Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
  • *ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
  • *ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*
  • *ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*
  • *ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
  • *ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.18 : ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಮಿತಿ ಮೀರಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿವೆ. ಅರಣ್ಯ ಇಲಾಖೆಯಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಣ್ಣೊರೆಸುವ ತಂತ್ರಗಾರಿಕೆ ನಡೆಯುತ್ತಿದೆಯೇ ಹೊರತು ಶಾಶ್ವತ ಪರಿಹಾರದ ಯಾವುದೇ ಆಸಕ್ತಿ ಕಂಡು ಬರುತ್ತಿಲ್ಲವೆಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ಕಾಡಾನೆಗಳ ದಾಳಿಯಾಗುತ್ತಿದ್ದು, ಇಡೀ ಕೊಡಗು ಜಿಲ್ಲೆಯೇ ಆತಂಕದಲ್ಲಿದೆ. ಪರಿಸ್ಥಿತಿ ಇಷ್ಟು ಗಂಭೀರವಾಗಿದ್ದರೂ ರಾಜ್ಯ ಸರಕಾರ ಮಾತ್ರ ನಿದ್ರಾವಸ್ಥೆಯಲ್ಲಿದೆ ಎಂದು ಟೀಕಿಸಿದ್ದಾರೆ.
ಕಾಡಾನೆಗಳು ಎಲ್ಲಿ, ಯಾವಾಗ ಬೇಕಾದರೂ ದಾಳಿ ಮಾಡಬಹುದಾಗಿದೆ. ಜನನಿಬಿಡ ಪ್ರದೇಶದಲ್ಲಿ, ಹೆದ್ದಾರಿಗಳಲ್ಲಿ ರಾತ್ರಿ ಹಗಲೆನ್ನದೆ ಆನೆಗಳು ಸಂಚರಿಸುತ್ತಿದ್ದು, ಯಾವಾಗ ಬೇಕಾದರೂ ದಾಳಿ ಮಾಡಬಹುದಾಗಿದೆ. ಯಾರೂ ಸುರಕ್ಷಿತವಾಗಿಲ್ಲ ಎನ್ನುವ ಭಯ ಆವರಿಸಿದೆ. ಹಿಂಡು ಹಿಂಡಾಗಿ ತೋಟಗಳಲ್ಲಿ ಆಶ್ರಯ ಪಡೆದಿರುವ ಕಾಡಾನೆಗಳ ದಾಳಿಯಿಂದ ಇತ್ತೀಚೆಗೆ ಅನೇಕ ಜೀವಗಳು ಬಲಿಯಾಗಿವೆ. ಅಮಾಯಕರು ಮೃತಪಟ್ಟಾಗ ಪ್ರತಿಭಟನೆಗೆ ಮಣಿಯುವ ಅರಣ್ಯ ಇಲಾಖೆ ಪುಂಡಾನೆಯನ್ನು ಸೆರೆ ಹಿಡಿಯುವ ನಾಟಕವಾಡುತ್ತಿದೆಯೇ ಹೊರತು ಶಾಶ್ವತ ಪರಿಹಾರದ ವೈಜ್ಞಾನಿಕ ರೂಪು ರೇಷೆಗಳನ್ನು ಸಿದ್ಧಪಡಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಒಂದೆರಡು ಆನೆಗಳನ್ನು ಸೆರೆ ಹಿಡಿದಾಕ್ಷಣ ಸಮಸ್ಯೆ ಬಗೆಹರಿಯಿತು ಎಂದು ಭಾವಿಸುವ ಸರಕಾರದ ನಡೆ ಹಾಸ್ಯಾಸ್ಪದವಾಗಿದೆ. ನೂರಾರು ಕಾಡಾನೆಗಳು ಕೃಷಿ ಪ್ರದೇಶದಲ್ಲಿ ಆಶ್ರಯ ಪಡೆದಿರುವಾಗ ಇವುಗಳಲ್ಲಿ ಪುಂಡಾನೆ ಯಾವುದು ಎಂದು ಗುರುತಿಸುವುದಾರೂ ಹೇಗೆ, ಮಾನವ ಜೀವ ಬಲಿ ಪಡೆದ ನಂತರವಷ್ಟೇ ಇದು ಪುಂಡಾನೆ ಎಂದು ಗುರುತಿಸುವ ಕಾರ್ಯದಲ್ಲಿ ಅರಣ್ಯ ಇಲಾಖೆ ತೊಡಗಿದೆಯೇ, ಅರಣ್ಯ ಅಧಿಕಾರಿಗಳು ಹವಾನಿಯಂತ್ರಿತ ಕೊಠಡಿಯಿಂದ ಹೊರ ಬರಬೇಕಾದರೆ ಮಾನವ ಜೀವಹಾನಿಯಾಗಲೇ ಬೇಕೆ ಎಂದು ಕಂಠಿ ಕಾರ್ಯಪ್ಪ ಪ್ರಶ್ನಿಸಿದ್ದಾರೆ.
ಕಾಡಾನೆಗಳ ಸೆರೆ ಕಾರ್ಯಾಚರಣೆಗೆ ಲಕ್ಷಾಂತರ ಹಣವನ್ನು ಅರಣ್ಯ ಇಲಾಖೆ ವ್ಯಯಿಸುತ್ತಿದ್ದು, ಇದು ಜನರ ತೆರಿಗೆ ಹಣವಾಗಿದೆ. ಈ ರೀತಿಯ ಕಣ್ಣೊರೆಸುವ ತಂತ್ರಗಾರಿಕೆಯ ಕಾರ್ಯಾಚರಣೆಯ ಮೂಲಕ ಜನರ ಹಣ ದುಂದುವೆಚ್ಚ ಮಾಡದೆ ಶಾಶ್ವತ ಪರಿಹಾರ ರೂಪಿಸಲು ಅರಣ್ಯ ಇಲಾಖೆ ಮುಂದಾಗಬೇಕು. ಜಿಲ್ಲೆಯ ಇಬ್ಬರು ಶಾಸಕರುಗಳಿಗೆ ಜಿಲ್ಲೆ ಮತ್ತು ಇಲ್ಲಿನ ಜನರ ಬಗ್ಗೆ ನೈಜ ಕಾಳಜಿ ಇದ್ದರೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೊಡಗಿನಲ್ಲೇ ಅರಣ್ಯ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸಲಿ ಎಂದು ಒತ್ತಾಯಿಸಿದ್ದಾರೆ. ಕಾಡಾನೆಗಳ ದಾಳಿಯಂತಹ ಘಟನೆಗಳು ಪ್ರವಾಸೋದ್ಯಮದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಬಹುದು. ಅಲ್ಲದೆ, ತೋಟಗಳಿಗೆ ಕಾರ್ಮಿಕರು ಬಾರದೆ ಕೃಷಿ ಚಟುವಟಿಕೆಗೂ ಹಿನ್ನಡೆಯಾಗಬಹುದು. ಪರಿಸ್ಥಿತಿ ಕೈಮೀರುವ ಮೊದಲು ಸರಕಾರ ಎಚ್ಚೆತ್ತುಕೊಳ್ಳಬೇಕು ಎಂದು ಕಂಠಿ ಕಾರ್ಯಪ್ಪ ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.18 NEWS DESK : ಕಾವೇರಿ ಕ್ಷೇತ್ರ ಭಾಗಮಂಡಲದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅªರಿಗೆ ಸೇರಿದ ಗದ್ದೆಯಲ್ಲಿ…

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 2026

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.