Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಆ.22 : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ರಾಜಕೀಯ ವಿದ್ಯಮಾನಗಳು, ಅಭಿವೃದ್ಧಿ ಕಾರ್ಯ, ಕೊಡಗಿನ ಸಮಸ್ಯೆಗಳು, ಜನರಲ್ಲಿರುವ ಗೊಂದಲಗಳು ಹೀಗೆ ನಾನಾ ವಿಷಯಗಳ ಬಗ್ಗೆ ಸಂವಾದದಲ್ಲಿ ಬೆಳಕು ಚೆಲ್ಲಲಾಯಿತು.
ಸಚಿವ ಸ್ಥಾನದಿಂದ ವಂಚಿತಗೊಂಡ ಕುರಿತು ಪ್ರತಿಕ್ರಿಯಿಸಿದ ಪೊನ್ನಣ್ಣ ಅವರು, ಹಲವು ವರ್ಷಗಳ ಹಿಂದೆ ಕೊಡಗಿನ ಮೂವರು ಸಚಿವರಾಗಿದ್ದರು. ನಂತರ ದೀರ್ಘಾವಧಿಗೆ ಸಚಿವ ಭಾಗ್ಯ ಜಿಲ್ಲೆಗೆ ದೊರೆತ್ತಿಲ್ಲ‌ ಇದರ ಹಿಂದೆ ರಾಜಕೀಯ ಲೆಕ್ಕಾಚಾರವೂ ಆಡಗಿದೆ. ಹಲವು ಕ್ಷೇತ್ರಗಳನ್ನೊಳಗಂಡ ಜಿಲ್ಲೆ, ಜಾತಿ ಪ್ರಾತಿನಿಧ್ಯ ಹೀಗೆ ನಾನಾ ವಿಷಯದಡಿ ಸಚಿವ ಸ್ಥಾನ ನಿರ್ಧಾರವಾಗುತ್ತದೆ. ಈ ನಡುವೆ ತನಗೆ ಮಂತ್ರಿ ಸ್ಥಾನ ಸಿಗುವ ವಿಶ್ವಾಸವಿತ್ತು. ಇದಕ್ಕಾಗಿ 2 ಶರ್ಟ್ ಗಳನ್ನು ಕೂಡ ಆಯ್ಕೆ ಮಾಡಿಟ್ಟುಕೊಂಡಿದೆ‌. ಕೆಲವೇ ಕ್ಷಣಗಳಲ್ಲಿ ಸಚಿವ ಸ್ಥಾನ ಕೈತಪ್ಪಿದ ವಿಚಾರ ತಿಳಿದು ಬಂತು. ಆದರೆ, ಉಪಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಆಶ್ಚರ್ಯ ಮೂಡಿಸಿತು. ಇದೊಂದು ಸಂವಿಧಾನಾತ್ಮಕ, ಗೌರವನ್ವಿತ ಹಾಗೂ ದೊಡ್ಡ ಜವಾಬ್ದಾರಿ ಹೊಂದಿರುವ ಹುದ್ದೆಯಾಗಿದೆ. ಆದರೆ, ಈ ಹುದ್ದೆಯಲ್ಲಿದ್ದಾರೆ ಕೆಲವೊಂದು ಪರಿಮಿತಿಗೊಳಪಟ್ಟಿರಬೇಕಾಗುತ್ತದೆ. ಮುಖ್ಯಮಂತ್ರಿ ಡಿ.ಕೆ‌. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ನನ್ನನ್ನು ಕಾನೂನು ಘಟಕದ ಅಧ್ಯಕ್ಷರನ್ನಾಗಿ ಮಾಡಿದ್ದರು. ನನ್ನನ್ನು ರಾಜಕೀಯವಾಗಿ ಬಳಸಿಕೊಳ್ಳಬೇಕೆಂಬುದು ಅವರ ಆಸೆಯಾಗಿತ್ತು. ಈ ಹಿನ್ನೆಲೆ ತನಗೆ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿದ್ದಾರೆ. ಸಚಿವ ಸ್ಥಾನಕ್ಕೆ ತನ್ನ ಹೆಸರನ್ಬು ಪರಿಗಣಿಸಿದ್ದೆ ಹೆಮ್ಮೆ ತಂದಿದೆ‌. