Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ರೋಟರಿ ವುಡ್ಸ್ ನಿಂದ ಡಾ.ಸೂಯ೯ಕುಮಾರ್, ಪ್ರಮೋದ್ ಕುಮಾರ್ ಗೆ ಗೌರವ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರೋಟರಿ ವುಡ್ಸ್ ನಿಂದ ಡಾ.ಸೂಯ೯ಕುಮಾರ್, ಪ್ರಮೋದ್ ಕುಮಾರ್ ಗೆ ಗೌರವ ಸನ್ಮಾನ

ಜನವರಿ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.10 : ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿಯು ಮಹಿಳೆಯರಿಗೆ ಆದ್ಯತೆ ನೀಡಿದ್ದು, ರೋಟರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸದಸ್ಯೆಯರಾಗಿ ಸೇಪ೯ಡೆಯಾಗುತ್ತಿರುವುದು ಮಹತ್ವದ ವಿಚಾರವಾಗಿದೆ ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಪ್ರಕಾಶ್ ಕಾರಂತ್ ಶ್ಲಾಘಿಸಿದ್ದಾರೆ.

ಮಡಿಕೇರಿ ರೋಟರಿ ವುಡ್ಸ್ ಗೆ ಅಧಿಕೖತ ಭೇಟಿ ನೀಡಿ ಸಭಾ ಕಾಯ೯ಕ್ರಮ ಉದ್ಗಾಟಿಸಿ ಮಾತನಾಡಿದ ರೋಟರಿ ಜಿಲ್ಲಾ ಗವನ೯ರ್ ಪ್ರಕಾಶ್ ಕಾರಂತ್, ಪರಿಪೂಣ೯ತೆಯತ್ತ ಸಾಗಲು ಕಾಲದಿಂದ ಕಾಲಕ್ಕೆ ಬದಲಾವಣೆ ಅಗತ್ಯ. ರೋಟರಿಯು ಸದಾ ಬದಲಾವಣೆಗೆ ಒಗ್ಗುತ್ತಾ, ಅಂಥ ಬದಲಾವಣೆಗಳಿಗೆ ತಕ್ಕಂತೆ ತನ್ನ ಕಾಯ೯ಯೋಜನೆಗಳನ್ನು ರೂಪಿಸುತ್ತಿದೆ. ಮಹಿಳಾ ಸದಸ್ಯರನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸೇಪ೯ಡೆ ಮಾಡುತ್ತಾ ಮಹಿಳೆಯರಿಗೂ ಸೂಕ್ತ ಅವಕಾಶ ಕಲ್ಪಿಸುತ್ತಾ ಬಂದಿರುವ ರೋಟರಿಗೆ 117 ವಷ೯ಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಈ ವಷ೯ ಜೆನಿಫರ್ ಜೋನ್ಸ್ ಎಂಬ ಮಹಿಳೆಯೇ ಅಂತರರಾಷ್ಟ್ರೀಯ ಅಧ್ಯಕ್ಷೆಯಾಗಿ ನೇಮಕವಾಗಿ ಅತ್ಯಂತ ಸಶಕ್ತವಾಗಿ ಕಾಯ೯ನಿವ೯ಹಿಸುತ್ತಿರುವುದು ಶ್ಲಾಘನೀಯ ಮತ್ತು ಹೆಮ್ಮೆಯ ವಿಚಾರ. ಮಹಿಳೆಯರ ಸಮಾನ ಹಕ್ಕುಗಳಿಗೆ ರೋಟರಿಯು ಮನ್ನಣೆ ನೀಡಿದೆ.

ಶೇ.30 ರಷ್ಟು ಮಹಿಳಾ ಸದಸ್ಯೆಯರನ್ನು ಪ್ರತೀ ರೋಟರಿ ಸಂಸ್ಥೆಗಳೂ ಸೇಪ೯ಡೆಗೊಳಿಸುವ ಹೊಣೆಗಾರಿಕೆ ಹೊಂದಿದೆ, ರೋಟರಿಯಂಥ ಸಾಮಾಜಿಕ ಸೇವಾ ಸಂಸ್ಥೆಗೆ ಸೇಪ೯ಡೆಯಾಗಲು ಮಹಿಳೆಯರೂ ಮುಂದೆ ಬರಬೇಕು ಎಂದೂ ಕಾರಂತ್ ಕರೆ ನೀಡಿದರು. ಪ್ರತೀಯೋವ೯ರು ತಾವು ಜೀವಿಸಿದ ಕಾಲಮಾನದಲ್ಲಿ ಸಮಾಜಕ್ಕೆ ನೀಡಿದ ಕೊಡುಗೆಯೇ ಶಾಶ್ವತವೇ ವಿನಾ ಬದುಕಿನಲ್ಲಿ ಗಳಿಸಿದ್ದು ಉಳಿಸಿದ್ದು ಬೇರೆಯವರ ಪಾಲಾಗಿ ಆಥಿ೯ಕ ಸಾಧನೆಗಳು ಮೂಲೆಗುಂಪಾಗಿ ಸಮಾಜಕ್ಕೆ ನೀಡಿದ ಕೊಡುಗೆಗಳೇ ಶಾಶ್ವತವಾಗಿರುತ್ತದೆ ಎಂದು  ಅಭಿಪ್ರಾಯಪಟ್ಟರು.

ಮಡಿಕೇರಿಯಲ್ಲಿ 3 ನೇ ಸಂಸ್ಥೆಯಾಗಿ, ರೋಟರಿ ವಲಯ 6 ರಲ್ಲಿ 14 ನೇ ಕ್ಲಬ್ ಆಗಿ ಪ್ರಾರಂಭವಾದ ರೋಟರಿ ವುಡ್ಸ್ ಕಳೆದ 7 ತಿಂಗಳಲ್ಲಿ ಬೇರೆ ಯಾವುದೇ ಹಳೇ ಸಂಸ್ಥೆಗಳಿಗೆ ಕಡಮೆಯಿಲ್ಲದಂತೆ ಅತ್ಯುತ್ತಮವಾಗಿ ಕಾಯ೯ನಿವ೯ಹಿಸಿದೆ. ತ್ರಿವಿಕ್ರಮ ಸಾಧನೆ ರೋಟರಿ ವುಡ್ಸ್ ನಿಂದ ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಆಗಿದೆ ಎಂದೂ ಹೇಳಿದ ಕಾರಂತ್, ಹೊಸ ಸಂಸ್ಥೆಯಾಗಿ 25 ಸ್ಥಾಪಕ ಸದಸ್ಯರೊಂದಿಗೆ 10 ಹೊಸ ಸದಸ್ಯರನ್ನು 7 ತಿಂಗಳಲ್ಲಿ ರೋಟರಿ ಸಮುದಾಯಕ್ಕೆ ಸೇಪ೯ಡೆ ಮಾಡಿರುವುದು ಮಾದರಿ ಕಾಯ೯ವಾಗಿದೆ ಎಂದೂ ಅವರು ಶ್ಲಾಘಿಸಿದರು.

ರೋಟರಿ ವಲಯ 6 ರ ಸಹಾಯಕ ಗವನ೯ರ್ ರತನ್ ತಮ್ಮಯ್ಯ ಮಾತನಾಡಿ, ರೋಟರಿ ವುಡ್ಸ್ ನ ಕಾಯ೯ಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರಲ್ಲದೇ ಈ ವಷ೯ದ ರೋಟರಿಯ ಜಿಲ್ಲಾ ಯೋಜನೆಗಳಾದ ವನಸಿರಿ, ಆರೋಗ್ಯ ಸಿರಿ, ಜಲಸಿರಿ, ವಿದ್ಯಾಸಿರಿಗಳನ್ನು ಯಶಸ್ವಿಯಾಗಿ ರೋಟರಿ ವುಡ್ಸ್ ಅಳವಡಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರೋಟರಿ ವುಡ್ಸ್ ಅಧ್ಯಕ್ಷ ಎಸ್.ಎಸ್.ಸಂಪತ್ ಕುಮಾರ್ ಮಾತನಾಡಿ, ಮಡಿಕೇರಿಯಲ್ಲಿ 3 ನೇ ರೋಟರಿ ಸಂಸ್ಥೆಯಾಗಿ ಉದಯಿಸಿದ ರೋಟರಿ ವುಡ್ಸ್ ಸದಸ್ಯರೆಲ್ಲರ ಸಹಕಾರದೊಂದಿಗೆ ಅನೇಕ ಜನೋಪಯೋಗಿ ಯೋಜನೆಗಳನ್ನು ಕೈಗೊಂಡಿದ್ದು ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಆದ್ಯತೆ ನೀಡಿದೆ ಎಂದು ಮಾಹಿತಿ ನೀಡಿದರು.

ರೋಟರಿ ವಲಯ ಸೇನಾನಿ ಎನ್.ಡಿ. ಅಚ್ಚಯ್ಯ, ರೋಟರಿ ವುಡ್ಸ್ ಕಾಯ೯ದಶಿ೯ ವಸಂತ್ ಕುಮಾರ್ ವೇದಿಕೆಯಲ್ಲಿದ್ದರು.

ರೋಟರಿ ವುಡ್ಸ್ ಮಡಿಕೇರಿ ವತಿಯಿಂದ ಸೇವಾ ಸಾಧನೆಗಾಗಿ ಮಡಿಕೇರಿಯ ಹಿರಿಯ ವೈದ್ಯ ಡಾ.ಕೆ.ಬಿ.ಸೂಯ೯ಕುಮಾರ್ ಮತ್ತು ತೋಟಗಾರಿಕೆ ಇಲಾಖಾಧಿಕಾರಿ ಪ್ರಮೋದ್ ಕುಮಾರ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ರೋಟರಿ ಜಿಲ್ಲಾ ಗವನ೯ರ್ ಪ್ರಕಾಶ್ ಕಾರಂತ್, ಸಹಾಯಕ ಗವನ೯ರ್ ರತನ್ , ವಲಯ ಸೇನಾವಿ ಅಚ್ಚಯ್ಯ, ರೋಟರಿ ವುಡ್ಸ್ ಅಧ್ಯಕ್ಷ ಸಂಪತ್ ಕುಮಾರ್, ಕಾಯ೯ದಶಿ೯ ವಸಂತ್ ಕುಮಾರ್ ಗೌರವ ನೆರವೇರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.