೋದ್ಯಮ ಕೇಂದ್ರ”ವನ್ನಾಗಿ ಪರಿವರ್ತಿಸಿ*

ಆಗಷ್ಟ್ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.16 : ವಿಶಿಷ್ಟ ಸಂಸ್ಕೃತಿಯ ಕೊಡಗು, ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳನ್ನು “ಲಾಯಲ್ ಪ್ರವಾಸೋದ್ಯಮ ಕೇಂದ್ರ”ವನ್ನಾಗಿ ಪರಿವರ್ತಿಸಿ, ಪ್ರವಾಸೋದ್ಯಮದ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮಾಜಿ ಸಚಿವ ಅಡಗೂರು ಹೆಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ. ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮದ ಮೂಲಕ 6 ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು ಮತ್ತು ಉದ್ಯೋಗಾವಕಾಶವನ್ನು ಸೃಷ್ಟಿಸಬೇಕು ಎಂದರು. ಮೈಸೂರು ಅರಮನೆ ಮತ್ತು ಅಲ್ಲಿನ ಸಂಸ್ಕೃತಿ ಪರಂಪರೆಗಳು ವಿಶ್ವ ಪ್ರಸಿದ್ಧಿಯನ್ನು ಪಡೆದಿದೆ. ಅಂತಹ ಅರಮನೆ ಪ್ರಸ್ತುತ ಕೇವಲ ದಸರ ಉತ್ಸವಕ್ಕೆ ಮಾತ್ರ ಸೀಮಿತವಾಗಿರುವುದು ಬೇಸರದ ವಿಚಾರ. ಈ ಹಿನ್ನೆಲೆ ಸೂಚಿತ ಎಲ್ಲಾ ಜಿಲ್ಲೆಗಳನ್ನು ಒಳಗೊಂಡ ಲಾಯಲ್ ಪ್ರವಾಸೋದ್ಯಮ ಕೇಂದ್ರದ ಬಗ್ಗೆ 2013ರ ಆಯವ್ಯಯದಲ್ಲೆ ಪ್ರಸ್ತಾಪವಾಗಿತ್ತು. ಆದರೆ ಇದು ಇಲ್ಲಿಯವರೆಗೆ ಜಾರಿಗೆ ಬಂದಿಲ್ಲವೆAದು ಬೇಸರ ವ್ಯಕ್ತಪಡಿಸಿದರು. ಸುಂದರ ಪರಿಸರ, ಸಂಸ್ಕೃತಿಯನ್ನು ಹೊಂದಿರುವ ಕೊಡಗು ಜಿಲ್ಲೆಯನ್ನು ಒಳಗೊಂಡ 6 ಜಿಲ್ಲೆಗಳಲ್ಲಿನ ಪ್ರವಾಸೋದ್ಯಮದ ಬೆಳವಣಿಗೆಯನ್ನು ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗಂಭೀರವಾಗಿ ಪರಿಗಣಿಸಬೇಕು. ಕೊಡಗಿನ ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಸ್ಥಳೀಯ ಚೇಂಬರ್ ಆಫ್ ಕಾಮರ್ಸ್, ಹೊಟೇಲ್ ಮಾಲೀಕರುಗಳು ಹಾಗೂ ವಾಣಿಜ್ಯೋದ್ಯಮಿಗಳು ಗಮನ ಸೆಳೆೆದು ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದರು. ಕೊಡಗು ಜಿಲ್ಲೆ ಪ್ರವಾಸೋದ್ಯಮ ಕೇಂದ್ರವೇ ಆಗಿದೆ, ಹಲವಾರು ದೇಶಗಳ ಆರ್ಥಿಕತೆ ಪ್ರವಾಸೋದ್ಯಮವನ್ನೇ ಅವಲಂಬಿಸಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಪ್ರವಾಸೋದ್ಯಮ ಸಾಧ್ಯತೆಗಳಿಗೆ ಹೆಚ್ಚಿನÀ ಒತ್ತು ನೀಡಿ ಅಭಿವೃದ್ಧಿ ಪಡಿಸುವತ್ತ ಸರಕಾರ ಆಸಕ್ತವಾಗಬೇಕೆಂದು ಹೆಚ್.ವಿಶ್ವನಾಥ್ ತಿಳಿಸಿದರು. *ಮನೆ ಕಟ್ಟಿದ ಡಿಕೆಶಿ* ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಮುಖ್ಯಮಂತ್ರಿಗಳಾಗಿದ್ದಾರೆ. ಹಿಂದೆ ಇದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಕಟ್ಟಿದ ಮನೆಗೆ ಬಂದು ಸೇರಿದವರಾದರೆ, ಡಿ.ಕೆ.ಶಿವಕುಮಾರ್ ಅವರು ಮನೆ ಕಟ್ಟಿ ಬಂದವರೆoದು” ಹೇಳಿದರು. ರಾಜಕೀಯ ಪಕ್ಷವನ್ನು ಕಾರ್ಯಕರ್ತರು ಕಟ್ಟಿ ಬೆಳೆÉಸಿ ಅಧಿಕಾರಕ್ಕೆ ತರುತ್ತಾರೆ, ಅಧಿಕಾರ ಪಡೆದ ಪಕ್ಷದ ಮುಖಂಡರು ಕಾಯಕರ್ತರ ಶ್ರಮವನ್ನು ಮೀರಿ ಪಕ್ಷವನ್ನು ಹಾಳು ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು ಮುಂದೆ ನಾನು ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಬೇಕಾದರೆ ಕನಿಷ್ಠ 25 ರಿಂದ 30 ಕೋಟಿ ರೂ. ಬೇಕಾಗುತ್ತದೆ. ಇಡೀ ನನ್ನ ಆಸ್ತಿ ಮಾರಾಟ ಮಾಡಿದರೂ ಇಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸಲು ಸಾಧ್ಯವಿಲ್ಲ. ಆದ್ದರಿಂದ ಚುನಾವಣಾ ರಾಜಕೀಯದಿಂದ ದೂರು ಉಳಿದುಕೊಂಡೇ ರಾಜಕಾರಣ ಮಾಡುವೆ ಎಂದು ಹೆಚ್.ವಿಶ್ವನಾಥ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ವಿಶ್ವನಾಥ್ ಅವರ ಬೆಂಬಲಿಗ, ಕೊಡಗಿನ ರಾಜಕಾರಣಿ ಕೆ.ಎಂ.ಗಣೇಶ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*

