Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.23 : ಮಡಿಕೇರಿ ರೋಟರಿ ವತಿಯಿಂದ ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.
ಶಾಲೆಯ ಕಾರ್ಯದರ್ಶಿ ಪಿ.ಹರೀಶ್ ದೇವಯ್ಯ ಅವರ ನೇತೃತ್ವದಲ್ಲಿ ಕಾವೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ನ ಚೇರ್ ಮನ್ ರೊ. ಈರಮಂಡ ಹರಿಣಿ ವಿಜಯ್ ಅವರು ಇಂಟರ್ಯಾಕ್ಟ್ ಕ್ಲಬ್ ನ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಶಿಸ್ತು, ಜವಾಬ್ದಾರಿ ಹಾಗೂ ಆತ್ಮವಿಶ್ವಾಸ ಬೆಳೆಸುವಲ್ಲಿ ಕ್ಲಬ್ ಪ್ರಮುಖ ಪಾತ್ರ ವಹಿಸಲಿದೆ ಎಂದರು. ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್ ಎಸ್.ಡಿ. ಅವರು ಇಂಟರ್ಯಾಕ್ಟ್ ಕ್ಲಬ್ ಉದ್ಘಾಟಿಸಿ ಮಾತನಾಡಿ, ಕ್ಲಬ್ ನ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ, ತಂಡವಾಗಿ ಕೆಲಸ ಮಾಡುವ ಗುಣ, ಸಂವಹನ ಹಾಗೂ ನಿರ್ಧಾರ ಕೈಗೊಳ್ಳುವ ಕೌಶಲ್ಯಗಳು ವೃದ್ಧಿಯಾಗಲಿದೆ. ಸಮಾಜಸೇವೆ, ಪರಿಸರ ಸಂರಕ್ಷಣೆ ಹಾಗೂ ಮಾನವೀಯ ಮೌಲ್ಯಗಳ ಕುರಿತು ಅರಿವು ಮೂಡಲಿದೆ ಎಂದು ತಿಳಿಸಿದರು. ನೂತನ ಪದಾಧಿಕಾರಿಗಳ ಪದಗ್ರಹಣವನ್ನು ಇನ್ ಸ್ಟಲೇಶನ್ ಆಫೀಸರ್ ರೊ. ಈಶ್ವರ್ ಭಟ್ ನೆರವೇರಿಸಿದರು. ನೂತನ ಸಮಿತಿಗೆ ರೋಟರಿ ಬ್ಯಾಡ್ಜ್ ಗಳನ್ನು ವಿತರಿಸಿ ಪ್ರಮಾಣ ವಚನ ಬೋಧಿಸಿದರು. ರೋಟರಿಯಂತಹ ಸೇವಾ ಸಂಸ್ಥೆಗಳೊ0ದಿಗೆ ಕೈಜೋಡಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ, ಶಿಸ್ತು ಹಾಗೂ ಜವಾಬ್ದಾರಿಯ ಗುಣಗಳು ಬೆಳೆಸಿಕೊಳ್ಳಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮೋಟಿವೇಷನಲ್ ಸ್ಪೀಕರ್ ಹಾಗೂ ಚೀಫ್ ಪಿಆರ್‌ಒ, ಡಿಆರ್‌ಡಿಒ ಮಿನಿಸ್ಟ್ರಿ ಆಫ್ ಡಿಫೆನ್ಸ್ ಜೈ ಪ್ರಕಾಶ್ ರಾವ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ಗುಣ ನಡತೆಯ ಪ್ರೇರಣೆ ನೀಡಿದರು. ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಸರಳತೆ, ಶಿಸ್ತು, ದೇಶಪ್ರೇಮ ಹಾಗೂ ವ್ಯಕ್ತಿತ್ವದ ಕುರಿತು ಮಾತನಾಡಿದ ಅವರು, ರಕ್ಷಣಾ ಸಚಿವಾಲಯದಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಅಬ್ದುಲ್ ಕಲಾಂ ಅವರೊಂದಿಗೆ ಕೆಲಸ ಮಾಡಿದ ತಮ್ಮ ಅನುಭವಗಳನ್ನು ಹಂಚಿಕೊ0ಡರು. ಮೊಬೈಲ್, ಇಂಟರ್‌ನೆಟ್ ಹಾಗೂ ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನಗಳನ್ನು ಜ್ಞಾನ ಮತ್ತು ಸೃಜನಶೀಲತೆಯ ಬೆಳವಣಿಗೆಗೆ ಬಳಸಿಕೊಳ್ಳಬೇಕು. ಸಮಯವನ್ನು ಸದುಪಯೋಗಪಡಿಸಿಕೊಂಡು ಹೊಸ ವಿಷಯಗಳನ್ನು ಕಲಿಯಬೇಕು. ಅಬ್ದುಲ್ ಕಲಾಂ ಅವರಂತೆ ದೊಡ್ಡ ಕನಸು ಕಾಣುವುದರ ಜೊತೆಗೆ ಪರಿಶ್ರಮ, ಶಿಸ್ತು ಹಾಗೂ ದೇಶಸೇವೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮಡಿಕೇರಿ ರೋಟರಿ ಅಧ್ಯಕ್ಷ ರೊ.ಮನೋಹರ್ ಕಾಮತ್ ಅವರು ಮಾತನಾಡಿ, ಇಂಟರ್ಯಾಕ್ಟ್ ಕ್ಲಬ್ ಸ್ಥಾಪನೆಗೆ ಸಹಕರಿಸಿದ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿಗಳ ನಾಯಕತ್ವ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಇಂಟರ್ಯಾಕ್ಟ್ ಕ್ಲಬ್ ಉತ್ತಮ ವೇದಿಕೆಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮಡಿಕೇರಿ ರೋಟರಿಯ ಕಾರ್ಯದರ್ಶಿ ರೊ.ಬಿ.ಎಂ.ಸೋಮಣ್ಣ ಉಪಸ್ಥಿತರಿದ್ದರು. ಶಾಲೆಯ ಇಂಟರ್ಯಾಕ್ಟ್ ಕೋಆರ್ಡಿನೇಟರ್ ಆಗಿ ಕಾವೇರಮ್ಮ ಸಿ.ಬಿ., ಅಧ್ಯಕ್ಷರಾಗಿ ಜಿಯಾ ಫಾತಿಮಾ, ಉಪಾಧ್ಯಕ್ಷರಾಗಿ ಅಫೀಫ, ಕಾರ್ಯದರ್ಶಿಯಾಗಿ ಪುಣ್ಯ ಪೊನ್ನಮ್ಮ ಹಾಗೂ ಸಹ ಕಾರ್ಯದರ್ಶಿಯಾಗಿ ನಿದಾ ಫಾತಿಮಾ ಆಯ್ಕೆಯಾಗಿದ್ದಾರೆ. ರಿಶಿಕಾ, ನಿದಾ, ಇಂದು, ಅಕ್ಷತಾ ಹಾಗೂ ಆಸುರಾ ಪ್ರಾರ್ಥಿಸಿ ಕಾವೇರಮ್ಮ ಸಿ.ಬಿ. ಸ್ವಾಗತಿಸಿದರು. ಪುಣ್ಯ ಪೊನ್ನಮ್ಮ ಪಿ.ಆರ್. ಮುಖ್ಯ ಅತಿಥಿಗಳ ಪರಿಚಯ ಮಾಡಿದರು. ಕಾವೇರಮ್ಮ ಸಿ.ಬಿ. ಹಾಗೂ ಮಂಗಳಾ ಎ.ಎಂ. ಕಾರ್ಯಕ್ರಮ ನಿರೂಪಿಸಿದರು, ಭುವನೇಶ್ವರಿ ಎಂ. ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.23 : ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು.…

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.