Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
  • *ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*
  • *ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
  • *ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*
  • *ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*
  • *ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿಕ್ಕರಿಸಿದ ಹೆಚ್.ವಿಶ್ವನಾಥ್ : ಇದು ಕನ್ನಡಿಗರ ಸಮ್ಮೇಳನವಲ್ಲ, ರಾಜಕೀಯ ಸಮ್ಮೇಳನವೆಂದು ಕಿಡಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿಕ್ಕರಿಸಿದ ಹೆಚ್.ವಿಶ್ವನಾಥ್ : ಇದು ಕನ್ನಡಿಗರ ಸಮ್ಮೇಳನವಲ್ಲ, ರಾಜಕೀಯ ಸಮ್ಮೇಳನವೆಂದು ಕಿಡಿ

ಜನವರಿ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.5 : ಹಾವೇರಿಯಲ್ಲಿ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ದಿಕ್ಕರಿಸಿದ್ದಾರೆ. ಇದು ಕನ್ನಡಿಗರ ಸಮ್ಮೇಳನವಲ್ಲ, ಆಲ್ ಪಾರ್ಟಿ ಲೀಡರ್ಸ್ ಅಸೋಸಿಯೇಷನ್ ನ ರಾಜಕೀಯ ಸಮ್ಮೇಳನ ಎಂದು ಅವರು ಕಿಡಿ ಕಾರಿದ್ದಾರೆ.
ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ನಡೆಯುತ್ತಿರುವ ಸಮ್ಮೇಳನಕ್ಕೆ ಸರ್ಕಾರ 20 ಕೋಟಿ ರೂ.ಗಳ ಬೃಹತ್ ಮೊತ್ತದ ಅನುದಾನವನ್ನು ನೀಡಿದೆ. ಆದರೆ ಸಮ್ಮೇಳನದ ಕುರಿತು ಪೂರ್ವಭಾವಿ ಸಭೆ ನಡೆಸಿಲ್ಲ, ಮಾರ್ಗಸೂಚಿಯನ್ನು ನೀಡಿಲ್ಲ. ಊಟ, ತಿಂಡಿ, ಬಾಜ, ಬಜಂತ್ರಿ, ಏಲಕ್ಕಿ ಮಾಲೆ ಇಷ್ಟೇ ಸಮ್ಮೇಳನವೇ ಎಂದು ಪ್ರಶ್ನಿಸಿದರು.
ಸಮ್ಮೇಳನದಲ್ಲಿ ಸುಮಾರು 85 ಸಾಧಕರನ್ನು ಸನ್ಮಾನಿಸಲಾಗುತ್ತಿದೆ, ಆದರೆ ಈ ಪಟ್ಟಿಯಲ್ಲಿ ಒಬ್ಬರೇ ಒಬ್ಬರು ಮುಸ್ಲಿಮರಿಲ್ಲ. ಜಾನಪದ ವಿದ್ವಾಂಸ ಡಾ.ಕರೀಂ ಖಾನ್, ಅಖಿಲ ಭಾರತ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಉನ್ನತ ಪ್ರಶಸ್ತಿಗಳನ್ನು ಪಡೆದವರನ್ನು ಕೂಡ ಸನ್ಮಾನಿತರ ಪಟ್ಟಿಯಲ್ಲಿ ಸೇರಿಸಿಲ್ಲ. ಹಿಂದಿನ ಸಮ್ಮೇಳನಗಳಲ್ಲಿ ದಲಿತ ಸಮಾವೇಶ ನಡೆಯುತ್ತಿತ್ತು, ಆದರೆ ಈ ಬಾರಿ ದಮನಿತರ ಸಮಾವೇಶ ಎಂದು ಬದಲಾಯಿಸಲಾಗಿದೆ. ಅಧ್ಯಕ್ಷರಿಗೆ ದಲಿತ, ದಮನಿತರ ವ್ಯತ್ಯಾಸ ತಿಳಿದಿಲ್ಲವೇ ಎಂದು ಅಸಮಾಧಾನ ವ್ಯಕ್ತಪಡಿಸಿದ ವಿಶ್ವನಾಥ್, ಎಲ್ಲರನ್ನು ಒಗ್ಗೂಡಿಸಿ ಕನ್ನಡ ಸಮ್ಮೇಳನ ಮಾಡಬೇಕೆ ಹೊರತು ಜಾತಿ, ಧರ್ಮದ ಸಮ್ಮೇಳನವನ್ನಾಗಿ ಮಾಡುವುದು ಸರಿಯಲ್ಲ. ಶೇ.70 ರಷ್ಟು ಮಂದಿ ಕನ್ನಡ ಮಾತನಾಡುವ ಮುಸ್ಲಿಮರಿದ್ದಾರೆ, 14 ಲಕ್ಷಕ್ಕೂ ಅಧಿಕ ಮಂದಿ ಬ್ಯಾರಿಗಳಿದ್ದಾರೆ, ಕೊಡವ, ತುಳು ಭಾಷಿಕರೂ ಇದ್ದಾರೆ. ಎಲ್ಲರನ್ನು ದೂರ ಇಟ್ಟು ಸಮ್ಮೇಳನ ಮಾಡುತ್ತಿದ್ದಾರೆ. ಪುಸ್ತಕ ಪ್ರಾಧಿಕಾರ ಪುಸ್ತಕಗಳನ್ನು ಖರೀದಿ ಮಾಡಿದೆ, ಆದರೆ ಲೇಖಕರಿಗೆ ಸರ್ಕಾರ ಇಲ್ಲಿಯವರೆಗೆ ಹಣವನ್ನು ನೀಡಿಲ್ಲ ಎಂದು ಟೀಕಿಸಿದರು.
