ಮಡಿಕೇರಿ ಜ.27 : ಬೈತೂರು ಉತ್ಸವದ ಹಿನ್ನೆಲೆಯಲ್ಲಿ ವಿರಾಜಪೇಟೆಯಿಂದ ಬೈತೂರಪ್ಪ ದೇವಸ್ಥಾನಕ್ಕೆ ನಾಲ್ವರು ಯುವ ಭಕ್ತರು ಪಾದಯಾತ್ರೆ ಮಾಡಿದರು. ಚೆಟ್ಟೋಳಿರ ಶರತ್ ಸೋಮಣ್ಣ, ಮುರುವಂಡ ಸವನ್ ಸೋಮಣ್ಣ, ಕಾಳಮಂಡ ರಾಬಿನ್ ಹಾಗೂ ಮಾಚಂಗಡ ಸಚಿನ್ ವಿರಾಜಪೇಟೆಯಿಂದ, ಪೆರುಂಬಾಡಿ, ಮಾಕುಟ್ಟ, ಕೂಟುಪೊಳೆ, ಬಲ್ಲಿತೋಡ್, ಹುಲಿಕಲ್ ಮೂಲಕ ಪಾದಯಾತ್ರೆ ಮಾಡಿ ಸಾಯಂಕಾಲ 4 ಗಂಟೆ ಸುಮಾರಿಗೆ 40 ಕಿ.ಮೀ ಕ್ರಮಿಸಿದರು. ದೇವಸ್ಥಾನ ತಲುಪಿದ ನಂತರ ವಿಶೇಷ ಪ್ರಾರ್ಥನೆ ಸಲ್ಲಿಸಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದರು.









