Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*
  • *ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*
  • *VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*
  • *ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*
  • *ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*
  • *ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*
  • *ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*

ಆಗಷ್ಟ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK, ಆ.27: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ಉತ್ತಮ ಆರ್ಥಿಕ ಸಾಧನೆ ಮಾಡಿದ್ದು, ರೂ.75.35 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.20ರಷ್ಟು ಡಿವಿಡೆಂಡ್ ನೀಡುವ ಪ್ರಸ್ತಾವನೆಯನ್ನು ವಾರ್ಷಿಕ ಮಹಾಸಭೆಯ ಅನುಮೋದನೆಗೆ ಮಂಡಿಸಲು ಸಂಘ ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026ರ ಮಾರ್ಚ್ 31ರ ಅಂತ್ಯಕ್ಕೆ ಸಂಘದಲ್ಲಿ ಒಟ್ಟು 1,203 ‘ಎ’ ತರಗತಿಯ ಸದಸ್ಯರಿದ್ದು, ಸದಸ್ಯರಿಂದ ರೂ.89.26 ಲಕ್ಷ ಪಾಲು ಬಂಡವಾಳ ಸಂಗ್ರಹವಾಗಿದೆ. ಕ್ಷೇಮ ನಿಧಿ ಸೇರಿದಂತೆ ಇತರೆ ನಿಧಿಗಳಲ್ಲಿ ರೂ.3.95 ಕೋಟಿ ಹಾಗೂ ನಿರಖು ಠೇವಣಿ, ಸಂಚಯ ಠೇವಣಿ ಸೇರಿದಂತೆ ಒಟ್ಟು ರೂ.22.71 ಕೋಟಿ ಠೇವಣಿ ಸಂಗ್ರಹವಾಗಿದೆ ಎಂದರು.

ಸಂಘದ ಬಂಡವಾಳದ ಪೈಕಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಪಾಲು ಹಣ, ಕ್ಷೇಮ ನಿಧಿ, ನಿರಖು ಠೇವಣಿ ಹಾಗೂ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಾಲು ಮತ್ತು ಠೇವಣಿ ರೂಪದಲ್ಲಿ ಒಟ್ಟು ರೂ.9.64 ಕೋಟಿ ಹೂಡಿಕೆ ಮಾಡಲಾಗಿದೆ. ಸದಸ್ಯರ ಅಗತ್ಯಕ್ಕೆ ಅನುಗುಣವಾಗಿ ಕೆಸಿಸಿ ಹಾಗೂ ಫಸಲು ಸಾಲ ಸೇರಿದಂತೆ 2025-26ನೇ ಸಾಲಿನಲ್ಲಿ ರೂ.24.06 ಕೋಟಿ ಸಾಲವನ್ನು ವಿತರಿಸಲಾಗಿದೆ.

ರಸಗೊಬ್ಬರ ಸೇರಿದಂತೆ ಕೃಷಿ ಹಾಗೂ ಅಗತ್ಯ ವಸ್ತುಗಳ ಮಾರಾಟದಲ್ಲಿಯೂ ಸಂಘ ಉತ್ತಮ ವಹಿವಾಟು ನಡೆಸಿದೆ. ಎಂಸಿಎಫ್, ಮದ್ರಾಸ್ ಫರ್ಟಿಲೈಸರ್ಸ್, ಇಂಡಿಯನ್ ಪೊಟ್ಯಾಷ್, ಫ್ಯಾಕ್ಟ್, ಜುವಾರಿ, ಕೋರಮಂಡಲ್, ಸ್ಪೆನ್ಸ್ ಸೇರಿದಂತೆ ವಿವಿಧ ಸಂಸ್ಥೆಗಳ ರಸಗೊಬ್ಬರಗಳ ಸಗಟು ಮತ್ತು ಚಿಲ್ಲರೆ ಪರವಾನಗಿ ಹೊಂದಿರುವ ಸಂಘವು ನೇರವಾಗಿ ರಸಗೊಬ್ಬರ ಖರೀದಿಸಿ ಸ್ಪರ್ಧಾತ್ಮಕ ದರದಲ್ಲಿ ಸದಸ್ಯರು ಹಾಗೂ ಗ್ರಾಹಕರಿಗೆ ಮಾರಾಟ ಮಾಡುತ್ತಿದೆ.