ಕನ್ನಡ ಶಾಲೆಗಳು ಮುಚ್ಚಲ್ಪಡುತ್ತಿವೆ, ರಾಜಕೀಯ ಕ್ಷೇತ್ರ ಮೈಲಿಗೆಯಾಗುತ್ತಿದೆ, ಈ ವಿಚಾರಗಳು ಸೇರಿದಂತೆ ಸಾಹಿತ್ಯ, ಶಿಕ್ಷಣ, ಅಕ್ಷರ, ಕನ್ನಡಿಗರ ಪರ ಗಂಭೀರ ಚರ್ಚೆಗೆ ಸಮ್ಮೇಳನ ಸಾಕ್ಷಿಯಾಗುವ ಬದಲು ದಿಕ್ಕು ದಿಸೆಯಿಲ್ಲದಂತ್ತಾಗಿದೆ. ಈ ಕಾರಣದಿಂದ ಹಲವರು ಸಮ್ಮೇಳವನ್ನು ಬಹಿಷ್ಕರಿಸಿದ್ದಾರೆ, ನನಗೂ ತೀವ್ರ ಬೇಸರವಾಗಿರುವುದರಿಂದ ಸಮ್ಮೇಳನವನ್ನು ದಿಕ್ಕರಿಸಿ ಹಾಜರಾಗದೆ ಇರಲು ನಿರ್ಧರಿಸಿರುವುದಾಗಿ ಹೇಳಿದರು.
ಜನತಂತ್ರ ವ್ಯವಸ್ಥೆಯಲ್ಲಿ ಮತದಾರ ಆತ್ಮವಿದ್ದಂತೆ, ಆದರೆ ಆತ್ಮವನ್ನೇ ಕಳವು ಮಾಡುವಂತಹ ಇಂದಿನ ಬೆಳವಣಿಗೆ ಅತ್ಯಂತ ವಿಷಾದಕರ ಎಂದು ಬೇಸರ ವ್ಯಕ್ತಪಡಿಸಿದರು.
::: ಮೀಸಲಾತಿ ಸಂವಿಧಾನ ವಿರೋಧಿ :::
ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದಲ್ಲಿ ದೇಶದಲ್ಲಿಯೇ ಕರ್ನಾಟಕ ಮಾದರಿ ರಾಜ್ಯವಾಗಿದೆ. ಆದರೆ ಇತ್ತೀಚೆಗೆ ಮೀಸಲಾತಿಯ ಹಂಚಿಕೆಯ ವಿಚಾರದಲ್ಲಿ ಸರ್ಕಾರ ಸಂವಿಧಾನ ವಿರೋಧಿ ನಡೆಗಳನ್ನು ಅನುಸರಿಸುತ್ತಿದೆ. ಪಂಚಮಸಾಲಿ ಮಠಾಧೀಶರು ಇಟ್ಟ ಬೇಡಿಕೆಗೆ ವ್ಯತಿರಿಕ್ತವಾಗಿ ಭರವಸೆ ನೀಡಿರುವ ಸರ್ಕಾರ ಗೊಂದಲ ಸೃಷ್ಟಿ ಮಾಡಿದೆ, ಸಂವಿಧಾನದಲ್ಲಿ ಅವಕಾಶವಿಲ್ಲದ ಭರವಸೆಗಳನ್ನು ನೀಡಿ ಜನರಿಗೆ ಸುಳ್ಳು ಹೇಳಿ ಹಾದಿ ತಪ್ಪಿಸುತ್ತಿದೆ ಎಂದು ವಿಶ್ವನಾಥ್ ಗಂಭೀರ ಆರೋಪ ಮಾಡಿದರು.
ಮೀಸಲಾತಿ ಎನ್ನುವುದು ಬಡತನ ನಿರ್ಮೂಲನೆಯ ಕಾರ್ಯಕ್ರಮವಲ್ಲ, ಸರ್ಕಾರ ಮೀಸಲಾತಿ ನೀಡುವುದಾದರೆ ನೀಡುವುದಾಗಿ ದೃಢವಾಗಿ ಹೇಳಲಿ. ಮೀಸಲಾತಿ ಹೆಸರಿನಲ್ಲಿ ಜಾತಿ, ಜಾತಿಗಳ ನಡುವೆ ಕಲಹಕ್ಕೆ ದಾರಿ ಮಾಡಿಕೊಡಬಾರದು. ಸಾಮರಸ್ಯ ಮೂಡಿಸುವುದು ಸರ್ಕಾರದ ಜವಾಬ್ದಾರಿಯೇ ಹೊರತು ದಾರಿ ತಪ್ಪಿಸುವುದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
::: ಆಡಳಿತ ಕುಂಟಿತ :::
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತ ಕುಟಿಂತವಾಗಿದೆ, ಬಜರಂಗದಳ, ಶ್ರೀರಾಮಸೇನೆಯಂತಹ ಎಕ್ಸ್‍ಟ್ರಾ ಫೋರ್ಸ್ ರೂಲ್ಸ್ ರಾಜ್ಯದಲ್ಲಿದೆ ಎಂದು ವಿಶ್ವನಾಥ್ ಟೀಕಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.5 : ಕೊಡಗು ಮುಸ್ಲಿಂ ಸ್ಟೋಟ್ಸ್ ಟ್ರಸ್ಟ್ ವತಿಯಿಂದ 21ನೇ ವರ್ಷದ ಕೊಡಗು ಮುಸ್ಲಿಂ ಕಪ್…

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 2026

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026

*ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*

ಮಾರ್ಚ್ 5, 2026

*ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*

ಮಾರ್ಚ್ 5, 2026

*ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.