Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸಿದ್ದಾಪುರದಲ್ಲಿ ತಮಿಳು ಬಾಂಧವರಿಂದ ಸಂಭ್ರಮದ ಪೊಂಗಲ್ ಆಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಿದ್ದಾಪುರದಲ್ಲಿ ತಮಿಳು ಬಾಂಧವರಿಂದ ಸಂಭ್ರಮದ ಪೊಂಗಲ್ ಆಚರಣೆ

ಜನವರಿ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಜ.18 : ಕೊಡಗು ಕಾವೇರಿ ತಮಿಳು ಸಂಘದ ವತಿಯಿಂದ 7ನೇ ವರ್ಷದ ಪೊಂಗಲ್ ಹಬ್ಬವನ್ನು ಸಿದ್ದಾಪುರದ ಸೆಂಟೇನರಿ ಹಾಲ್ ಸಭಾಂಗಣದಲ್ಲಿ ವಿವಿಧ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲೆಯ ಸುತ್ತಮುತ್ತಲಿನಿಂದ ಆಗಮಿಸಿದ ತಮಿಳು ಬಾಂಧವರು ಒಗ್ಗೂಡಿ ಸಂಪ್ರದಾಯ ಆಚರಣೆಯೊಂದಿಗೆ ವಿಶೇಷ ಪೂಜಾ ಕಾರ್ಯಕ್ಕೆ ಸಂಘದ ಅಧ್ಯಕ್ಷ ತಿರುಮಲ ರಾಜ ಚಾಲನೆ ನೀಡಿದರು.
ಹೊರಾಂಗಣದಲ್ಲಿ ವಿಶೇಷ ಪೊಂಗಲ್ ಖಾದ್ಯವನ್ನು ತಯಾರಿಸಿ ತಿನ್ನುವುದರೊಂದಿಗೆ ಪರಸ್ಪರ ಶುಭಾಶಯ ಹಂಚಿಕೊಂಡರು.
ಕಾರ್ಯಕ್ರಮ ಉದ್ಘಾಟನೆ : ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಹಬ್ಬ ಆಚರಣೆಗಳ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ. ಆಚಾರ, ವಿಚಾರ, ಸಂಸ್ಕೃತಿ ಪರಂಪರೆಯನ್ನು ಉಳಿಸುವುದರೊಂದಿಗೆ ಸರ್ಕಾರದ ಸೌಲತ್ತುಗಳನ್ನು ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಹೇಳಿದರು.
ಮಕ್ಕಳನ್ನು ಶಾಲೆಗಳಿಗೆ ಕಳಿಸಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದ್ದು, ತಮಿಳು ಜನಾಂಗದವರಿಗಾಗಿಯೇ ಜಿಲ್ಲೆಯಲ್ಲಿ ಐದು ತಮಿಳು ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳಿಸಬೇಕೆಂದು ಮನವಿ ಮಾಡಿದರು.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಶಾಲಾ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೂ ಸರ್ಕಾರದಿಂದ ವಿದ್ಯಾರ್ಥಿ ವೇತನ ಸಿಗಲಿದ್ದು ಅದನ್ನು ಸದುಪಯೋಗ ಪಡಿಸಿಕೊಂಡು ಶಿಕ್ಷಣದ ಮೂಲಕ ಪ್ರತಿಭಾನ್ವಿತರಾಗಿ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹೇಳಿದರು.
ಜಿಲ್ಲೆಯಲ್ಲಿ ಇಂದಿನಿಂದಲೂ ತಮಿಳು ಬಾಂಧವರು ನೆಲೆಯೂರಿದ್ದು, ಸಂಘಟನೆಯ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಅಭಿವೃದ್ಧಿಯೊಂದಿಗೆ ಮುಂದೆ ಬರಬೇಕೆಂದು ಹೇಳಿದ ಅವರು ತಮಿಳು ಸಂಘದ ಕಟ್ಟಡ ನಿರ್ಮಾಣ ಮಾಡಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಜಿ.ಪಂ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ, ತಮಿಳು ಬಾಂಧವರು ಅನ್ಯೂನತೆಯಿಂದ ತಮ್ಮದೇ ಆದ ಜೀವನ ನಡೆಸುತ್ತಿದ್ದಾರೆ. ಸಂಘಟನೆಯ ಮೂಲಕ ಹಬ್ಬ ಆಚರಣೆಯೊಂದಿಗೆ ಬಾಂಧವರೆಲ್ಲರೂ ಒಗ್ಗೂಡಿ ಸಂಭ್ರಮಿಸುತ್ತಿರುವುದು ಮಾದರಿಯಾಗಿದೆ. ಹಲವು ವರ್ಷಗಳಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸೇವಾ ಮನೋಭಾವದೊಂದಿಗೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿರುವ ತಮಿಳು ಸಂಘದ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿ, ದೇಶದ ಇತಿಹಾಸದಲ್ಲಿ ತಮಿಳು ಬಾಂಧವರ ಕೊಡುಗೆ ಅಪಾರವಾಗಿದ್ದು, ಹಲವಾರು ಸಾಧನೆಗಳ ಮೂಲಕ ಗುರುತಿಸಿಕೊಂಡಿದ್ದಾರೆ. ತಮಿಳುನಾಡು ಮೂಲದವರೇ ಆದ ಎಪಿಜೆಅಬ್ದುಲ್ ಕಲಾಂ ಅವರು ರಾಷ್ಟ್ರಪತಿಯಾಗಿ ಗಣನೀಯ ಸಾಧನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡ ನಾಯಕನಿಗಾಗಿ ತ್ಯಾಗ ಮಾಡಲು ಸಿದ್ಧವಿರುವ ತಮಿಳು ಬಾಂಧವರು ನಂಬಿದವರನ್ನು ಕೈ ಬಿಡುವುದಿಲ್ಲ. ಎಲ್ಲ ರಂಗಗಳಲ್ಲೂ ಗುರುತಿಸಿಕೊಂಡು ಸಾಧನೆ ಮಾಡಿದವರಲ್ಲಿ ಹಲವಾರು ಗಣ್ಯರಿದ್ದು ಇವರ ಸೇವೆಯ ಮೂಲಕ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಇದೇ ಸಂದರ್ಭ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಪಾಲಿಬೆಟ್ಟ ತಮಿಳು ಶಾಲೆಯ ಶಿಕ್ಷಕಿ ಮಲ್ಲಿಗೇಶ್ವರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಕಾವೇರಿ ತಮಿಳು ಸಂಘದ ಜಿಲ್ಲಾಧ್ಯಕ್ಷ ತಿರುಮಲ ರಾಜ, ಉಪಾಧ್ಯಕ್ಷರುಗಳಾದ ಧರ್ಮರಾಜ್, ನಾಗರಾಜ್, ಗಣೇಶ್, ಕಾರ್ಯದರ್ಶಿ ಫ್ರಾನ್ಸಿಸ್, ಗೌರವ ಸಲಹೆಗಾರರಾದ ಮೈಕಲ್, ಕುಮಾರ್ ಮೇಸ್ತ್ರಿ, ಸೇದುರಾಮನ್, ಮುರಗೇಶ್, ಖಜಾಂಚಿ ಮುತ್ತುವೆಲ್‍ತಂಬಿ, ಶೇಖರ್, ಸಲಹೆಗಾರರಾದ ಕಣ್ಣನ್, ಶಬರಿ, ಕುಮಾರ್, ಮಣಿ, ರವಿ, ವೇಲು, ಕಾವೇರಿ, ಸರವಣ, ದಿನೇಶ್, ಸುರೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.