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರಕಾರ ಹಲವು ಬಾರಿ ತಿರಸ್ಕರಿಸಿದ್ದು, ಇದೀಗ ಮತ್ತೊಮ್ಮೆ ಕರಡು ಅಧಿಸೂಚನೆಯನ್ನು ತಿರಸ್ಕಾರ ಮಾಡಿದೆ. ಕೊಡಗಿನ ಗ್ರಾಮಗಳನ್ನು ಸೇರಿಸಿರುವುದು ಸಹಜವಾಗಿ ಆತಂಕ ಮೂಡಿಸುತ್ತದೆ‌. ಪರಿಸರ ಸಂರಕ್ಷಣೆಯೊಂದಿಗೆ ಜನರ ಹಿತಾಸಕ್ತಿ ಕಾಪಾಡುವುದು ಕೂಡ ಸರಕಾರದ ಕರ್ತವ್ಯವಾಗಿದೆ ಎಂದು ಪೊನ್ನಣ್ಣ ಅಭಿಮತ ವ್ಯಕ್ತಪಡಿಸಿದರು.
ಪರಿಸರ ಹಾಗೂ ಪಶ್ಚಿಮಘಟ್ಟ ಖಂಡಿತವಾಗಿಯೂ ಸಂರಕ್ಷಣೆಯಾಗಲೇ ಬೇಕು‌ ಇದು ರಕ್ಷಣೆಯಾದರೆ ಮಾತ್ರ ದೇಶ ಉಳಿಯುತ್ತದೆ.ನೈಸರ್ಗಿಕ ಸಮತೋಲನ ಕಾಯ್ದುಕೊಳ್ಳಬಹುದಾಗಿದೆ‌. ಈ ವಿಷಯದಲ್ಲಿ ಪರ-ವಿರೋಧದೊಂದಿಗೆ ವಾಸ್ತವಾಂಶವನ್ನು ತಿಳಿದುಕೊಳ್ಳಬೇಕಾಗಿದೆ. ವರದಿ ಜಾರಿಯಿಂದ ಗ್ರಾಮೀಣ ಭಾಗದ ಜನಜೀವನ, ಕೃಷಿ ಚಟುವಟಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈಗಾಗಲೇ ಅರಣ್ಯ ಇಲಾಖೆಯಿಂದ ಅನೇಕ ಕಡಿವಾಣಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಕರಡು ಅಧಿಸೂಚನೆಯನ್ನು ಒಪ್ಪಲಾಗುವುದಿಲ್ಲ. ಕೇಂದ್ರ ಸರಕಾರ ಈಗಾಗಲೇ ಕರಡು ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಯಾವುದಕ್ಕೆ ನಿರ್ಬಂಧ ಹೇರಲಾಗುವುದು ಎಂಬುದನ್ನು ಸ್ಪಷ್ಟಪಡಿಸಲಿ. ಗಣಿಗಾರಿಕೆ, ಕ್ವಾರಿ, ಐಷಾರಾಮಿ ರೆಸಾರ್ಟ್ ಗಳನ್ನು ಬಂದ್ ಮಾಡಲ್ಲಿ ಅದಕ್ಕೆ ನಮ್ಮ ವಿರೋಧವಿಲ್ಲ ಎಂದು ಹೇಳಿದ ಅವರು, ಕೃಷಿ ಚಟುವಟಿಕೆ ಸಂಬಂಧ ಬಾವಿ ನಿರ್ಮಾಣ, ಮರ ಕಪಾತ್ ನಂತಹ ಚುವಟಿಕೆಗಳಿಗೆ ನಿರ್ಬಂಧ ಹೇರುವುದನ್ನು ಒಪ್ಪಲಾಗುವುದಿಲ್ಲ ಎಂದರು.
