Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
  • *ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*
  • *ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
  • *ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*
  • *ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*
  • *ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಜಿ.ಪಂ ಕ್ಷೇತ್ರ ಪುನರ್ ವಿಂಗಡಣೆಯಿಂದ ಕೊಡಗಿಗೆ ಅನ್ಯಾಯ : ಕಾಂಗ್ರೆಸ್ ಆಕ್ಷೇಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜಿ.ಪಂ ಕ್ಷೇತ್ರ ಪುನರ್ ವಿಂಗಡಣೆಯಿಂದ ಕೊಡಗಿಗೆ ಅನ್ಯಾಯ : ಕಾಂಗ್ರೆಸ್ ಆಕ್ಷೇಪ

ಜನವರಿ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.5 : ಜಿ.ಪಂ ಕ್ಷೇತ್ರಗಳನ್ನು ಪುನರ್ ವಿಂಗಡಿಸುವ ಮೂಲಕ ಕೊಡಗು ಜಿಲ್ಲೆಗೆ ಅನ್ಯಾಯ ಮಾಡಲಾಗಿದೆ. 29 ಕ್ಷೇತ್ರಗಳನ್ನು 25 ಕ್ಷೇತ್ರಗಳಿಗೆ ಸೀಮಿತಗೊಳಿಸಿರುವುದರಿಂದ ಅನುದಾನದ ಕೊರತೆಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಆರೋಪಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಈಗ ಇರುವ 29 ಕ್ಷೇತ್ರಗಳನ್ನು ಉಳಿಸಬೇಕು ಅಥವಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿದರು.
ಕ್ಷೇತ್ರಗಳ ಪುನರ್ ವಿಂಗಡಣೆ ವಿರುದ್ಧ ಜ.16 ರಂದು ಜಿಲ್ಲಾ ಕಾಂಗ್ರೆಸ್ ಆಕ್ಷೇಪಣೆ ಸಲ್ಲಿಸಲಿದೆ ಎಂದು ತಿಳಿಸಿದ ಅವರು, ಈ ವಿಚಾರದಲ್ಲಿ ಜಿಲ್ಲೆಯ ಶಾಸಕರುಗಳು ಹಾಗೂ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕೆಂದು ತಿಳಿಸಿದರು.
ಜಿ.ಪಂ ಕ್ಷೇತ್ರಗಳನ್ನು 25 ಕ್ಕೆ ಇಳಿಕೆ ಮಾಡಿರುವುದು ಮತ್ತು ಗಡಿ ಗುರುತು ವಿಚಿತ್ರ ರೀತಿಯಲ್ಲಿದೆ. 60- 70 ಕಿ.ಮೀ ಕ್ರಮಿಸಬೇಕಾದ ಬಿರುನಾಣಿ- ಬಿಟ್ಟಂಗಾಲಕ್ಕೆ ಸಂಪರ್ಕವೇ ಇಲ್ಲದಿದ್ದರೂ ಜಿ.ಪಂ ಕ್ಷೇತ್ರವನ್ನು ಸೃಷ್ಟಿಸಲಾಗಿದೆ. ಈ ರೀತಿಯ ಅರ್ಥಹೀನ ಕ್ರಮಗಳಿಂದ ಮುಂದೆ ಬರುವ ಜಿ.ಪಂ ಸದಸ್ಯರ ಕಾರ್ಯನಿರ್ವಹಣೆಗೂ ಕಷ್ಟವಾಗಲಿದೆ. ಕ್ಷೇತ್ರ ಕಡಿಮೆಯಾದಂತೆ ಜಿಲ್ಲೆಗೆ ಬರುವ ಅನುದಾನವೂ ಕಡಿಮೆಯಾಗಲಿದ್ದು, ಅಭಿವೃದ್ಧಿಗೆ ತೀವ್ರ ಹಿನ್ನಡೆಯಾಗಲಿದೆ ಎಂದು ಅವರು ಗಮನ ಸೆಳೆದರು.
::: ಆರ್‍ಟಿಸಿ ದುಬಾರಿ :::
ಆರ್‍ಟಿಸಿ ಶುಲ್ಕವನ್ನು 15 ರೂ. ಯಿಂದ 25 ರೂ.ಗೆ ಏರಿಕೆ ಮಾಡಿದ್ದು, ಇದು ರೈತರಿಗೆ ಹೊರೆಯಾಗುತ್ತಿದೆ. ಪ್ರತಿಯೊಂದಕ್ಕೂ ಆರ್‍ಟಿಸಿ ನೀಡಬೇಕಾದ ಅನಿವಾರ್ಯತೆ ಇದ್ದು, 25 ರೂ.ವನ್ನು ಭರಿಸುವುದು ಕಷ್ಟವಾಗುತ್ತಿದೆ. ತಕ್ಷಣ ಈ ದರವನ್ನು ಕಡಿಮೆ ಮಾಡಿ ರೂ.15 ಕ್ಕೆ ಸೀಮಿತಗೊಳಿಸಬೇಕು ಎಂದು ಧರ್ಮಜ ಉತ್ತಪ್ಪ ಇದೇ ಸಂದರ್ಭ ಒತ್ತಾಯಿಸಿದರು.
ಕಂದಾಯ ಇಲಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಕಡತಗಳ ವಿಲೇವಾರಿ ಸುಲಭವಾಗಿ ಆಗುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಚುರುಕಾಗಿದ್ದು, ವಲಯ ಮಟ್ಟದಿಂದಲೇ ಬಲಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
