Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿ : ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಮಹಾಯೋಗಿ ವೇಮನ ಜಯಂತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ : ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಮಹಾಯೋಗಿ ವೇಮನ ಜಯಂತಿ

ಜನವರಿ 19, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.19 : ಮಹಾಯೋಗಿ ವೇಮನ ಅವರು ಕವಿ ಹಾಗೂ ಸಾಹಿತಿಯಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಎಲ್ಲರೂ ಸಮಾನವಾಗಿ ಬದುಕು ಕಟ್ಟಿಕೊಳ್ಳುವಂತಾಗಲು ಶ್ರಮಿಸಿದ್ದಾರೆ ಎಂದು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಭಾರತೀಯ ವಿದ್ಯಾಭವನದಲ್ಲಿ ಗುರುವಾರ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಿವಯೋಗಿ ಸಿದ್ದರಾಮೇಶ್ವರರು 12 ನೇ ಶತಮಾನದಲ್ಲಿ ಶಿವಶರಣರಾಗಿದ್ದರು. ಕನ್ನಡ ಕಾವ್ಯ ಮತ್ತು ಸಮಕಾಲೀನ ವಚನ ಹಾಗೂ ಸಾಹಿತ್ಯಕಾರರಾಗಿದ್ದರೂ ಕೆರೆಕಟ್ಟೆ, ಬಾವಿ ಇತರೆ ಅಭಿವೃದ್ಧಿ ಕೆಲಸಗಳಲ್ಲಿ ಹೆಚ್ಚು ಕಾಯಕ ಕಂಡಿದ್ದರು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುoಡೇಗೌಡ ಅವರು ಮಾತನಾಡಿ ಸಮಾಜದಲ್ಲಿ ಸಾಧನೆ ಮಾಡಿದ ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಸೀಮಿತಗೊಳಿಸದೇ, ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡುವ ನಿಟ್ಟಿನಲ್ಲಿ ನಾವು ಉತ್ತಮ ಸಮಾಜ ಕಟ್ಟಬೇಕಾಗಿದೆ ಎಂದು ಹೇಳಿದರು.
ಶಿವಯೋಗಿ ಸಿದ್ದರಾಮೇಶ್ವರು ಬಸವಣ್ಣ, ಅಲ್ಲಮಪ್ರಭುಗಳ ಕಾಲದ ಮಹಾನ್ ಪವಾಡ ಪುರುಷರು. 12 ನೇ ಶತಮಾನದಲ್ಲೇ ಕಾಯಕದ ಮೂಲಕ ಆಧ್ಯಾತ್ಮ ಕಂಡುಕೊoಡವರು. ಇವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳುವಂತಾಗಬೇಕು ಎಂದು ತಿಳಿಸಿದರು.
ಫ.ಗು ಹಳಕಟ್ಟಿ ಅವರು ಸಿದ್ದರಾಮೇಶ್ವರ ವಚನಗಳನ್ನು ಸೇರಿ, ಶರಣರ ವಚನಗಳನ್ನು ಸಂಗ್ರಹಿಸಿದ್ದಾರೆ. ಇವರನ್ನು ಸೊನ್ನಲ್ಲಿಗೆ ಸಿದ್ದರಾಮೇಶ್ವರರು ಎಂತಲೂ ಕೂಡ ಕರೆಯುತ್ತಾರೆ. 12 ನೇ ಶತಮಾನದಲ್ಲೇ ಸಾವಿರಾರು ಕೆರೆ, ಕಟ್ಟೆಗಳನ್ನು ನಿರ್ಮಿಸಿದ್ದಾರೆ. ಅವರ ವಚನ ಸಂಸ್ಕೃತಿಯನ್ನು ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.
ಕನ್ನಡದಲ್ಲಿ ಸರ್ವಜ್ಞ ಕವಿ, ತಮಿಳಿನ ತಿರುವಳ್ಳವರ್ ಹಾಗೂ ತೆಲುಗಿನಲ್ಲಿ ವೇಮನ ಅವರು ಪ್ರಸಿದ್ದರಾಗಿದ್ದಾರೆ. ಇವರಿಂದ ಸಾಮಾನ್ಯ ಆಡುಭಾಷೆಯಲ್ಲಿ ತ್ರಿಪದಿಯ ಪದ್ಯಗಳನ್ನು ರಚಿಸಿ ಸಮಾಜದ ಬದಲಾವಣೆಗೆ ಮುಂದಾಗಿದ್ದಾರೆ ಎಂದು ಅವರು ಹೇಳಿದರು.
