
ಮಡಿಕೇರಿ, NEWS DESK ಸೆ.14 : ಗಣೇಶ ಚತುರ್ಥಿ ಸಂಭ್ರಮದ ಅಂಗವಾಗಿ ಮೇಕೇರಿ ಶ್ರೀ ಗೌರಿಶಂಕರ ದೇವಾಲಯಕ್ಕೆ ಪೂಜ್ಯ ಶ್ರೀ ಶ್ರೀ ಶ್ರೀ ಬಸವಲಿಂಗ ಶಿವಯೋಗಿ ಸ್ವಾಮೀಜಿಗಳು ಆಗಮಿಸಿದರು. ಸ್ವಾಮೀಜಿಗಳ ಆಗಮನದ ಸಂದರ್ಭದಲ್ಲಿ ಮಾತೆಯರು ಪೂರ್ಣಕುಂಭದೊಂದಿಗೆ ಭಕ್ತಿಪೂರ್ವಕ ಸ್ವಾಗತ ನೀಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪೂಜ್ಯ ಸ್ವಾಮೀಜಿಗಳು ಆಶೀರ್ವಚನ ನೀಡಿದರು. ಗಣೇಶ ಚತುರ್ಥಿಯ ಮಹತ್ವ, ಧಾರ್ಮಿಕ ಆಚರಣೆಗಳು ಹಾಗೂ ಸಮಾಜದಲ್ಲಿ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಗತ್ಯದ ಕುರಿತು ಸ್ವಾಮೀಜಿಗಳು ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಗಣೇಶ ಚತುರ್ಥಿಯನ್ನು ಸಂಭ್ರಮ, ಭಕ್ತಿಭಾವದಿಂದ ಆಚರಿಸಿದರು.








