Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
  • *ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*
  • *“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*
  • *ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*
  • *ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*
  • *ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.5 : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಪ್ಲೇಟ್, ಪೇಪರ್ ಕಪ್, ಆಹಾರ ಕಂಟೈನರ್ ಸೇರಿದಂತೆ ವಿವಿಧ ವಸ್ತುಗಳ ಬಳಕೆಗೆ ನಿಷೇಧ ಹೇರಿರುವ ನಗರಸಭೆಯ ನಿರ್ಧಾರಕ್ಕೆ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನಿರ್ದೇಶಕ ಎಂ.ಧನAಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿದ್ದು, ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಗರಕ್ಕೆ ಆಗಮಿಸುತ್ತಿದ್ದಾರೆ. ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಅದಕ್ಕೆ ಪೂರಕವಾಗಿ ಮೂಲಸೌಕರ್ಯ ಹಾಗೂ ಸಮರ್ಪಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಕಲ್ಪಿಸಬೇಕಾದ ನಗರಸಭೆ ತ್ಯಾಜ್ಯ ನಿರ್ವಹಣೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಏಕಾಏಕಿ ವಿವಿಧ ವಸ್ತುಗಳ ಬಳಕೆಯನ್ನು ನಿಷೇಧಿಸುವ ನಿರ್ಧಾರ ಕೈಗೊಂಡಿರುವುದು ಅವೈಜ್ಞಾನಿಕ ಕ್ರಮವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಯಾವುದೇ ಊರಿನಲ್ಲಿ ಅಡಿಕೆ ತಟ್ಟೆಗಳ ಬಳಕೆಗೆ ಇಂತಹ ನಿಷೇಧ ಹೇರಿರುವುದು ಕಂಡುಬರುವುದಿಲ್ಲ. ಪರಿಸರ ಸ್ನೇಹಿ ಪರ್ಯಾಯ ವಸ್ತುವಾಗಿರುವ ಅಡಿಕೆ ಹಾಳೆಯಿಂದ ತಯಾರಿಸಲಾದ ತಟ್ಟೆಗಳನ್ನು ನಿಷೇಧಿಸುವುದು ಸಮಂಜಸವಲ್ಲ ಎಂದು ಹೇಳಿದ್ದಾರೆ.
ಸಾರ್ವಜನಿಕ ಅನ್ನಸಂತರ್ಪಣೆ, ಧಾರ್ಮಿಕ ಕಾರ್ಯಕ್ರಮಗಳು, ವಿವಿಧ ಸಮಾರಂಭಗಳು ಹಾಗೂ ಹೋಟೆಲ್‌ಗಳಲ್ಲಿ ಅಡಿಕೆ ತಟ್ಟೆ, ಪೇಪರ್ ಪ್ಲೇಟ್ ಮತ್ತು ಆಹಾರ ಕಂಟೈನರ್‌ಗಳ ಬಳಕೆ ಸಾಮಾನ್ಯವಾಗಿದೆ. ಇವುಗಳ ಬಳಕೆಗೆ ಸಂಪೂರ್ಣ ನಿಷೇಧ ಹೇರಿದರೆ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಿಗೆ ಅನಗತ್ಯ ತೊಂದರೆ ಉಂಟಾಗಲಿದೆ ಎಂದು ಅವರು ತಿಳಿಸಿದ್ದಾರೆ.
ನಗರಸಭೆಯ ವ್ಯಾಪ್ತಿಯಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ನೇರವಾಗಿ ಪರಿಣಾಮ ಬೀರುವಂತಹ ನಿರ್ಧಾರ ಕೈಗೊಳ್ಳುವ ಮುನ್ನ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಆಡಳಿತ ಮಂಡಳಿಯೊAದಿಗೆ ಚರ್ಚಿಸಬೇಕಾಗಿತ್ತು. ಆದರೆ ಯಾವುದೇ ಸಮರ್ಪಕ ಚರ್ಚೆ ನಡೆಸದೆ ಏಕಾಏಕಿ ನಿಷೇಧ ಆದೇಶ ಹೊರಡಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಧನಂಜಯ್ ಹೇಳಿದ್ದಾರೆ.
ಮಡಿಕೇರಿ ನಗರಕ್ಕೆ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ತ್ಯಾಜ್ಯ ನಿರ್ವಹಣೆ, ಕಸ ಸಂಗ್ರಹಣೆ, ವಿಲೇವಾರಿ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ನಗರಸಭೆ ಸಮರ್ಪಕವಾಗಿ ರೂಪಿಸಬೇಕಾಗಿದೆ. ನಗರದ ಸ್ವಚ್ಛತೆ ಕಾಪಾಡುವುದು ನಗರಸಭೆಯ ಮೂಲ ಕರ್ತವ್ಯವಾಗಿದ್ದು, ಆ ಜವಾಬ್ದಾರಿಯನ್ನು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರ ಮೇಲೆ ಮಾತ್ರ ಹೊರಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅಡಿಕೆ ಹಾಳೆ, ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಹಾಗೂ ಆಹಾರ ಕಂಟೈನರ್‌ಗಳನ್ನು ನಿಷೇಧಿಸುವುದರಿಂದ ಮಾತ್ರ ನಗರದ ತ್ಯಾಜ್ಯ ಸಮಸ್ಯೆ ಪರಿಹಾರವಾಗುವುದಿಲ್ಲ. ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ, ಸಮರ್ಪಕ ಕಸ ಸಂಗ್ರಹಣೆ, ವೈಜ್ಞಾನಿಕ ವಿಲೇವಾರಿ ಹಾಗೂ ಪ್ರವಾಸಿ ಸ್ಥಳಗಳಲ್ಲಿ ಹೆಚ್ಚುವರಿ ಕಸದ ಬುಟ್ಟಿಗಳ ವ್ಯವಸ್ಥೆ ಮಾಡುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನಗರಸಭೆ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ, ವ್ಯಾಪಾರಸ್ಥರು, ಹೋಟೆಲ್ ಮಾಲೀಕರು ಹಾಗೂ ಚೇಂಬರ್ ಆಫ್ ಕಾಮರ್ಸ್ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ತೊಂದರೆಯಾಗದ ರೀತಿಯಲ್ಲಿ ವೈಜ್ಞಾನಿಕ ಮತ್ತು ಪ್ರಾಯೋಗಿಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ರೂಪಿಸಬೇಕೆಂದು ಎಂ.ಧನAಜಯ್ ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.5 NEWS DESK : ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವುದರ ಜೊತೆಗೆ, ಸಾರ್ವಜನಿಕರ ಕುಂದುಕೊರತೆ ಆಲಿಸಿ…

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026

*“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*

ಸೆಪ್ಟೆಂಬರ್ 5, 2026

*ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*

ಸೆಪ್ಟೆಂಬರ್ 5, 2026

*ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*

ಸೆಪ್ಟೆಂಬರ್ 5, 2026

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.