Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕೂಡುಮಂಗಳೂರು : ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ  : ಮಕ್ಕಳಿಂದ ಸಂತಸದ ಕಲಿಕೆ 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡುಮಂಗಳೂರು : ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ  : ಮಕ್ಕಳಿಂದ ಸಂತಸದ ಕಲಿಕೆ 

ಜನವರಿ 12, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೂಡಿಗೆ ಜ.12 : ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೂಡಿಗೆ ಕ್ಲಸ್ಟರ್ ಕೇಂದ್ರದ ವತಿಯಿಂದ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್.ಘಟಕ ಹಾಗೂ ಎಸ್.ಡಿ.ಎಂ.ಸಿ.ಸಹಯೋಗದೊಂದಿಗೆ  ( (ಜ.12 ರಿಂದ) ಆರಂಭಗೊಂಡ ಎರಡು ದಿನಗಳ ಕಾಲದ ಕೂಡಿಗೆ ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ ನೀಡಲಾಯಿತು.

ತರಗತಿ ಕೋಣೆಯ ಪಾಠದಿಂದ ಹೊರಬಂದ ಮಕ್ಕಳು ಆಟ- ಪಾಠ, ಹಾಡು- ನೃತ್ಯ, ಕರಕುಶಲ ಕಲೆ ಹಾಗೂ ಚಿತ್ರಕಲೆ ರಚನೆ ಮತ್ತಿತರ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ದಿನವಿಡೀ ತಮ್ಮನ್ನು ತೊಡಗಿಸಿಕೊಂಡು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಮಕ್ಕಳು ಸ್ವತಃ ತಾವೇ ತಯಾರಿಸಿಕೊಂಡಿದ್ದ ಕಾಗದದ ಟೋಪಿ ಧರಿಸಿ ಸಂಭ್ರಮಿಸಿದರು.

ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಿಂದ ಆಗಮಿಸಿದ್ದ 4 ರಿಂದ 9ನೇ ತರಗತಿವರೆಗಿನ 120ಕ್ಕೂ ಹೆಚ್ಚಿನ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿ ತಮ್ಮನ್ನು ತಾವು ಮೈಮರೆತು ನಲಿಯುತ್ತಾ ಕಲಿಕೆಯಲ್ಲಿ ತೊಡಗಿದ್ದು, ಕಂಡುಬಂತು.
ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಈ ಹಬ್ಬದ ಮೂಲಕ ಮಕ್ಕಳು ತಮ್ಮನ್ನು ತಾವು ಸ್ವತಃ ಸ್ವಕಲಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಅನುಭವ ಹಾಗೂ ಚೇತೋಹಾರಿ ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ವೃದ್ಧಿಸಲು ಸಹಕಾರಿಯಾದ ಈ ಕಲಿಕಾ ಹಬ್ಬವು
ಮಕ್ಕಳಲ್ಲಿ ಕ್ರಿಯಾಶೀಲ ವ್ಯಕ್ತಿತ್ವ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸ ಬೆಳೆಸುವಲ್ಲಿ ಉತ್ತಮ ವೇದಿಕೆ ಒದಗಿಸುತ್ತದೆ ಎಂದರು.
ಮಕ್ಕಳ ಕಲಿಕಾ ಹಬ್ಬದ ಮಹತ್ವ ಕುರಿತು ಮಾತನಾಡಿದ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಮಗುವಿನ ಪ್ರಶ್ನೆಯೇ ಪ್ರಜ್ಞೆಯಾಗಲಿದೆ! ಏಕೆಂದರೆ “ಕಲಿಕಾ ಹಬ್ಬ’ದ ಮೂಲ ಆಶಯವೇ “ಪ್ರಶ್ನೆಯು ಪ್ರಜ್ಞೆ ಯಾಗಲಿ’ ಎಂಬುದು. ಮಗು ತನ್ನನ್ನು ತಾನು ರಚನಾತ್ಮಕ ತರಗತಿಯೊಳಗೆ ತೊಡಗಿಸಿಕೊಳ್ಳಲಿದೆ. ಇದು ಮಕ್ಕಳ ಸಂತಸದ ಕಲಿಕೆಯಾಗಿದೆ ಎಂದರು.
ಕೋವಿಡ್ ಹಿನ್ನೆಲೆಯಲ್ಲಿ ಆರಂಭವಾದ ಕಲಿಕಾ ಚೇತರಿಕೆಗೆ ಪೂರಕವಾಗಿ ಮಕ್ಕಳ ಕಲಿಕಾ ಹಬ್ಬವು ಮಕ್ಕಳ ಕಲಿಕೆಯನ್ನು ಖಾತ್ರಿಪಡಿಸಲು ಸಹಕಾರಿಯಾಗಿದೆ ಎಂದರು.
ಮಕ್ಕಳ ಕಲಿಕಾ ಹಬ್ಬದ ರೂಪುರೇಷೆ ಕುರಿತು ವಿವರಿಸಿದ ಸಿ ಆರ್ ಪಿ ಕೆ. ಶಾಂತಕುಮಾರ್, ಕಲಿಕಾ ಹಬ್ಬದಲ್ಲಿ ಮಗು “ಮಾಡು-ಆಡು’, “ಊರು ತಿಳಿಯೋಣ’, “ಕಾಗದ-ಕತ್ತರಿ’, “ಆಡು-ಹಾಡು’ ಎಂಬ ನಾಲ್ಕು ಗುಂಪುಗಳಲ್ಲಿ ಅನೇಕ ನಾವೀನ್ಯಪೂರ್ಣವಾದ ವಿಚಾರಗಳನ್ನು ಕಲಿಯಲಿದೆ. ಇಲ್ಲಿ ಮಗುವಿಗೆ ಹೆಜ್ಜೆಹೆಜ್ಜೆಗೂ ಚಟುವಟಿಕೆಗಳ ಮೂಲಕವೇ ತಾನು ಸ್ವತಃ ಅನುಭವಿಸಿ ಕಲಿಯಲು ಸಾಧ್ಯ ಎಂದರು.
ಎಸ್ ಡಿ ಎಂ ಸಿ ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಎಲ್. ಸುಕುಮಾರಿ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಗ್ರಾ.ಪಂ. ಪಿಡಿಓ ಎಂ.ಆರ್.ಸಂತೋಷ್, ಬಿ ಆರ್ ಪಿ ಎಸ್.ಎನ್.ಲೋಕೇಶ್, ನಿವೃತ್ತ ಶಿಕ್ಷಕರಾದ ಎಂ.ರಂಗಸ್ವಾಮಿ, ಡಿ.ವಿ.ಗಣೇಶ್, ಪ್ರಾಥಮಿಕ ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಕೆ.ಪಿ.ರೇವಣ್ಣ, ದಾನಿ ಕೆ.ಎಸ್.ರಾಜಾಚಾರಿ, ವಿವಿಧ ಶಾಲಾ ಮುಖ್ಯ ಶಿಕ್ಷಕರಾದ ಎಚ್.ಎಸ್.ಸುಜಾತ, ರೇಣುಕ, ತಮ್ಮಯ್ಯ, ರಾಮೇಗೌಡ, ನವೀನ, ಗೋವಿಂದರಾಜು, ಶಾಲಾ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಡಿ. ರಮ್ಯ, ಅನ್ಸಿಲಾ ರೇಖಾ, ಎಸ್.ಎಂ. ಗೀತಾ  ಹಾಜರಿದ್ದರು.