ಆಗಷ್ಟ್ 16, 2026

*ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ, ವಿಶೇಷ ಪೂಜೆ*

ಆಗಷ್ಟ್ 16, 2026

*ಭಾಗಮಂಡಲ : ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್*

ಆಗಷ್ಟ್ 16, 2026

*ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ, ವಿಶೇಷ ಪೂಜೆ*

ಆಗಷ್ಟ್ 16, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.16 : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಅವರ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಪುಣ್ಯಕ್ಷೇತ್ರ…

*ಭಾಗಮಂಡಲ : ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್*

ಆಗಷ್ಟ್ 16, 2026

*ಮಡಿಕೇರಿ : ಮೊಹಮ್ಮದ್ ನಲಪ್ಪಾಡ್ ವಿವಾಹದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್*

ಆಗಷ್ಟ್ 16, 2026

*ಮಡಿಕೇರಿಯಲ್ಲಿ ಎಸ್.ಜಾನಕಿ ಗೀತ ನಮನ* 

ಆಗಷ್ಟ್ 16, 2026

*ಕೊಡಗು ಸೇರಿದಂತೆ 6 ಜಿಲ್ಲೆಗಳನ್ನು “ಲಾಯಲ್ ಪ್ರವಾಸೋದ್ಯಮ ಕೇಂದ್ರ”ವನ್ನಾಗಿ ಪರಿವರ್ತಿಸಿ*

ಆಗಷ್ಟ್ 16, 2026

*ಕೊಡಗು ಸೈನಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*

ಆಗಷ್ಟ್ 15, 2026

*ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*

ಆಗಷ್ಟ್ 15, 2026

*ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*

ಆಗಷ್ಟ್ 15, 2026

*ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ*

ಆಗಷ್ಟ್ 15, 2026

*ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು*

ಆಗಷ್ಟ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.