ಮಡಿಕೇರಿ ಫೆ.2 : ಭಾರತೀಯ ಜನತಾ ಪಾರ್ಟಿ ತನಗೆ ಎಲ್ಲವನ್ನೂ ನೀಡಿದೆ. ಮುಂಬರುವ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷ ಏನು ಹೇಳುತ್ತದೋ ಅದರಂತೆ ನಡೆದುಕೊಳ್ಳುತ್ತೇನೆ. ಪಕ್ಷ ಸ್ಪರ್ಧಿಸು ಅಂದರೆ ಸ್ಪರ್ಧಿಸುತ್ತೇನೆ. ಇತರೆ ಯಾರಿಗೆ ಅವಕಾಶ ಕೊಟ್ಟರು ಅದಕ್ಕೆ ತಾನು ಸಿದ್ಧ. ನಾನೇ ಸ್ಪರ್ಧಿಸಬೇಕೆನ್ನುವ ದುರಾಸೆ ಇಲ್ಲವೆಂದು ಶಾಸಕ ಕೆ.ಜಿ.ಬೋಪಯ್ಯ ಸ್ಪಷ್ಟಪಡಿಸಿದರು.