ವನ್ಯಜೀವಿ-ಮಾನವ ಸಂಘರ್ಷವನ್ನು ತಡೆಯುವ ಕೆಲಸವಾಗುತ್ತಿದ್ದು, ಮತ್ತಷ್ಟು ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಆ. 28ಕ್ಕೆ ಅರಣ್ಯ ಸಚಿವರೇ ಜಿಲ್ಲೆಗೆ ಆಗಮಿಸಲಿದ್ದು, ಜನರು ಹಾಗೂ ಬಾಧಿತರೊಂದಿಗೆ ಸಮಾಲೋಚಿಸಲು ಮುಕ್ತ ಅವಕಾಶ ಕಲ್ಪಿಸಲಾಗುವುದು. ಸಭೆ ನಡೆಸಿ ಪರಿಹಾರದ ಬಗ್ಗೆ ಚರ್ಚಿಸಲಾಗುವುದು. ಈಗಾಗಲೇ ಕಾಡಾನೆ ಕಾರ್ಯಾಚರಣೆ ಕೈಗೊಂಡು 2 ಆನೆಗಳನ್ನು ಸೆರೆಹಿಡಿಯಲಾಗಿದೆ‌. ಆದರೆ, ಮತ್ತೇ ಅದನ್ನು ಕಾಡಿಗೆ ಬಿಟ್ಟರೆ ಮರಳಿ ತೋಟಗಳಿಗೆ ಲಗ್ಗೆಯಿಡುತ್ತವೆ. ಈ ಹಿನ್ನೆಲೆ ಕಲವೊಂದು ವ್ಯವಸ್ಥಿತ ಕ್ರಮಗಳ ಅಗತ್ಯವಿದೆ ಎಂದು ಪೊನ್ನಣ್ಣ ಅಭಿಪ್ರಾಯಿಸಿದರು.
ಕೊಡಗಿನಲ್ಲಿ ದುಬಾರೆ ಮತ್ತು ಮತ್ತಿಗೋಡಿನಲ್ಲಿ ಮಾತ್ರ ಸಾಕಾನೆ ಶಿಬಿರಗಳಿದ್ದು, ಸೆರೆಯಾದ ಆನೆಯನ್ನು ದುಬಾರೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲಿರುವ ಕ್ರಾಲ್ ಗಳ ಸಂಖ್ಯೆ ಹೆಚ್ಚಾಗಬೇಕು. ವ್ಯವಸ್ಥೆಗಳನ್ನು ಬಲಪಡಿಸಬೇಕಾಗಿದೆ. ಅಲ್ಲದೆ ಈ ಹಿಂದಿನ ಅರಣ್ಯ ಸಚಿವರು ಕಾಡಾನೆಯನ್ನು ಸಾಫ್ಟ್ ಲಾಂಚ್ ಮಾಡುವ ಸಂಬಂಧ ಯೋಜನೆ ರೂಪಿಸಿದ್ದರು. ಅದು ಲಾಭದಾಯಕವಾಗಿದ್ದರೆ ಯೋಜನೆ ಅನುಷ್ಠಾನಕ್ಕೂ ಪ್ರಯತ್ನಿಸಲಾಗುವುದು. ರೈಲ್ವೆ ಬ್ಯಾರಿಕೇಡ್, ಕಂದಕ, ಸೋಲಾರ್ ಬೇಲಿ ಸೇರಿದಂತೆ ಹಂತಹಂತವಾಗಿ ಕಾರ್ಯಕ್ರಮ ಹಮ್ಮಿಕೊಂಡು ಕಾಡಾನೆ ಹಾವಳಿ ನಿಯಂತ್ರಣಕ್ಕೆ ಪ್ರಯತ್ನಿಸಲಾಗುತ್ತಿದೆ. ಕಾಡಾನೆ ಕಡಿಮೆ ಇರುವ ರಾಜ್ಯಗಳಿಗೂ ಅನೆಗಳನ್ನು ಹಸ್ತಾಂತರಿಸಬಹುದಾಗಿದೆ ಎಂದ ಅವರು, ಉಸ್ತುವಾರಿ ಸಚಿವರ ಮೂಲಕ ಮಾಜಿ ಶಾಸಕರಿಗೆ ಸಭೆಗೆ ಆಹ್ವಾನ ನೀಡಲಾಗುವುದು ಎಂದರು.