ಸರಸ್ವತಿ ಡಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಕುಮಾರ ಅವರು ಮಾತನಾಡಿ ಸಿದ್ಧರಾಮ ವಚನ, ಸ್ವರವಚನ, ಬಸವಸ್ತೋತ್ರದ ತ್ರಿವಿಧಿ, ಅಷ್ಟಾವರಣ ಸ್ತೋತ್ರದ ತ್ರಿವಿಧಿ, ಸಂಕೀರ್ಣ ತ್ರಿವಿಧಿ ಎಂದು ಮುಂತಾಗಿ ವೈವಿಧ್ಯಮಯ ಸಾಹಿತ್ಯ ಸೃಷ್ಟಿಮಾಡಿದ್ದಾನೆ. ವಚನ ಮತ್ತು ಸ್ವರವಚನಗಳಲ್ಲಿ ‘ಕಪಿಲಸಿದ್ಧ ಮಲ್ಲಿಕಾರ್ಜುನ’ ಎಂಬ ಅಂಕಿತವಿದ್ದರೆ, ತ್ರಿವಿಧಿಗಳಲ್ಲಿ ‘ಯೋಗಿನಾಥ’ ಅಂಕಿತವಿದೆ. ಸದ್ಯ ಈತನ 1162 ವಚನಗಳು ದೊರೆತಿದ್ದು, ಅವುಗಳಲ್ಲಿ ವೈಯುಕ್ತಿಕ ಬದುಕಿನ ಸಂಗತಿಗಳು ಧರ್ಮತತ್ವ ಜಿಜ್ಞಾಸೆ, ಸಾಮಾಜಿಕ ಕಳಕಳಿ ಪ್ರಧಾನವೆನಿಸಿವೆ ಎಂದು ಹೇಳಿದರು.
21 ನೇ ಶತಮಾನದಲ್ಲಿ ಮಹಾಯೋಗಿ ವೇಮನ ಅವರ ತತ್ವಗಳು ನಮಗೆ ಮಾರ್ಗದರ್ಶನವಾಗಿದೆ. ಇವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮನುಷ್ಯನ ದುರಾಸೆಯ ಆಲೋಚನೆಗಳನ್ನು ತೊಡೆದು ಹಾಕಲು ವೇಮನ ವಚನಗಳು ಪ್ರಮುಖ ಪಾತ್ರವಹಿಸಿದೆ ಎಂದು ಅವರು ಹೇಳಿದರು.
ಭೋವಿ ಸಮಾಜದ ಜಿಲ್ಲಾ ಅಧ್ಯಕ್ಷರಾದ ಡಿ.ಸುಜೀತ್ ಅವರು ಮಾತನಾಡಿ ಭೋವಿ ಸಮಾಜದಲ್ಲಿ ಹಲವು ಉಪಜಾತಿಗಳು ಇದ್ದು, ಅಲೆಮಾರಿಗಳ ರೀತಿ ಬದುಕುತ್ತಿದ್ದು, ಶಾಲಾ ದಾಖಲಾತಿ ಸರಿಪಡಿಸುವಂತಾಗಬೇಕು ಎಂದರು.
ಸಮಾಜದಲ್ಲಿ ಇಂದಿಗೂ ಸಹ ನಿವೇಶನ, ಮನೆ ಇಲ್ಲದೆ ಬದುಕು ಸವೆಸುತ್ತಿದ್ದು, ನಿವೇಶನ ಹಾಗೂ ಮನೆ ನೀಡುವಂತಾಗಬೇಕು. ಭೂ ರಹಿತರಿಗೆ ಭೂಮಿ ಒದಗಿಸುವಂತಾಗಬೇಕು ಎಂದು ಅವರು ಕೋರಿದರು.
ಸೋಮವಾರಪೇಟೆ, ಬಾಣವಾರ, ಕೊಡ್ಲಿಪೇಟೆ, ಸುಂಟಿಕೊಪ್ಪ ಮತ್ತಿತರ ಕಡೆಗಳಲ್ಲಿ ಸ್ಮಶಾನಕ್ಕೆ ಜಾಗ ಒದಗಿಸಬೇಕು. ಸಮಾಜದಲ್ಲಿ ಕೂಲಿ ಕೆಲಸ ಮಾಡಿ ಬದುಕುತ್ತಿದ್ದು, ಸ್ವಂತ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಅವಕಾಶ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಶಂಕರಯ್ಯ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.