Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ.27: ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ತಾಣದ ರಕ್ಷಣೆ ಹಾಗೂ ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ ಕುರಿತು ಕೊಡಗು ಜಿಲ್ಲೆಯ ವಿವಿಧ ಹಾಲಿ-ಮಾಜಿ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರು ಹಾಗೂ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಗಣ್ಯರ ಸಭೆ ಮಡಿಕೇರಿಯ ರಾಜ್ಯದರ್ಶನ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.

ಕೊಡಗು-ಮೈಸೂರು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನ, ಅರಣ್ಯ ಹಾಗೂ ಖಾಸಗಿ ಜಮೀನುಗಳ ರಕ್ಷಣೆ ಮತ್ತು ಜಿಲ್ಲೆಯ ರೈತರ ಹಿತಾಸಕ್ತಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಕೊಡಗು ಜಿಲ್ಲೆಯಲ್ಲಿ ಹಿಂದಿನಿಂದಲೂ ಕಾಡು ಹಾಗೂ ಪರಿಸರವನ್ನು ಉಳಿಸಿ ರಕ್ಷಿಸಿಕೊಂಡು ಬರಲಾಗಿದ್ದು, ಪರಿಸರ ಸಂರಕ್ಷಣೆಗೆ ವಿರೋಧವಿಲ್ಲ. ಆದರೆ ಕಸ್ತೂರಿರಂಗನ್ ವರದಿಯನ್ನು ಕೇರಳ ಮಾದರಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು:

* ಪ್ರತಿ ಗ್ರಾಮದಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸರ್ವೆ ನಡೆಸಿ ಜನವಸತಿ ಪ್ರದೇಶ, ರೈತರು ಈಗಾಗಲೇ ಕೃಷಿ ಮಾಡುತ್ತಿರುವ ಜಮೀನು ಹಾಗೂ ಅರಣ್ಯದ ಗಡಿಯನ್ನು ಸ್ಪಷ್ಟವಾಗಿ ಗುರುತಿಸಬೇಕು.

* ಅರಣ್ಯದ ಗಡಿಯ ಹೊರಭಾಗದಲ್ಲಿ ಪ್ರತ್ಯೇಕ ಬಫರ್ ಜೋನ್ ಗುರುತಿಸಬಾರದು. ಬಫರ್ ವಲಯವನ್ನು ಅರಣ್ಯದ ಗಡಿಗೆ ‘0’ ಕಿ.ಮೀ.ಗೆ ಸೀಮಿತಗೊಳಿಸಬೇಕು.

* ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಗ್ರಾಮಸಭೆ ನಡೆಸುವಂತೆ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳಿಗೆ ಸೂಚಿಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.

* ಅರಣ್ಯದ ಅಂಚಿನಲ್ಲಿ ವಾಸಿಸುವ ರೈತರು, ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಬಡ ಜನರು ಹಾಗೂ ಕೃಷಿ ಮತ್ತು ಮೂಲಭೂತ ಸೌಕರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಬೇಕು.

* ಪಶ್ಚಿಮ ಘಟ್ಟದ ಅರಣ್ಯ ಹಾಗೂ ಖಾಸಗಿ ಜಮೀನುಗಳಲ್ಲಿ ಕಾಡು ಮತ್ತು ಮರಗಳನ್ನು ಸಂರಕ್ಷಿಸುವುದರಿಂದ ಕರ್ನಾಟಕ ಹಾಗೂ ತಮಿಳುನಾಡಿನ ಲಕ್ಷಾಂತರ ಜನರಿಗೆ ಕುಡಿಯುವ ನೀರು ಮತ್ತು ಕೃಷಿಗೆ ಅಗತ್ಯವಾದ ನೀರು ದೊರೆಯುತ್ತಿದೆ. ಆದರೆ ಅತಿಯಾದ ಮಳೆ, ಶೀತ ವಾತಾವರಣ, ಕೊಳೆರೋಗ ಹಾಗೂ ಅತಿವೃಷ್ಟಿಯಿಂದ ಕೊಡಗಿನ ರೈತರು ಬೆಳೆ ನಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ನೀರನ್ನು ಬಳಸುವ ಪ್ರದೇಶಗಳಿಂದ ನೀರಿನ ಕರ ಹಾಗೂ ವಿದ್ಯುತ್ ಕರದ ಮೂಲಕ ರಾಯಲ್ಟಿ ಸಂಗ್ರಹಿಸಿ ಕೊಡಗಿನ ರೈತರಿಗೆ ಪರಿಹಾರ ಮತ್ತು ಅಭಿವೃದ್ಧಿಗೆ ಅನುದಾನ ನೀಡಬೇಕು ಎಂದು ನಿರ್ಣಯಿಸಲಾಯಿತು.

