ಕುಶಾಲನಗದಲ್ಲಿ ಡಿ.10 ರಂದು ಜನ ಸಂಪರ್ಕ ಸಭೆ

ಮಡಿಕೇರಿ ಡಿ.08 : ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸಲು ಸಭೆಯು ಡಿಸೆಂಬರ್, 10 ರಂದು ಬೆಳಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ (ವಿ)., ಸೆಸ್ಕ್, ಮಡಿಕೇರಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿಸೆಂಬರ್, 10 ರಂದು ಮಧ್ಯಾಹ್ನ 1 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ (ವಿ)., ಸೆಸ್ಕ್, ಮಡಿಕೇರಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೋಮವಾರಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
