Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*
  • ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*
  • *ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*
  • *ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*
  • *ಟೀಮ್ ಅರ್ಜುನ ನೂತನ ಅಧ್ಯಕ್ಷರಾಗಿ ಕೆ.ಎ. ಮಹಮ್ಮದ್ ಆಲಿ ಆಯ್ಕೆ*
  • *ಬಸ್ ಡಿಕ್ಕಿ: 6 ವರ್ಷದ ಬಾಲಕಿ ಮೃತ*
  • *ಕಂಬಿಬಾಣೆಯಲ್ಲಿ ಸೆ.13ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ*
  • *ಮಡಿಕೇರಿ ಯುವ ದಸರಾ ನೃತ್ಯ ಸ್ಪರ್ಧೆಗೆ ಅರ್ಜಿ ಆಹ್ವಾನ*
  • *ಮಡಿಕೇರಿ ದಸರಾ ಸಮಿತಿ ಕಚೇರಿ ಉದ್ಘಾಟನೆ – ಲೋಗೋ ಅನಾವರಣ*
  • *ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*

ಸೆಪ್ಟೆಂಬರ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ. 11: ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕೊಡಗು ಜಿಲ್ಲಾ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ನೇತೃತ್ವದಲ್ಲಿ ಶುಕ್ರವಾರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆ ಪ್ರತಿಭಟನೆ ನಡೆಸಿದ ಪರಿಣಾಮ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಸಿದ ರೈತರು, ಜಿಲ್ಲಾಧಿಕಾರಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಗಳನ್ನು ಆಲಿಸಬೇಕೆಂದು ಪಟ್ಟು ಹಿಡಿದರು. ಪರಿಣಾಮ ಮೈಸೂರು, ವೀರಾಜಪೇಟೆ ಹಾಗೂ ಮಂಗಳೂರು ರಸ್ತೆಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಹೋರಾಟ ಸಮಿತಿ ಸಂಚಾಲಕ ಸುರೇಶ್ ಚಕ್ರವರ್ತಿ ಮಾತನಾಡಿ, ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮಸಭೆ ನಡೆಸಿ ಕಸ್ತೂರಿ ರಂಗನ್ ವರದಿಯ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರೆತಿಲ್ಲ. ಕಸ್ತೂರಿ ರಂಗನ್ ವರದಿಯಿಂದ ಜಿಲ್ಲೆಯ 53 ಗ್ರಾಮಗಳು ಸೂಕ್ಷ್ಮ ಪರಿಸರ ವಲಯಕ್ಕೆ ಒಳಪಡಲಿವೆ. ಈ ಗ್ರಾಮಗಳೊಂದಿಗೆ ಬಫರ್ ಝೋನ್ ಸೇರ್ಪಡೆಯಾದರೆ ಜಿಲ್ಲೆಯ 295 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಸಿ ಮತ್ತು ಡಿ ಜಮೀನಿನಲ್ಲಿ ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬದುಕುತ್ತಿರುವ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಲಾಯಿತು. ಮುಕ್ಕೋಡ್ಲು ಗ್ರಾಮದ ಕೃಷಿಕ ನಾಣಿಯಪ್ಪ ಅವರ ತೋಟದಲ್ಲಿದ್ದ ಕಾಫಿ ಮತ್ತು ಏಲಕ್ಕಿ ಬೆಳೆಗಳನ್ನು ಅರಣ್ಯ ಇಲಾಖೆ ನಾಶಪಡಿಸಿದ ಪ್ರಕರಣದಲ್ಲೂ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಲಾಯಿತು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಜಿ. ಸೋಮಶೇಖರ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಹಾಗೂ ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಸ್ಥಳಕ್ಕೆ ಆಗಮಿಸಿ ರೈತರ ಬೇಡಿಕೆಗಳನ್ನು ಆಲಿಸಿದರು.

ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಜಿಲ್ಲೆಯ ಜನರ ಭಾವನೆಗಳಿಗೆ ಅನುಗುಣವಾಗಿ ಸಕಾರಾತ್ಮಕವಾಗಿ ಸ್ಪಂದಿಸಿ ಸರ್ಕಾರಕ್ಕೆ ಮಾಹಿತಿ ಒದಗಿಸುವುದಾಗಿ ಜಿಲ್ಲಾಧಿಕಾರಿ ಸೋಮಶೇಖರ್ ಭರವಸೆ ನೀಡಿದರು. ಶಾಸಕ ಡಾ. ಮಂತರ್ ಗೌಡ ಅವರು ಸಿ ಮತ್ತು ಡಿ ಜಮೀನು ಸಮಸ್ಯೆ ಕುರಿತು ರಚಿಸಿರುವ ವಿಶೇಷ ತನಿಖಾ ಸಮಿತಿ ಸ್ಥಳೀಯ ಭಾವನೆಗಳನ್ನು ಪರಿಗಣಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿಸಿದರು.

