Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿ : ಉಪ ಲೋಕಾಯುಕ್ತರಿಂದ ದೂರು ಪ್ರಕರಣ ವಿಚಾರಣೆ : ಕಾಲಮಿತಿಯಲ್ಲಿ ಪ್ರಕರಣ ಬಗೆಹರಿಸಲು ಆದೇಶ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ : ಉಪ ಲೋಕಾಯುಕ್ತರಿಂದ ದೂರು ಪ್ರಕರಣ ವಿಚಾರಣೆ : ಕಾಲಮಿತಿಯಲ್ಲಿ ಪ್ರಕರಣ ಬಗೆಹರಿಸಲು ಆದೇಶ

ಜನವರಿ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23 : ಉಪ ಲೋಕಾಯುಕ್ತ ಕಾರ್ಯ ವ್ಯಾಪ್ತಿಗೆ ಒಳಪಡುವ ಹಲವು ಪ್ರಕರಣಗಳನ್ನು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಸೋಮವಾರ ವಿಚಾರಣೆ ನಡೆಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಮಾತನಾಡಿದ ಕೆ.ಎನ್.ಫಣೀಂದ್ರ ಅವರು 40 ದೂರುಗಳಲ್ಲಿ 22 ದೂರುಗಳು ಉಪ ಲೋಕಾಯುಕ್ತ ವ್ಯಾಪ್ತಿಗೆ ಸಂಬAಧಿಸಿದ್ದು, ಈ ದೂರುಗಳನ್ನು ವಿಚಾರಣೆ ಮಾಡಲಾಗುವುದು ಎಂದರು.
ಉಪ ಲೋಕಾಯುಕ್ತ ವ್ಯಾಪ್ತಿಗೆ ಸಲ್ಲಿಕೆಯಾಗಿರುವ ದೂರುಗಳ ಸಂಬAಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಲೋಕಾಯುಕ್ತದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಭೂಮಿಗೆ ಸಂಬಂಧಿಸಿದಂತೆ, ಸೌಲಭ್ಯಗಳನ್ನು ಕಲ್ಪಿಸದೆ ಬಡಾವಣೆಗಳ ನಿರ್ಮಾಣ, ಕೆರೆಗಳು ಮತ್ತು ದೇವರ ಕಾಡುಗಳ ಸಂರಕ್ಷಣೆ, ಭೂ ಒತ್ತುವರಿ ತೆರವುಗೊಳಿಸುವುದು, ಕಾಲ ಮಿತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹರಿಸುವುದು ಮತ್ತಿತರ ಹಲವು ದೂರುಗಳಿಗೆ ವಿಚಾರಣೆ ನಡೆಸಿದ ಉಪ ಲೋಕಾಯುಕ್ತರು, ಕಾಲ ಮಿತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ವರದಿ ನೀಡುವಂತೆ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು.
ಆರಂಭದಲ್ಲಿ ಜಾಗ ಒತ್ತುವರಿಗೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಸದ್ಯ ಪ್ರಕರಣ ಇತ್ಯರ್ಥವಾಗಿದೆ. ಮತ್ತೆ ಒತ್ತುವರಿಯಾದರೆ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಉಪ ಲೋಕಾಯುಕ್ತರು ತಿಳಿಸಿದರು.
ಜಾಗದ ಖಾತೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಕಾನೂನು ಪ್ರಕಾರ ಖಾತೆ ಮಾಡಿಕೊಡಬಹುದೇ ಇಲ್ಲವೇ ಎಂಬುದನ್ನು ಹಿಂಬರಹ ನೀಡಬೇಕು. ಅದನ್ನು ಬಿಟ್ಟು ಸತಾಯಿಸುವುದು ಸರಿಯಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದರು. ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿ, ಈಗಾಗಲೇ ಇತ್ಯರ್ಥ ಪಡಿಸಲಾಗಿದೆ ಎಂದರು.
ಎಚ್.ಎಸ್.ಅಶೋಕ್ ಎಂಬವರು ಕುಶಾಲನಗರದಲ್ಲಿ ಎಲ್ಲೆಂದರಲ್ಲಿ ಖಾಸಗಿ ಬಡಾವಣೆಗಳು ನಿರ್ಮಾಣವಾಗುತ್ತಿದ್ದು, ಕೆಲವು ಬಡಾವಣೆಗಳನ್ನು ಅನುಮತಿ ಪಡೆಯದೆ ನಿರ್ಮಿಸಲಾಗಿದೆ ಎಂದು ಉಪ ಲೋಕಾಯುಕ್ತರ ಗಮನಕ್ಕೆ ತಂದರು.
ಬಡಾವಣೆ ನಿರ್ಮಿಸುವಾಗ ರಸ್ತೆ, ಚರಂಡಿ, ಉದ್ಯಾನವನ ಹೀಗೆ ಹಲವು ಮೂಲ ಸೌಲಭ್ಯಗಳು ಒಳಗೊಂಡಿಲ್ಲ ಎಂದು ದೂರಿದರು.
ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಜಿಲ್ಲಾಧಿಕಾರಿ ಅವರ ನ್ಯಾಯಾಲಯದಲ್ಲಿ ಈ ಪ್ರಕರಣ ಇರುವುದರಿಂದ ಎರಡು ತಿಂಗಳಲ್ಲಿ ಪ್ರಕರಣ ಇತ್ಯರ್ಥಪಡಿಸಲಿದ್ದಾರೆ ಎಂದು ತಿಳಿಸಿದರು.
ಹಾಗೆಯೇ ಗೋಣಿಕೊಪ್ಪದಲ್ಲೂ ಸಹ ನಾಗರಿಕ ಸೌಲಭ್ಯ ಕಲ್ಪಿಸದೆ ಹಾಗೂ ನಕ್ಷೆ ಅನುಮೋದನೆ ಪಡೆಯದೆ ಬಡಾವಣೆ ನಿರ್ಮಿಸಲಾಗಿದೆ ಎಂದು ವಿ.ಎಸ್.ಸೂರ್ಯ ಅವರು ದೂರಿದರು.
ಈ ಬಗ್ಗೆ ಉಪ ಲೋಕಾಯುಕ್ತರು ಎಂಜಿನಿಯರ್ ಕಳುಹಿಸಿ ಪರಿಶೀಲಿಸಲಿದ್ದು, ಬಳಿಕ ವರದಿ ತರಿಸಿಕೊಳ್ಳಲಾಗುವುದು ಎಂದು ಆದೇಶಿಸಿದರು.
ಮತ್ತೊಬ್ಬ ದೂರುದಾರರು ನಿವೃತ್ತಿ ವೇತನ ಮಂಜೂರು ಮಾಡಿಸಿಕೊಡುವಂತೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು ಕಾಲ ಮಿತಿಯಲ್ಲಿ ನಿವೃತ್ತಿ ವೇತನ ಭರಿಸಲಾಗುವುದು ಎಂದು ಹೇಳಿದರು.
ಉಪ ಲೋಕಾಯುಕ್ತ ವ್ಯಾಪ್ತಿಯಲ್ಲಿ ಸ್ವಯಂ ಪ್ರೇರಿತರಾಗಿ ದೂರು ದಾಖಲಾಗಿದ್ದು, ಆ ನಿಟ್ಟಿನಲ್ಲಿ ಭೂ ದಾಖಲೆಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪರಿಹರಿಸುವಂತೆ ಉಪ ಲೋಕಾಯುಕ್ತರು ಸೂಚಿಸಿದರು.
ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಒತ್ತುವರಿ ಆಗಿರುವ ಕೆರೆಗಳನ್ನು ಸಂರಕ್ಷಿಸಲಾಗಿದೆ. ಒತ್ತುವರಿ ಆಗಿರುವ ಬಾಕಿ ಕೆರೆಗಳನ್ನು ಸಂರಕ್ಷಿಸಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಆದೇಶಿಸಿದರು.
ನಗರಸಭೆ ವ್ಯಾಪ್ತಿಯ ಸಬಿತಾ ಎಂಬವರು ರಿಮ್ಯಾಂಡ್ ಹೋಂ ಬಳಿ ಮನೆ ಇದ್ದು, ಮನೆಗೆ ಓಡಾಡಲು ತುಂಬಾ ತೊಂದರೆಯಾಗಿದೆ. ಈ ಬಗ್ಗೆ ನಗರಸಭೆಗೆ ಮನವಿ ಮಾಡಲಾಗಿದೆ ಎಂದು ಉಪ ಲೋಕಾಯುಕ್ತರ ಗಮನಕ್ಕೆ ತಂದರು. ಈ ಕುರಿತು ಸಮಸ್ಯೆ ಪರಿಹಾರವಾದ ನಂತರ ವರದಿ ಸಲ್ಲಿಸುವಂತೆ ಅಧಿಕಾರಿಗೆ ನಿರ್ದೇಶನ ನೀಡಿದರು.
‘ಗಾಳಿಬೀಡು ಗ್ರಾಮ ವ್ಯಾಪ್ತಿಯ ಹೇಮಾವತಿ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ಒಂದು ವಾರಕ್ಕೆ ಖಾತೆ ಮಾಡಿಕೊಟ್ಟರು ಎಂದು ಲೋಕಾಯುಕ್ತದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.’
ಕರ್ನಾಟಕ ಲೋಕಾಯುಕ್ತ ಜಿಲ್ಲಾ ರಿಜಿಸ್ಟ್ರಾರ್ ತನಿಖಾ ವಿಭಾಗದ ಹಿರಿಯ ನ್ಯಾಯಾಧೀಶರಾದ ಚೆನ್ನಕೇಶವ ರೆಡ್ಡಿ, ಕರ್ನಾಟಕ ಲೋಕಾಯುಕ್ತದ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ನಾರಾಯಣ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಲೋಕಾಯುಕ್ತ ಎಸ್.ಪಿ. ಸುರೇಶ್ ಬಾಬು, ಮೈಸೂರು ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಕೃಷ್ಣಯ್ಯ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ, NEWS DESK ಮಾ.7 : ಈ ಸಾಲಿನ ಬಜೆಟ್ ಅಧಿವೇಶನದ ಮೊದಲ ದಿನವೇ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ…

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.