Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*
  • *ಹಸ್ತಪ್ರತಿಗಳನ್ನು ಕಾಪಾಡುವುದು ಮತ್ತು ಉಳಿಸುವುದು ನಮ್ಮ ಕರ್ತವ್ಯ :
  • *ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ* 
  • *ಮಾನವೀಯ ಮೌಲ್ಯಗಳ ಪ್ರತಿರೂಪ ಬುದ್ಧ : ಬರಹ : ಗೀತಾಂಜಲಿ ಎನ್.ಎಮ್ ಸೋಮವಾರಪೇಟೆ*
  • *ಕಡಂಗಮೂರೂರಿನಲ್ಲಿ ಮೇ 5 ರಂದು ದೈವಗಳ ನೇಮೋತ್ಸವ* 
  • *ಮೇ 3 ರಂದು ವಾಂಡರರ್ಸ್ ಬೇಸಿಗೆ ಶಿಬಿರ ಸಮಾರೋಪ*
  • *ಕೊಡಗು : ಶಾಂತಿಯುತ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕೆ ಭಗವಾನ್ ಬುದ್ಧನ ಸಂದೇಶಗಳು ಮಾರ್ಗದರ್ಶಿ : ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ*
  • *ಒಲಂಪಿಯನ್ ಎ.ಬಿ.ಸುಬ್ಬಯ್ಯ ನಿವಾಸಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕುಟುಂಬಕ್ಕೆ ಸಾಂತ್ವನ*
  • *ಕಡಂಗಮರೂರು ಶ್ರೀ ಭದ್ರಕಾಳಿ ಹಾಗೂ ಶ್ರೀ ಮಹಾವಿಷ್ಣು ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ನೂತನ ರಸ್ತೆ ಉದ್ಘಾಟನೆ *
  • *ಗೋಣಿಕೊಪ್ಪ : ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ನವೀಕೃತ ಪೌಳಿ ಉದ್ಘಾಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ : ಒಪಿಎಸ್ ಜಾರಿಗೆ ಮುಖ್ಯಮಂತ್ರಿ ಅವರ ಜತೆ ಚರ್ಚೆ : ಶಾಸಕ ಅಪ್ಪಚ್ಚು ರಂಜನ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ : ಒಪಿಎಸ್ ಜಾರಿಗೆ ಮುಖ್ಯಮಂತ್ರಿ ಅವರ ಜತೆ ಚರ್ಚೆ : ಶಾಸಕ ಅಪ್ಪಚ್ಚು ರಂಜನ್

ಜನವರಿ 3, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.3 : 2006ರ ಏಪ್ರಿಲ್ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ‘ಹಳೆ ಪಿಂಚಣಿ ಯೋಜನೆ’(ಒಪಿಎಸ್) ಜಾರಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತೊಮ್ಮೆ ಸಿಎಂ ಅವರ ಜತೆ ಸಮಾಲೋಚನೆ ನಡೆಸಿದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಯಾಗಬಹುದು ಎಂದು ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿಂದೆ ಸರ್ಕಾರಿ ನೌಕರರಿಗೆ ಇದ್ದ ಹಳೆ ಪಿಂಚಣಿ ಯೋಜನೆಯನ್ನು ಮುಂದುವರಿಸುವಂತಾಗಬೇಕು. ಸರ್ಕಾರಿ ನೌಕರರು ನೆಮ್ಮದಿಯಿಂದ ನಿವೃತ್ತಿ ಜೀವನ ನಡೆಸುವಂತಾಗಬೇಕು. ನಿವೃತ್ತಿ ಸಂದರ್ಭದಲ್ಲಿ ಆರೋಗ್ಯ ಅತೀ ಮುಖ್ಯವಾಗಿದ್ದು, ಆ ಸಂದರ್ಭದಲ್ಲಿ ಪಿಂಚಣಿ ಅತ್ಯಗತ್ಯವಾಗಿದೆ. ಆದ್ದರಿಂದ ಎನ್‍ಪಿಎಸ್ ಬದಲಾಗಿ ಒಪಿಎಸ್ ಜಾರಿ ಆಗಬೇಕು ಎಂದು ಹೇಳಿದರು.
ಕೊಡಗು ಜಿಲ್ಲೆ ಸೈನಿಕರು ಮತ್ತು ಕ್ರೀಡಾಪಟುಗಳ ನಾಡು. ಜಿಲ್ಲೆಯಲ್ಲಿ ಹೆಚ್ಚಿನ ಸೈನಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಕಿ, ಕ್ರಿಕೆಟ್, ಅಥ್ಲೆಟಿಕ್ಸ್ ಹೀಗೆ ಹಲವು ಕ್ರೀಡೆಯಲ್ಲಿ ಪಾಲ್ಗೊಂಡು ಹೆಸರು ಗಳಿಸಿದ್ದಾರೆ. ಆ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡು ಮತ್ತಷ್ಟು ಹೆಸರು ತರುವಂತಾಗಬೇಕು ಎಂದರು.
ಸರ್ಕಾರಿ ನೌಕರರು ಪ್ರತೀ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಾರೆ. ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಒಂದು ರೀತಿ ಕ್ರಿಯಾಶೀಲ ಚಟುವಟಿಕೆಗೆ ಸಹಕಾರಿಯಾಗಲಿದೆ ಎಂದು ಅಪ್ಪಚ್ಚು ರಂಜನ್ ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ ಸರ್ಕಾರಿ ನೌಕರರ ಚಲನಶೀಲತೆಗೆ ಕ್ರೀಡಾಚಟುವಟಿಕೆ ಸಹಕಾರಿಯಾಗಲಿದೆ. ಇದರಿಂದ ಉತ್ಸಾಹ ಹೆಚ್ಚಲಿದೆ ಎಂದರು.
ಪೌರಾಯುಕ್ತರಾದ ವಿಜಯ ಅವರು ಮಾತನಾಡಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಸ್ಪೂರ್ತಿ ಮತ್ತು ಲವಲವಿಕೆ ದೊರೆಯುತ್ತದೆ ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ ಅವರು ಮಾತನಾಡಿ ಎನ್‍ಪಿಎಸ್ ರದ್ದುಗೊಳಿಸಿ, ಒಪಿಎಸ್‍ನ್ನು ಜಾರಿಗೊಳಿಸಬೇಕು ಎಂದು ಅವರು ಕೋರಿದರು. ಎನ್‍ಪಿಎಸ್‍ನಿಂದ ಅನೇಕ ಗೊಂದಲವಿದೆ. ನಿವೃತ್ತಿ ನಂತರ ನೌಕರರ ಜೀವನ ಕಷ್ಟಸಾಧ್ಯವಾಗಲಿದೆ. ಆ ನಿಟ್ಟಿನಲ್ಲಿ ಎಲ್ಲರೂ ಸರ್ಕಾರಿ ನೌಕರರಿಗೆ ಸಹಕರಿಸಬೇಕು ಎಂದರು.
ಮಡಿಕೇರಿ ನಗರದಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ 40 ಸೆಂಟ್ ಜಾಗ ನೀಡಲಾಗಿದೆ. ಭವನ ನಿರ್ಮಾಣ ಸಂಬಂಧ ಹೆಚ್ಚಿನ ಅನುದಾನ ನೀಡಬೇಕು ಎಂದು ಶಾಸಕರಲ್ಲಿ ಕೋರಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಮಾತನಾಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಗುರುರಾಜ್ (ವಿರಾಜಪೇಟೆ), ಪ್ರದೀಪ್(ಸೋಮವಾರಪೇಟೆ), ಗೌರವ ಅಧ್ಯಕ್ಷರಾದ ಶಿವಕುಮಾರ್, ಮಂಜುನಾಥ್, ಕುಮಾರ, ಶಮ್ಮಿ, ಅನಿತಾ, ಇತರರು ಇದ್ದರು. ನಿರ್ಮಲ ಅವರು ಕ್ರೀಡಾ ಪ್ರತಿಜ್ಞಾ ವಿಧಿ ಭೋದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*

