
ವಿರಾಜಪೇಟೆ ಆ.28 NEWS DESK : ವಿರಾಜಪೇಟೆ ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಾ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರೀ ವರಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಹಾಗೂ ವಿವಿಧ ಅಲಂಕಾರ ಸೇವೆಗಳನ್ನು ಕೈಗೊಳ್ಳಲಾಗಿತ್ತು. ಈ ಪುಣ್ಯಕರ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ನೂರಾರು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಪೂಜಾ ಕಾರ್ಯಕ್ರಮದ ಭಾಗವಾಗಿ, ದೇವಸ್ಥಾನಕ್ಕೆ ಭೇಟಿ ನೀಡಿದ ಮುತ್ತೈದೆಯರಿಗೆ ಅರಿಶಿನ-ಕುಂಕುಮ, ಬಳೆ ಮತ್ತು ರವಿಕೆ ವಸ್ತ್ರವನ್ನು ತಾಂಬೂಲದೊಂದಿಗೆ ನೀಡಿ ಗೌರವಿಸಿ, ಶುಭ ಹಾರೈಸಲಾಯಿತು. ಈ ಧಾರ್ಮಿಕ ಸಮಾರಂಭದಲ್ಲಿ ವಿರಾಜಪೇಟೆ ಹಾಗೂ ಸುತ್ತಮುತ್ತಲ ಪ್ರದೇಶಗಳ ನೂರಾರು ಭಕ್ತಾದಿಗಳು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.