::: ಚುನಾವಣೆ ನಡೆಸಲು ಇಷ್ಟವಿಲ್ಲ :::
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ ಜಿ.ಪಂ ಫಲಿತಾಂಶ ಸಮೀಕ್ಷೆಯ ಪ್ರತಿರೂಪವಾಗಲಿದ್ದು, ಸೋಲಿನ ಆತಂಕವಿರುವ ಸರ್ಕಾರ ಜಿ.ಪಂ ಚುನಾವಣೆ ನಡೆಯಬಾರದು ಎನ್ನುವ ಉದ್ದೇಶದಿಂದಲೇ ಈ ರೀತಿಯ ಅನ್ಯಾಯ ಮಾಡಿದೆ ಎಂದು ಟೀಕಿಸಿದರು.
ಜನಗಣತಿ ಆಧಾರದಲ್ಲಿ ಕ್ಷೇತ್ರಗಳ ಸಂಖ್ಯೆಯನ್ನು ಏರಿಕೆ ಮಾಡಲು ಅವಕಾಶವಿದೆ. ಆದರೆ ಜನಸಂಖ್ಯೆ ಏರಿಕೆಯಾದರೂ ಜಿ.ಪಂ ಕ್ಷೇತ್ರದ ಸಂಖ್ಯೆಯನ್ನು 29 ರಿಂದ 25 ಕ್ಕೆ ಇಳಿಕೆ ಮಾಡಲಾಗಿದೆ. ಗೊಂದಲ ಸೃಷ್ಟಿಸುವ ಮೂಲಕ ಚುನಾವಣೆಯನ್ನು ಮುಂದೂಡುವ ಪ್ರಯತ್ನದಲ್ಲಿ ಸರ್ಕಾರ ತೊಡಗಿದ್ದು, ಇದಕ್ಕಾಗಿ ಕೊಡಗನ್ನು ಬಲಿಪಶು ಮಾಡಲಾಗಿದೆ. ಎರಡನೇ ಪಂಕ್ತಿಯ ನಾಯಕತ್ವವವನ್ನು ಸೃಷ್ಟಿಸುವ ಜಿ.ಪಂ ಒಂದು ಅನುಭವದ ವ್ಯವಸ್ಥೆಯಾಗಿದ್ದು, ಕೊಡಗಿಗೆ ಸಂಬಂಧಿಸಿದಂತೆ ಕಡಿತಗೊಂಡ ನಾಲ್ಕು ಕ್ಷೇತ್ರಗಳಲ್ಲಿ ಉದಯವಾಗಬಹುದಾಗಿದ್ದ ನಾಯಕತ್ವಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಜಿಲ್ಲೆಗೆ ಇಷ್ಟೆಲ್ಲಾ ಅನ್ಯಾಯವಾಗುತ್ತಿದ್ದರೂ ಶಾಸಕರುಗಳು ಮೌನಕ್ಕೆ ಶರಣಾಗಿರುವುದು ಹಾಸ್ಯಾಸ್ಪದ ಎಂದು ಲೇವಡಿ ಮಾಡಿದ ಅವರು ಜಿ.ಪಂ ಕ್ಷೇತ್ರಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಅಥವಾ 30- 32 ಕ್ಕೆ ಏರಿಕೆ ಮಾಡಬೇಕೆಂದು ಒತ್ತಾಯಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಮಾತನಾಡಿ ಮೂರು ವಿಧಾನಸಭಾ ಕ್ಷೇತ್ರಗಳು ಎರಡಕ್ಕೆ ಸೀಮಿತವಾಗಿದೆ, ಇದೀಗ ನಾಲ್ಕು ಜಿ.ಪಂ ಕ್ಷೇತ್ರಗಳನ್ನು ಕಳೆದುಕೊಳ್ಳಲಾಗಿದೆ. ಆದರೂ ಶಾಸಕರುಗಳು ಜಿಲ್ಲೆಯ ಬಗ್ಗೆ ಯಾವುದೇ ಆಸಕ್ತಿ ತೋರುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಕೊಡಗು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಈಗಿರುವ ಜಿ.ಪಂ ಕ್ಷೇತ್ರಗಳನ್ನೇ ಮುಂದುವರೆಸಬೇಕೆಂದು ಒತ್ತಾಯಿಸಿದರು.
ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಲಭ್ಯವಿಲ್ಲ ಎನ್ನುವುದು ಅಧಿವೇಶನದ ಸಂದರ್ಭ ಖಾತ್ರಿಯಾಗಿದೆ. ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳಿಲ್ಲ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಜಿ.ಪಂ ಮಾಜಿ ಸದಸ್ಯ ಬಾನಂಡ ಪ್ರತ್ಯು ಹಾಗೂ ಪ್ರಮುಖರಾದ ಅಪ್ರೋಜ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.5 : ಕೊಡಗು ಮುಸ್ಲಿಂ ಸ್ಟೋಟ್ಸ್ ಟ್ರಸ್ಟ್ ವತಿಯಿಂದ 21ನೇ ವರ್ಷದ ಕೊಡಗು ಮುಸ್ಲಿಂ ಕಪ್…

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 2026

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026

*ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*

ಮಾರ್ಚ್ 5, 2026

*ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*

ಮಾರ್ಚ್ 5, 2026

*ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.