ಮೇ 2, 2026

*ಹಸ್ತಪ್ರತಿಗಳನ್ನು ಕಾಪಾಡುವುದು ಮತ್ತು ಉಳಿಸುವುದು ನಮ್ಮ ಕರ್ತವ್ಯ :

ಮೇ 2, 2026

*ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ* 

ಮೇ 2, 2026

*ಹಸ್ತಪ್ರತಿಗಳನ್ನು ಕಾಪಾಡುವುದು ಮತ್ತು ಉಳಿಸುವುದು ನಮ್ಮ ಕರ್ತವ್ಯ :

ಮೇ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 2 : ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತ ಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ…

*ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ* 

ಮೇ 2, 2026

*ಮಾನವೀಯ ಮೌಲ್ಯಗಳ ಪ್ರತಿರೂಪ ಬುದ್ಧ : ಬರಹ : ಗೀತಾಂಜಲಿ ಎನ್.ಎಮ್ ಸೋಮವಾರಪೇಟೆ*

ಮೇ 1, 2026

*ಕಡಂಗಮೂರೂರಿನಲ್ಲಿ ಮೇ 5 ರಂದು ದೈವಗಳ ನೇಮೋತ್ಸವ* 

ಮೇ 1, 2026

*ಮೇ 3 ರಂದು ವಾಂಡರರ್ಸ್ ಬೇಸಿಗೆ ಶಿಬಿರ ಸಮಾರೋಪ*

ಮೇ 1, 2026

*ಕೊಡಗು : ಶಾಂತಿಯುತ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕೆ ಭಗವಾನ್ ಬುದ್ಧನ ಸಂದೇಶಗಳು ಮಾರ್ಗದರ್ಶಿ : ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ*

ಮೇ 1, 2026

*ಒಲಂಪಿಯನ್ ಎ.ಬಿ.ಸುಬ್ಬಯ್ಯ ನಿವಾಸಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕುಟುಂಬಕ್ಕೆ ಸಾಂತ್ವನ*

ಮೇ 1, 2026

*ಕಡಂಗಮರೂರು ಶ್ರೀ ಭದ್ರಕಾಳಿ ಹಾಗೂ ಶ್ರೀ ಮಹಾವಿಷ್ಣು ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ನೂತನ ರಸ್ತೆ ಉದ್ಘಾಟನೆ *

ಮೇ 1, 2026

*ಗೋಣಿಕೊಪ್ಪ : ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ನವೀಕೃತ ಪೌಳಿ ಉದ್ಘಾಟನೆ*

ಮೇ 1, 2026

*ಮೇ 3 ರಿಂದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಮಾರಿಯಮ್ಮ ಕರಗೋತ್ಸವ*

ಮೇ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.