ಇದೇ ವೇಳೆ ಮುಕ್ಕೋಡ್ಲು ಗ್ರಾಮದ ಸಂತ್ರಸ್ತ ಕೃಷಿಕ ನಾಣಿಯಪ್ಪ ಅವರಿಗೆ ಪರಿಹಾರ ನೀಡುವ ವಿಚಾರದಲ್ಲೂ ಜಿಲ್ಲಾಡಳಿತ ಕ್ರಮ ಕೈಗೊಂಡಿತು. ಪ್ರತಿಭಟನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ನಾಣಿಯಪ್ಪ ಅವರ ಮೊಬೈಲ್‌ನಲ್ಲಿ ಅಂದಿನ ಘಟನೆಯ ದೃಶ್ಯಗಳನ್ನು ವೀಕ್ಷಿಸಿ ಮಾಹಿತಿ ಪಡೆದಿದ್ದರು. ಬಳಿಕ ನಾಣಿಯಪ್ಪ ಹಾಗೂ ಅವರ ಕುಟುಂಬವನ್ನು ಜಿಲ್ಲಾಧಿಕಾರಿ ಕಚೇರಿಗೆ ಕರೆಸಿ ಒಟ್ಟು 6 ಲಕ್ಷ ರೂ. ಮೌಲ್ಯದ ಚೆಕ್ ಅನ್ನು ಹಸ್ತಾಂತರಿಸಿದರು.

ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಅರಣ್ಯ ಭವನಕ್ಕೆ ಮುತ್ತಿಗೆ ಹಾಕುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಪರಿಹಾರ ನೀಡುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರಸ್ತೆ ತಡೆ ಹಿಂಪಡೆದ ರೈತರು ಗಾಂಧಿ ಮೈದಾನಕ್ಕೆ ತೆರಳಿ ಬಹಿರಂಗ ಸಭೆ ನಡೆಸಿದರು.

ಪ್ರತಿಭಟನೆಯಲ್ಲಿ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ರೈತ ಹೋರಾಟ ಸಮಿತಿಯ ಬಿ.ಜೆ. ದೀಪಕ್, ಮಿಥುನ್ ಹರಗ, ದಿವಾಕರ ಕೂತಿ, ಕಾಂಗ್ರೆಸ್ ಪ್ರಮುಖ ನಾಪಂಡ ಮುತ್ತಪ್ಪ ಸೇರಿದಂತೆ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸಾವಿರಾರು ರೈತರು ಪಾಲ್ಗೊಂಡಿದ್ದರು.

ಇದಕ್ಕೂ ಮೊದಲು ನಗರದ ಫೀ.ಮಾ.ಕೆ.ಎಂ. ಕಾರ್ಯಪ್ಪ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*

ಸೆಪ್ಟೆಂಬರ್ 11, 2026

ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*

ಸೆಪ್ಟೆಂಬರ್ 11, 2026

*ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*

ಸೆಪ್ಟೆಂಬರ್ 11, 2026

ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*

ಸೆಪ್ಟೆಂಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಸೆ.11: ಹೋಮ್‌ಸ್ಟೇ ಅಸೋಸಿಯೇಷನ್, ಸೋಮವಾರಪೇಟೆ ವತಿಯಿಂದ ಕೇರಳದ ಕಾಸರಗೋಡು ಹಾಗೂ ಕಣ್ಣೂರು ಜಿಲ್ಲೆಗಳಿಗೆ ಎರಡು ದಿನಗಳ…

*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*

ಸೆಪ್ಟೆಂಬರ್ 11, 2026

*ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*

ಸೆಪ್ಟೆಂಬರ್ 11, 2026

*ಟೀಮ್ ಅರ್ಜುನ ನೂತನ ಅಧ್ಯಕ್ಷರಾಗಿ ಕೆ.ಎ. ಮಹಮ್ಮದ್ ಆಲಿ ಆಯ್ಕೆ*

ಸೆಪ್ಟೆಂಬರ್ 11, 2026

*ಬಸ್ ಡಿಕ್ಕಿ: 6 ವರ್ಷದ ಬಾಲಕಿ ಮೃತ*

ಸೆಪ್ಟೆಂಬರ್ 11, 2026

*ಕಂಬಿಬಾಣೆಯಲ್ಲಿ ಸೆ.13ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ*

ಸೆಪ್ಟೆಂಬರ್ 11, 2026

*ಮಡಿಕೇರಿ ಯುವ ದಸರಾ ನೃತ್ಯ ಸ್ಪರ್ಧೆಗೆ ಅರ್ಜಿ ಆಹ್ವಾನ*

ಸೆಪ್ಟೆಂಬರ್ 11, 2026

*ಮಡಿಕೇರಿ ದಸರಾ ಸಮಿತಿ ಕಚೇರಿ ಉದ್ಘಾಟನೆ – ಲೋಗೋ ಅನಾವರಣ*

ಸೆಪ್ಟೆಂಬರ್ 11, 2026

*ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.