Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»“ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ” ಸಂಸ್ಮರಣೆ : ನಾಡಿನ ಶಿಲ್ಪಕಲೆಗೆ ಅಮರಶಿಲ್ಪಿ ಜಕಣಾಚಾರಿ ಕೊಡುಗೆ ಅಪಾರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

“ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ” ಸಂಸ್ಮರಣೆ : ನಾಡಿನ ಶಿಲ್ಪಕಲೆಗೆ ಅಮರಶಿಲ್ಪಿ ಜಕಣಾಚಾರಿ ಕೊಡುಗೆ ಅಪಾರ

ಜನವರಿ 1, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.1 : ಕರ್ನಾಟಕ ಶಿಲ್ಪಕಲೆಯ ತವರೂರು ಆಗಿದ್ದು, ನಾಡಿನ ಶಿಲ್ಪಕಲೆಗೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ, ಜಿಲ್ಲಾ ವಿಶ್ವಕರ್ಮ ಒಕ್ಕೂಟ ಇವರ ಸಹಕಾರದಲ್ಲಿ ನಗರದ ಭಾರತೀಯ ವಿದ್ಯಾಭವನದಲ್ಲಿ ಭಾನುವಾರ ನಡೆದ ‘ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತೀಯ ಇತಿಹಾಸದಲ್ಲಿ ಕಲೆಗೆ ತನ್ನದೇ ಆದ ಇತಿಹಾಸ ಇದೆ. ಆ ದಿಸೆಯಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು, ಹಳೆಬೀಡು, ಸೋಮನಾಥಪುರ ಮತ್ತಿತರ ಕಡೆಗಳಲ್ಲಿ ಕೆತ್ತಿರುವ ಕೆತ್ತನೆಗಳೆ ಸಾಕ್ಷಿ ಎಂದು ನುಡಿದರು.
ಆಧುನಿಕ ಜಗತ್ತಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆ ಶಿಲ್ಪಕಲಾ ಕ್ಷೇತ್ರದಲ್ಲಿಯೂ ಸಾಕಷ್ಟು ಬದಲಾವಣೆ ಕಾಣಬಹುದು, ಆ ನಿಟ್ಟಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರು ನಾಡಿಗೆ ನೀಡಿರುವ ಅಮರಶಿಲ್ಪದ ಕೊಡುಗೆಯನ್ನು ಉಳಿಸಿಕೊಂಡು ಹೋಗುವಂತಾಗಬೇಕು ಎಂದು ಡಾ.ನಂಜುAಡೇಗೌಡ ಅವರು ಕರೆ ನೀಡಿದರು.
ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಾಗರಾಜು ಅವರು ಮಾತನಾಡಿ ವಿಶ್ವಕರ್ಮ ಸಮಾಜದಲ್ಲಿ ಕಬ್ಬಿಣ, ಮರಗೆಲಸ, ಶಿಲ್ಪಕಲೆ, ಚಿನ್ನಬೆಳ್ಳಿ ಹೀಗೆ ಐದು ರೀತಿಯ ಕುಲಕಸುಬುಗಳನ್ನು ನಿರ್ವಹಿಸುತ್ತಿದ್ದರು, ಆದರೆ ಕಾಲ ಬದಲಾದಂತೆ ವೃತ್ತಿ ಕೌಶಲವೂ ಬದಲಾಗುತ್ತಿದೆ ಎಂದರು.
‘ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಶಿಲ್ಪಕಲೆಗೆ ಹೆಚ್ಚಿನ ಮಹತ್ವವಿದೆ. ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು ಹಳೆಬೀಡಿನಲ್ಲಿ ಕಲ್ಲಿನಿಂದ ಶಿಲ್ಪಕಲೆಯನ್ನು ಕೆತ್ತಿ ಇಡೀ ವಿಶ್ವವೇ ವೀಕ್ಷಿಸುವಂತೆ ಮಾಡಿದ್ದಾರೆ ಎಂದು ನಾಗರಾಜು ಅವರು ವಿವರಿಸಿದರು.’
ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ದೇವದಾಸ್ ಅವರು ಮಾತನಾಡಿ ವಿಶ್ವಕರ್ಮ ಸಮಾಜದವರು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಲೆಗಳ ಪ್ರದರ್ಶನಕ್ಕೆ ಅವಕಾಶ ಮಾಡಬೇಕು. ಆ ನಿಟ್ಟಿನಲ್ಲಿ ಮಡಿಕೇರಿ ನಗರದಲ್ಲಿ ಕನಿಷ್ಟ 10 ಸೆಂಟು ಜಾಗವನ್ನಾದರೂ ನೀಡಬೇಕು ಎಂದು ಅವರು ಕೋರಿದರು.
ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕರಾದ ಎಚ್.ಎನ್.ಸುಬ್ರಮಣ್ಯ ಅವರು ಮಾತನಾಡಿ ವಿಶ್ವಕರ್ಮ ಸಮಾಜದ ಜನರು ಆರ್ಥಿಕವಾಗಿ ಸಬಲರಾಗಲು ಇನ್ನೂ ಹೆಚ್ಚಿನ ನೆರವು ಒದಗಿಸುವಂತಾಗಬೇಕು ಎಂದು ಅವರು ಮನವಿ ಮಾಡಿದರು.
ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ಅವರು ಮಾತನಾಡಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ತಮ್ಮ ಶಿಲ್ಪ ಕಲೆಯ ಕಾಯಕದ ಮೂಲಕ ಇಡೀ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.
ಸಂಪಾಜೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕುಮಾರ ಅವರು ಮಾತನಾಡಿ ಅಮರಶಿಲ್ಪಿ ಜಕಣಾಚಾರಿ ಅವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ, ಜಕಣಾಚಾರಿ ಅವರು ಕಲ್ಯಾಣ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ ಎಂದು ಹೇಳಿದರು.
ಕರ್ನಾಟಕದ ತುಮಕೂರಿನಿಂದ 9 ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿ ಅವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರೀಡಾಪುರ ಆಗಿದೆ ಎಂದು ಕುಮಾರ ಅವರು ತಿಳಿಸಿದರು.
ಅಮರ ಶಿಲ್ಪಿ ಜಕಣಾಚಾರಿ ಅವರು ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು. ನಾಡಿನಲ್ಲಿ ಹಲವು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಎಂದರು.
ವಿವಿಧ ವೃತ್ತಿ ಕೌಶಲ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿಶ್ವಕರ್ಮ ಸಮಾಜದ ಮಂಜುನಾಥ್, ಅನಿಲ್ ಬಡಿಗೇರ್, ಸುನಿಲ್, ಪುಟ್ಟಣ್ಣ ಆಚಾರ್ಯ, ಮೋಹನ್ ಅವರನ್ನು ಇದೇ ಸಂದರ್ಭದಲ್ಲಿ ಶಾಲು, ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು.
ತಹಶೀಲ್ದಾರ್ ಪಿ.ಎಸ್.ಮಹೇಶ್, ತಾಲ್ಲೂಕು ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಜಗದೀಶ್ ಆಚಾರ್ಯ, ಬಿ.ಸಿ.ಶಂಕರಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.