Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*
  • *ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
  • *****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****
  • *ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*
  • *ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*
  • *ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*
  • *ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*
  • *ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*
  • *ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.26 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಗಸ್ಟ್ 22 ಹಾಗೂ 23ರಂದು ಎರಡುದಿನಗಳ ಉತ್ತರ ಕರ್ನಾಟಕದ ವಾಡೆ ಮನೆಗಳ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು. ಅರೆಭಾಷಿಕರ ಐನ್ ಮನೆಗಳು ಹಾಗೂ ವಾಡೆ ಮನೆಗಳ ತುಲನಾತ್ಮಕ ಅಧ್ಯಯನದ ದೃಷ್ಟಿಯಿಂದ ಈ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಅಧ್ಯಕ್ಷರಾದ ಸದಾನಂದ ಮಾವಜಿಯವರ ನೇತೃತ್ವದ ಅಧ್ಯಯನ ಪ್ರವಾಸದ ವೇಳೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿರುವ ಸುಮಾರು 850 ವರ್ಷದ ಭವ್ಯ ಇತಿಹಾಸ ವಿರುವ ಚಚಡಿ ದೇಸಾಯಿ ವಾಡೆಯನ್ನು ಪ್ರಧಾನವಾಗಿ ವೀಕ್ಷಿಸಿ ಅಧ್ಯಯನ ನಡೆಸಲಾಯಿತು. ವಾಡೆಯಲ್ಲಿ ಪ್ರಸ್ತುತ ವಾಸ್ತವ್ಯವಿರುವ ನಾಗರಾಜ ದೇಸಾಯಿಯವರು ಮಾಹಿತಿ ನೀಡಿದರು. 12ನೇ ಶತಮಾನದಲ್ಲಿ ರಟ್ಟರ ರಾಜವಂಶದ ಎರಡನೇಯ ಕಾರ್ತ್ಯವೀರ ನಿರ್ಮಿಸಿದ ಈ ಮಹಲ್ ಕೋಟೆಯಿಂದ ಆವೃತವಾಗಿದ್ದು 25 ತಲೆಮಾರುಗಳನ್ನು ಕಂಡಿದ್ದು ಇದೀಗ 26ನೇ ತಲೆಮಾರಿನ ದೇಸಾಯಿ ಕುಟುಂಬ ಇದನ್ನು ಮುನ್ನಡೆಸುತ್ತಿದೆ. ಚಚಡಿ ವಾಡೆ ವೀಕ್ಷಣೆ ಬಳಿಕ ಅಧ್ಯಯನ ತಂಡವು ಸವದತ್ತಿ ತಾಲೂಕಿನ ರುದ್ರಾಪುರದಲ್ಲಿರುವ ರುದ್ರಾಪುರ ವಾಡೆಯನ್ನು