2025-26ನೇ ಸಾಲಿನಲ್ಲಿ ರಸಗೊಬ್ಬರ, ಕೃಷಿ ಉಪಕರಣಗಳು, ಸಿಮೆಂಟ್ ಹಾಗೂ ಇತರೆ ಅಗತ್ಯ ಸಾಮಗ್ರಿಗಳ ಮಾರಾಟದಿಂದ ರೂ.6.72 ಕೋಟಿ ವಹಿವಾಟು ನಡೆಸಿ, ರೂ.26.41 ಲಕ್ಷ ವ್ಯಾಪಾರ ಲಾಭ ಗಳಿಸಿದೆ. ಸಂಘವು ವರ್ಷದಲ್ಲಿ ಒಟ್ಟು ರೂ.171.07 ಕೋಟಿ ವಹಿವಾಟು ನಡೆಸಿದೆ. ವ್ಯಾಪಾರಾಭಿವೃದ್ಧಿ ಸಾಲ ರೂ.20 ಲಕ್ಷ ಮತ್ತು ಜಾಮೀನು ಸಾಲ ರೂ.5 ಲಕ್ಷ ನೀಡಲಾಗುತ್ತಿದೆ. ಸಂಘದ ಎಲ್ಲಾ ವ್ಯವಸ್ಥೆಗಳು ಗಣಕೀಕರಣಗೊಂಡಿವೆ ಎಂದು ಬಲ್ಲಾರಂಡ ಮಣಿ ಉತ್ತಪ್ಪ ಮಾಹಿತಿ ನೀಡಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದೆ. ರೈತ ಸದಸ್ಯರಿಗೆ ಅನುಕೂಲವಾಗುವಂತೆ ಕಾಫಿ ಗುಣಮಟ್ಟ ಪರಿಶೀಲನಾ ಯಂತ್ರವನ್ನು ಅಳವಡಿಸಲಾಗಿದೆ. ಸಂಘದ ಮುಖ್ಯ ಕಚೇರಿ ಕಟ್ಟಡದ ಮೇಲ್ಭಾಗದಲ್ಲಿ ‘ಪುಣ್ಯಕೋಟಿ’ ಅತಿಥಿಗೃಹ ನಿರ್ಮಿಸಲಾಗಿದೆ. ಮಣ್ಣು ಪರೀಕ್ಷಾ ಕೇಂದ್ರವನ್ನು ಬಾಡಿಗೆಗೆ ಪಡೆದು ಕಾರ್ಯನಿರ್ವಹಿಸಲಾಗುತ್ತಿದ್ದು, ಇ-ಸ್ಟಾಂಪ್ ಸೌಲಭ್ಯವನ್ನೂ ಸದಸ್ಯರು ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿದೆ.

ಸಂಘವು ನೋಂದಣಿಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಮುಂದಿನ ವರ್ಷ ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.

ಆ.30ರಂದು 49ನೇ ವಾರ್ಷಿಕ ಮಹಾಸಭೆ

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 49ನೇ ವಾರ್ಷಿಕ ಮಹಾಸಭೆ ಆ.30ರಂದು ಶ್ರೀ ನರೇಂದ್ರ ಮೋದಿ ಭವನದಲ್ಲಿ ನಡೆಯಲಿದೆ. ಸಂಘದ ಎಲ್ಲಾ ಸದಸ್ಯರು ತಪ್ಪದೆ ಮಹಾಸಭೆಯಲ್ಲಿ ಭಾಗವಹಿಸುವಂತೆ ಬಲ್ಲಾರಂಡ ಮಣಿ ಉತ್ತಪ್ಪ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ನಿರ್ದೇಶಕರಾದ ಬಿ.ಎಂ. ಕಾಶಿ, ಪುತ್ತರೀರ ಸಿ. ನಂಜಪ್ಪ, ಅಕ್ಕಾರಿ ಆರ್. ದಯಾನಂದ, ಮರದಾಳು ಜಿ. ಚೇತನ್ ಹಾಗೂ ಮುಕ್ಕಾಟಿ ಎ. ಪಳಂಗಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026

*ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026

*ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.27: ಮಾನ್ಯ ಶಾಸಕರ ತಂದೆಯವರಾದ ದಿವಂಗತ ಶ್ರೀ ಎ.ಕೆ ಸುಬ್ಬಯ್ಯರವರ ಪುಣ್ಯ ಸ್ಮರಣೆಯ ದಿನದಂದು, ದಿವಂಗತರ…

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026

*VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*

ಆಗಷ್ಟ್ 27, 2026

*ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*

ಆಗಷ್ಟ್ 27, 2026

*ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*

ಆಗಷ್ಟ್ 27, 2026

*ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*

ಆಗಷ್ಟ್ 27, 2026

*ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*

ಆಗಷ್ಟ್ 27, 2026

*ಕಸ್ತೂರಿರಂಗನ್ ವರದಿ ಸಂವಾದ : ಕೊಡಗಿನ ಜನತೆ ಆತಂಕಪಡುವ ಅಗತ್ಯವಿಲ್ಲ : ಸಂಸದ ಯದುವೀರ್ ಒಡೆಯರ್ ಅಭಯ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.