ಶಿಕ್ಷಕಿ ಎಸ್.ಎಂ.ಗೀತಾ ನಿರ್ವಹಿಸಿದರು.  ಸಿ ಆರ್ ಪಿ‌ ಕೆ.ಶಾಂತಕುಮಾರ್ ಸ್ವಾಗತಿಸಿದರು. ಶಿಕ್ಷಕಿ ಗಾಯತ್ರಿ ವಂದಿಸಿದರು.
ಮಕ್ಕಳಿಗೆ ಸಂತಸದ ಕಲಿಕೆ : ಕಲಿಕಾ ಹಬ್ಬದ ಸಂಪನ್ಮೂಲ ಶಿಕ್ಷಕ  ಕೆ.ಶಾಂತಕುಮಾರ್, ಎಸ್.ಎಂ.ಗೀತಾ, ರಜನಿ, ಮಂಗಳಗೌರಿ, ಕೆ.ಕೆ.ಗಾಯತ್ರಿ, ಸೋಮಶೇಖರ್ ಶಿಕ್ಷಕರೊಡಗೂಡಿ ಮಕ್ಕಳನ್ನು ದಿನವಿಡೀ ವಿವಿಧ ಚಟುವಟಿಕೆಗಳ ಮೂಲಕ ಸಂತಸದ ಕಲಿಕೆಯಲ್ಲಿ ತೊಡಗಿಸಿಕೊಂಡಿದ್ದು ಗಮನ ಸೆಳೆಯಿತು.

ವಿವಿಧ ಶಾಲೆಗಳಿಂದ   ಹಾಗೂ  ಪ್ರೌಢಶಾಲೆ  ಮಕ್ಕಳು ಸೇರಿದಂತೆ 250 ಮಕ್ಕಳು “ಮಕ್ಕಳ ಹಬ್ಬ”ದಲ್ಲಿ ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.