Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮಡಿಕೇರಿ : ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಮಹಾಯೋಗಿ ವೇಮನ ಜಯಂತಿ
ಇತ್ತೀಚಿನ ಸುದ್ದಿಗಳು

ಮಡಿಕೇರಿ : ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಮಹಾಯೋಗಿ ವೇಮನ ಜಯಂತಿ

January 19, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.19 : ಮಹಾಯೋಗಿ ವೇಮನ ಅವರು ಕವಿ ಹಾಗೂ ಸಾಹಿತಿಯಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಎಲ್ಲರೂ ಸಮಾನವಾಗಿ ಬದುಕು ಕಟ್ಟಿಕೊಳ್ಳುವಂತಾಗಲು ಶ್ರಮಿಸಿದ್ದಾರೆ ಎಂದು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಭಾರತೀಯ ವಿದ್ಯಾಭವನದಲ್ಲಿ ಗುರುವಾರ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಿವಯೋಗಿ ಸಿದ್ದರಾಮೇಶ್ವರರು 12 ನೇ ಶತಮಾನದಲ್ಲಿ ಶಿವಶರಣರಾಗಿದ್ದರು. ಕನ್ನಡ ಕಾವ್ಯ ಮತ್ತು ಸಮಕಾಲೀನ ವಚನ ಹಾಗೂ ಸಾಹಿತ್ಯಕಾರರಾಗಿದ್ದರೂ ಕೆರೆಕಟ್ಟೆ, ಬಾವಿ ಇತರೆ ಅಭಿವೃದ್ಧಿ ಕೆಲಸಗಳಲ್ಲಿ ಹೆಚ್ಚು ಕಾಯಕ ಕಂಡಿದ್ದರು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುoಡೇಗೌಡ ಅವರು ಮಾತನಾಡಿ ಸಮಾಜದಲ್ಲಿ ಸಾಧನೆ ಮಾಡಿದ ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಸೀಮಿತಗೊಳಿಸದೇ, ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡುವ ನಿಟ್ಟಿನಲ್ಲಿ ನಾವು ಉತ್ತಮ ಸಮಾಜ ಕಟ್ಟಬೇಕಾಗಿದೆ ಎಂದು ಹೇಳಿದರು.
ಶಿವಯೋಗಿ ಸಿದ್ದರಾಮೇಶ್ವರು ಬಸವಣ್ಣ, ಅಲ್ಲಮಪ್ರಭುಗಳ ಕಾಲದ ಮಹಾನ್ ಪವಾಡ ಪುರುಷರು. 12 ನೇ ಶತಮಾನದಲ್ಲೇ ಕಾಯಕದ ಮೂಲಕ ಆಧ್ಯಾತ್ಮ ಕಂಡುಕೊoಡವರು. ಇವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳುವಂತಾಗಬೇಕು ಎಂದು ತಿಳಿಸಿದರು.
ಫ.ಗು ಹಳಕಟ್ಟಿ ಅವರು ಸಿದ್ದರಾಮೇಶ್ವರ ವಚನಗಳನ್ನು ಸೇರಿ, ಶರಣರ ವಚನಗಳನ್ನು ಸಂಗ್ರಹಿಸಿದ್ದಾರೆ. ಇವರನ್ನು ಸೊನ್ನಲ್ಲಿಗೆ ಸಿದ್ದರಾಮೇಶ್ವರರು ಎಂತಲೂ ಕೂಡ ಕರೆಯುತ್ತಾರೆ. 12 ನೇ ಶತಮಾನದಲ್ಲೇ ಸಾವಿರಾರು ಕೆರೆ, ಕಟ್ಟೆಗಳನ್ನು ನಿರ್ಮಿಸಿದ್ದಾರೆ. ಅವರ ವಚನ ಸಂಸ್ಕೃತಿಯನ್ನು ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.