* ಸಿ ಮತ್ತು ಡಿ ಜಮೀನುಗಳು ಕಂದಾಯ ಇಲಾಖೆಗೆ ಸೇರಿದ ಸರ್ಕಾರಿ ಭೂಮಿಯಾಗಿದ್ದು, ಈಗಾಗಲೇ ಅನೇಕ ಫಲಾನುಭವಿಗಳಿಗೆ ಮನೆ ನಿರ್ಮಾಣ ಹಾಗೂ ಕೃಷಿಗಾಗಿ ಹಕ್ಕುಪತ್ರ ನೀಡಲಾಗಿದೆ. ಆದ್ದರಿಂದ ಇಂತಹ ಜಮೀನುಗಳನ್ನು ಯಾವುದೇ ಕಾರಣಕ್ಕೂ ಅರಣ್ಯ ಇಲಾಖೆಗೆ ವರ್ಗಾಯಿಸಬಾರದು. ಈಗಾಗಲೇ ವರ್ಗಾಯಿಸಿದ್ದರೆ ಅವುಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಲಾಯಿತು.

* ಈ ಹಿಂದೆ ರಚಿಸಲಾಗಿದ್ದ ಹೋರಾಟ ಸಮಿತಿಯನ್ನು ಮುಂದುವರಿಸುವುದು ಹಾಗೂ ಅಗತ್ಯವಿದ್ದಲ್ಲಿ ಸಂಸದರು, ಶಾಸಕರು, ವಿವಿಧ ಪಕ್ಷಗಳ ಪ್ರಮುಖರು, ವಿವಿಧ ಸಮಾಜಗಳ ಮುಖಂಡರು, ರೈತ ಸಂಘಟನೆಗಳು, ಬೆಳೆಗಾರರ ಹೋರಾಟ ಸಮಿತಿಗಳು ಹಾಗೂ ಇತರ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಸಮಿತಿಯನ್ನು ರಚಿಸುವ ನಿರ್ಣಯ ಕೈಗೊಳ್ಳಲಾಯಿತು.

* ಅರಣ್ಯ ಇಲಾಖೆ ಉಲ್ಲೇಖಿಸುವ 1905ರ ರಾಜರ ಕಾಲದ ಸೆಕ್ಷನ್ 4 ಅನ್ನು ಕೂಡಲೇ ರದ್ದುಪಡಿಸಬೇಕು ಎಂದು ಸಭೆ ಆಗ್ರಹಿಸಿತು.

* ಸಭೆಯಲ್ಲಿ ಕೈಗೊಂಡ ಎಲ್ಲಾ ನಿರ್ಣಯಗಳನ್ನು ಒಳಗೊಂಡ ಸಮಗ್ರ ವರದಿಯನ್ನು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಕಸ್ತೂರಿರಂಗನ್ ವರದಿಯ ಅನುಷ್ಠಾನದಲ್ಲಿ ಪರಿಸರ ಸಂರಕ್ಷಣೆಯ ಜೊತೆಗೆ ಕೊಡಗಿನ ರೈತರು, ಬೆಳೆಗಾರರು ಹಾಗೂ ಅರಣ್ಯದ ಅಂಚಿನಲ್ಲಿ ವಾಸಿಸುವ ಜನರ ಹಕ್ಕುಗಳು ಮತ್ತು ಜೀವನೋಪಾಯಕ್ಕೆ ಯಾವುದೇ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಭೆಯ ಪ್ರಮುಖ ಒತ್ತಾಯವಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.27 NEWS DESK : ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ…

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.