ವೀಕ್ಷಿಸಿತು. ಉದಯ ಕುಮಾರ್ ಅವರ ವಶದಲ್ಲಿರುವ ವಾಡೆಯು ಚಿಕ್ಕ ವಾಡೆಯಾದರೂ ಇಂದಿಗೂ ತನ್ನ ಪುರಾತನ ಭವ್ಯತೆಯನ್ನು ಉಳಿಸಿಕೊಂಡಿದೆ. ಬಳಿಕ ಅಧ್ಯಯನ ತಂಡವು ತಲ್ಲೂರು ವಾಡೆಯನ್ನು ವೀಕ್ಷಿಸಿತು. ತಲ್ಲೂರು ವಾಡೆಯು ಮುಖ್ಯವಾಗಿ ಕಿತ್ತೂರು ಸಂಸ್ಥಾನದ ರಾಜಮನೆತನದೊಂದಿಗೆ ನೇರ ರಕ್ತಸಂಬಂಧ ಮತ್ತು ಐತಿಹಾಸಿಕ ಒಡನಾಟವನ್ನು ಹೊಂದಿದ್ದ ವಾಡೆಯಾಗಿರುತ್ತದೆ. ಇಲ್ಲಿ ವಾಸ್ತವ್ಯವಿದ್ದ ಅನಿಲ್ ಕುಮಾರ್ ದೇಸಾಯಿ ಅವರು ವಾಡೆಯ ಕುರಿತು ವಿವರ ನೀಡಿದರು. ಈ ಮೂರು ವಾಡೆಗಳ ಮೂಲ ಪುರುಷ ಅಪ್ರತಿಮ ವೀರ ವೀರಪ್ಪ ನಾಯ್ಕ ಎಂಬವರು. ಕರಿ ಹುಲಿಯನ್ನು (ಕಪ್ಪುಚಿರತೆ) ಬರಿಗೈಯಲ್ಲಿ ಹೊಡೆದು ಹಾಕಿದ್ದ ಕಾರಣ ರಟ್ಟ ವಂಶಸ್ಥ ರಾಜ ಎರಡನೇ ಕಾರ್ತವೀರ್ಯರಿಂದ 1126ರಲ್ಲಿ 30 ಹಳ್ಳಿಗಳ ಬಹುಮಾನವನ್ನು ಪಡೆದಿದ್ದರು. ಚಚಡಿ, ತಲ್ಲೂರು, ರುದ್ರಾಪುರ, ಮುತವಾಡ, ಗೊಂತಮಾರ, ಇಂಗಳಗಿ, ಬೆಳವಡಿ ಸಂಸ್ಥಾನಗಳ ಮೂಲ ಪುರುಷ ವೀರಪ್ಪ ನಾಯ್ಕ ಎಂಬುದಾಗಿ ಇತಿಹಾಸ ಸಾರುತ್ತದೆ. ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಸ್. ಪಾಟೀಲರ ವಾಡೆಮನೆಗೆ ಭೇಟಿ ಅಧ್ಯಯನದ ವೇಳೆ ತಂಡವು ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಕೇಸರಕೊಪ್ಪ ಗ್ರಾಮದಲ್ಲಿರುವ ಕಿತ್ತೂರು ಶಾಸಕರಾದ ಬಾಬೂಸಾಹೇಬ ಪಾಟೀಲರು ವಾಸ್ತವ್ಯ ಇರುವ ವಾಡೆಗೂ ಭೇಟಿ ನೀಡಿತು. ಈ ವಾಡೆಯು ಸುಮಾರು 400 ವರ್ಷಗಳಷ್ಟು ಹಳೆಯದಾಗಿದ್ದು ಇದು ಸಹ ಗತವೈಭವವನ್ನು ಸಾರುತ್ತಿದೆ. ಚಚಡಿ ವಾಡೆಗೂ ಈ ವಾಡೆಗೂ ಬೀಗತನದ ಸಂಬಂಧವಿದೆ. ಶಾಸಕರ ಅಕ್ಕ ಪಾರ್ವತಿ ದೇಸಾಯಿ (ಸೀಮಾ) ಅವರು ಚಚಡಿ ವಾಡೆಯ ಯಜಮಾನರಾಗಿರುವ ನಾಗರಾಜ ದೇಸಾಯಿಯವರ ಪತ್ನಿಯಾಗಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಪಾಟೀಲ ದಂಪತಿಗಳು ಅರೆಭಾಷೆ ಅಕಾಡೆಮಿ ಅಧ್ಯಯನ ತಂಡವನ್ನು ಬರಮಾಡಿಕೊಂಡರು. ತಂಡವು ವಾಡೆಗಳ ಕುರಿತು ವಿಚಾರ ವಿನಿಮಯ ಮಾಡಿಕೊಂಡುದಲ್ಲದೆ, ಅಕಾಡೆಮಿಯ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ನೀಡಿತು. ಶಾಸಕರು ಹಾಗೂ ಅವರ ಪತ್ನಿ ಹಾಲಿ ಕೆಪಿಸಿಸಿ ಸದಸ್ಯೆ ಹಾಗೂ ಮಾಜಿ ಜಿಲ್ಲಾಪಂಚಾಯತ್ ಸದಸ್ಯರಾದ ರೋಹಿಣಿ ಪಾಟೀಲ್ ಅವರನ್ನು ಈ ಸಂದರ್ಭದಲ್ಲಿ ಅಕಾಡೆಮಿ ವತಿಯಿಂದ ಶಾಲು ಹೊದಿಸಿ ಹೂಗುಚ್ಛ ಹಾಗೂ ಪುಸ್ತಕ ನೀಡಿ ಗೌರವಿಸಲಾಯಿತು. ಪಾಟೀಲ್ ದಂಪತಿಗಳು ಅಕಾಡೆಮಿ ಅಧ್ಯಕ್ಷರು ಹಾಗೂ ಸದಸ್ಯರನ್ನು ಶಾಲು ಹೊದಿಸಿ ಗೌರವಿಸಿದರು. ಪ್ರವಾಸದ ಉಸ್ತುವಾರಿಯನ್ನು ಸದಸ್ಯ ಸಂಚಾಕರಾದ ಡಾ. ಜ್ಞಾನೇಶ್ ಎನ್.ಎ ವಹಿಸಿದ್ದರು. ತಂಡದಲ್ಲಿ ಸದಸ್ಯರಾದ ಚಂದ್ರಶೇಖರ ಪೇರಾಲು, ಚಂದ್ರಾವತಿ ಬಡ್ಡಡ್ಕ, ಲತಾ ಪ್ರಸಾದ್ ಕುದ್ಪಾಜೆ, ಪಿ.ಎಸ್. ಕಾರ್ಯಪ್ಪ, ಸೂದನ್ ಎಸ್. ಈರಪ್ಪ, ಪಿ.ಎಂ. ಸಂದೀಪ್, ಲೋಕೇಶ್ ಊರುಬೈಲು, ವಿನೋದ್ ಮೂಡಗದ್ದೆ, ಮೋಹನ್ ಪೊನ್ನಚನ, ಪ್ರಕಾಶ್ ಕುದುಪಜೆ ಇವರುಗಳು ಭಾಗಿಯಾಗಿದ್ದರು. ಧಾರವಾಡದವರಾಗಿರುವ ಕಾರವಾರ ಜಿಲ್ಲೆಯ ಮುಂಡಗೋಡು ತಾಲೂಕು ಕಾರ್ಯನಿರ್ವಹಣಾಧಿಕಾರಿ ಟಿ. ವೈ. ದಾಸನಕೊಪ್ಪ ಹಾಗೂ ಅಧ್ಯಯನ ಪ್ರವಾಸಕ್ಕಾಗಿ ಸವದತ್ತಿ ತಾಲೂಕು ಪಂಚಾಯತ್ ನಿಯೋಜನೆ ಮಾಡಿದ ರುದ್ರಾಪುರ ಗ್ರಾಮ ಪಂಚಾಯತ್ ಅಧಿಕಾರಿ ವಿಜಯ ಕುಮಾರ್ ಅಂಗಡಿ ಅವರು ಎರಡು ದಿನಗಳ ಪ್ರವಾಸದ ವೇಳೆ ತಂಡಕ್ಕೆ ಮಾರ್ಗದರ್ಶಕರಾಗಿ ಸಹಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*

ಆಗಷ್ಟ್ 26, 2026

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.26 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಗಸ್ಟ್ 22 ಹಾಗೂ…

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026

*ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*

ಆಗಷ್ಟ್ 26, 2026

*ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*

ಆಗಷ್ಟ್ 26, 2026

*ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*

ಆಗಷ್ಟ್ 25, 2026

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*

ಆಗಷ್ಟ್ 25, 2026

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.