ನ.3 ರಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆ
28/10/2020

ಮಡಿಕೇರಿ ಅ.28 : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2019-20ನೇ ಸಾಲಿನ 9ನೇ ವಾರ್ಷಿಕ ಮಹಾಸಭೆಯು ನ.3 ರಂದು ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬೆಳಗ್ಗೆ 10.30ಕ್ಕೆ ನಗರದ ಕೆಳಗಿನ ಕೊಡವ ಸಮಾಜದಲ್ಲಿ ನಡೆಯಲಿರುವ ಸಭೆಯಲ್ಲಿ ಸದಸ್ಯರುಗಳು ಪಾಲ್ಗೊಂಡು ಬ್ಯಾಂಕಿನ ಪ್ರಗತಿಗೆ ಪೂರಕವಾದ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಬ್ಯಾಂಕ್ ಆಡಳಿತ ಮಂಡಳಿ ಮನವಿ ಮಾಡಿದೆ.