ಕನ್ನಡದಲ್ಲಿ ಸರ್ವಜ್ಞ ಕವಿ, ತಮಿಳಿನ ತಿರುವಳ್ಳವರ್ ಹಾಗೂ ತೆಲುಗಿನಲ್ಲಿ ವೇಮನ ಅವರು ಪ್ರಸಿದ್ದರಾಗಿದ್ದಾರೆ. ಇವರಿಂದ ಸಾಮಾನ್ಯ ಆಡುಭಾಷೆಯಲ್ಲಿ ತ್ರಿಪದಿಯ ಪದ್ಯಗಳನ್ನು ರಚಿಸಿ ಸಮಾಜದ ಬದಲಾವಣೆಗೆ ಮುಂದಾಗಿದ್ದಾರೆ ಎಂದು ಅವರು ಹೇಳಿದರು.
ಸರಸ್ವತಿ ಡಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಕುಮಾರ ಅವರು ಮಾತನಾಡಿ ಸಿದ್ಧರಾಮ ವಚನ, ಸ್ವರವಚನ, ಬಸವಸ್ತೋತ್ರದ ತ್ರಿವಿಧಿ, ಅಷ್ಟಾವರಣ ಸ್ತೋತ್ರದ ತ್ರಿವಿಧಿ, ಸಂಕೀರ್ಣ ತ್ರಿವಿಧಿ ಎಂದು ಮುಂತಾಗಿ ವೈವಿಧ್ಯಮಯ ಸಾಹಿತ್ಯ ಸೃಷ್ಟಿಮಾಡಿದ್ದಾನೆ. ವಚನ ಮತ್ತು ಸ್ವರವಚನಗಳಲ್ಲಿ ‘ಕಪಿಲಸಿದ್ಧ ಮಲ್ಲಿಕಾರ್ಜುನ’ ಎಂಬ ಅಂಕಿತವಿದ್ದರೆ, ತ್ರಿವಿಧಿಗಳಲ್ಲಿ ‘ಯೋಗಿನಾಥ’ ಅಂಕಿತವಿದೆ. ಸದ್ಯ ಈತನ 1162 ವಚನಗಳು ದೊರೆತಿದ್ದು, ಅವುಗಳಲ್ಲಿ ವೈಯುಕ್ತಿಕ ಬದುಕಿನ ಸಂಗತಿಗಳು ಧರ್ಮತತ್ವ ಜಿಜ್ಞಾಸೆ, ಸಾಮಾಜಿಕ ಕಳಕಳಿ ಪ್ರಧಾನವೆನಿಸಿವೆ ಎಂದು ಹೇಳಿದರು.
21 ನೇ ಶತಮಾನದಲ್ಲಿ ಮಹಾಯೋಗಿ ವೇಮನ ಅವರ ತತ್ವಗಳು ನಮಗೆ ಮಾರ್ಗದರ್ಶನವಾಗಿದೆ. ಇವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮನುಷ್ಯನ ದುರಾಸೆಯ ಆಲೋಚನೆಗಳನ್ನು ತೊಡೆದು ಹಾಕಲು ವೇಮನ ವಚನಗಳು ಪ್ರಮುಖ ಪಾತ್ರವಹಿಸಿದೆ ಎಂದು ಅವರು ಹೇಳಿದರು.
ಭೋವಿ ಸಮಾಜದ ಜಿಲ್ಲಾ ಅಧ್ಯಕ್ಷರಾದ ಡಿ.ಸುಜೀತ್ ಅವರು ಮಾತನಾಡಿ ಭೋವಿ ಸಮಾಜದಲ್ಲಿ ಹಲವು ಉಪಜಾತಿಗಳು ಇದ್ದು, ಅಲೆಮಾರಿಗಳ ರೀತಿ ಬದುಕುತ್ತಿದ್ದು, ಶಾಲಾ ದಾಖಲಾತಿ ಸರಿಪಡಿಸುವಂತಾಗಬೇಕು ಎಂದರು.
ಸಮಾಜದಲ್ಲಿ ಇಂದಿಗೂ ಸಹ ನಿವೇಶನ, ಮನೆ ಇಲ್ಲದೆ ಬದುಕು ಸವೆಸುತ್ತಿದ್ದು, ನಿವೇಶನ ಹಾಗೂ ಮನೆ ನೀಡುವಂತಾಗಬೇಕು. ಭೂ ರಹಿತರಿಗೆ ಭೂಮಿ ಒದಗಿಸುವಂತಾಗಬೇಕು ಎಂದು ಅವರು ಕೋರಿದರು.
ಸೋಮವಾರಪೇಟೆ, ಬಾಣವಾರ, ಕೊಡ್ಲಿಪೇಟೆ, ಸುಂಟಿಕೊಪ್ಪ ಮತ್ತಿತರ ಕಡೆಗಳಲ್ಲಿ ಸ್ಮಶಾನಕ್ಕೆ ಜಾಗ ಒದಗಿಸಬೇಕು. ಸಮಾಜದಲ್ಲಿ ಕೂಲಿ ಕೆಲಸ ಮಾಡಿ ಬದುಕುತ್ತಿದ್ದು, ಸ್ವಂತ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಅವಕಾಶ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಶಂಕರಯ್ಯ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article“ನಾಡ ಪೆದ ಆಶಾ” ಕೊಡವ ಸಿನಿಮಾಕ್ಕೆ ಪ್ರಶಸ್ತಿಗಳ ಸರಮಾಲೆ
Next Article ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಶಾಖೆ ಉದ್ಘಾಟನೆ

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.