ಪ್ರಾಜೆಕ್ಟ್ ಎಲಿಫೆಂಟ್ ಯೋಜನೆ ಇದ್ದು, ಅದರ ಮೂಲಕ ಒಂದು ರೂಪಾಯಿ ಅನುದಾನವೂ ಬಂದಿಲ್ಲ. ಇಂತಹ ವಿಚಾರದಲ್ಲಿ ಪಕ್ಷಾತೀತವಾಗಿ ಕೈಜೋಡಿಸಿ ಪರಿಹಾರೋಪಾಯಕ್ಕೆ ಬೆಂಬಲ ನೀಡಬೇಕು. ಪ್ರತಿಭಟನೆ ಮಾಡುವ ಬದಲು ಕೇಂದ್ರ ಸಚಿವರನ್ನು ಭೇಟಿಯಾಗಿ ಸಮಸ್ಯೆ ಪರಿಹಾರಕ್ಕೆ ವಿಪಕ್ಷ ಬಿಜೆಪಿ ಪ್ರಯತ್ನಿಸಬೇಕೆಂದರು.
ಕೊಡಗಿನ ರಸ್ತೆ ಮೊದಲಿಗಿಂತ ಸುಧಾರಿಸಿದ್ದು, ಕೆಲವೊಂದು ರಸ್ತೆಗಳ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ಪೊನ್ನಣ್ಣ ಮಾಹಿತಿ ನೀಡಿದರು.
 ಭಾಗಮಂಡಲ ರಸ್ತೆ ಉತ್ತಮವಾಗಿ ನಿರ್ಮಾಣವಾಗಿದ್ದು, ವೀರಾಜಪೇಟೆ-ಮಡಿಕೇರಿ ಹಾಗೂ ನಾಪೋಕ್ಲು ರಸ್ತೆ ದುರಸ್ತಿಗೆ ಟೆಂಡರ್ ಆಗಿದೆ. ವೀರಾಜಪೇಟೆ ರಸ್ತೆ ನಿರ್ಮಾಣಕ್ಕೆ ರೂ. 40 ಕೋಟಿ ಅನುದಾನವೂ ಬಿಡುಗಡೆಯಾಗಿದೆ‌. ಗ್ರಾಮೀಣ ರಸ್ತೆಗಳು ದುರಸ್ತಿಯಾಗುತ್ತಿದ್ದು, ರಾಜಕೀಯ ಪ್ರಚಾರಕ್ಕಾಗಿ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಎಲ್ಲಾ ರಸ್ತೆಯೂ ಸರಿಯಾಗಿದೆ ಎಂದು ಹೇಳಲಾಗುವುದಿಲ್ಲ. ಆದರೆ, 3 ವರ್ಷಗಳಲ್ಲಿ ಗರಿಷ್ಠ ಪ್ರಮಾಣದ ಕೆಲಸವಾಗಿದೆ ಎಂದರು.
ವೀರಾಜಪೇಟೆ ಆಸ್ಪತ್ರೆ ಮೇಲ್ದರ್ಜೆಗೆ ಅನುಮೋದನೆಯಾಗಿದೆ. ವಿದ್ಯುತ್ ಜಾಲ ಬಲವರ್ಧನೆಗೊಳಿಸಲಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಪ್ರಯತ್ನವನ್ನು ಪ್ರಮಾಣಿಕವಾಗಿ ಮಾಡಲಾಗುವುದು ಎಂದು ಪೊನ್ನಣ್ಣ ಹೇಳಿದರು.
ಇದೇ ಸಂದರ್ಭ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಪೊನ್ನಣ್ಣ ಅವರನ್ನು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ಹಾಜರಿದ್ದರು.
ರಾಕೇಶ್ ಸ್ವಾಗತಿಸಿ, ಖಜಾಂಚಿ ಸುನಿಲ್ ಪೊನ್ನೇಟಿ ವಂದಿಸಿದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.