Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ : ಗುಣಮಟ್ಟದ ಚಿಕಿತ್ಸೆ ನೀಡಲು ಶಾಸಕ ಕೆ.ಜಿ.ಬೋಪಯ್ಯ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ : ಗುಣಮಟ್ಟದ ಚಿಕಿತ್ಸೆ ನೀಡಲು ಶಾಸಕ ಕೆ.ಜಿ.ಬೋಪಯ್ಯ ಸೂಚನೆ

ಫೆಬ್ರವರಿ 13, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಫೆ.13 : ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದು ಸೇರಿದಂತೆ ಕೇವಲ ರೋಗಿಗಳನ್ನಷ್ಟೇ ಅಲ್ಲ ಚಿಕಿತ್ಸಾಲಯಗಳು ಕೂಡ ಜೀವಂತವಾಗಿರಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟರು.
ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ ಅವರು ವೈದ್ಯರನ್ನು ದೇವರಿಗೆ ಹೋಲಿಕೆ ಮಾಡಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಿಗೆ ಬರುವಂತಹ ಬಹುತೇಕರು ಬಡಕುಟುಂಬದ ಹಿನ್ನೆಲೆಯುಳ್ಳವರಾಗಿದ್ದು, ಅಂತಹವರಿಗೆ ಸೂಕ್ತ ಚಿಕಿತ್ಸೆ ನೀಡುವ ವಿಷಯದಲ್ಲಿ ಧನಾತ್ಮಕ ಚಿಂತನೆಗಳು ವೈದ್ಯರಿಂದಾಗಬೇಕಾಗಿದೆ, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸದ್ಯಕ್ಕೆ ಎಲ್ಲಾ ಸೌಲಭ್ಯಗಳು ಲಭ್ಯವಿದ್ದು, ಶುಚಿತ್ವ ಕಾಪಾಡಿಕೊಳ್ಳಲಾಗಿದೆ ಎಂದರು.
ಸರ್ಕಾರಿ ಆಸ್ಪತ್ರೆಗಳಿಗೆ ಬರುವಂತಹ ಬಹುತೇಕ ರೋಗಿಗಳು ಹಣಕಾಸಿನ ತೊಂದರೆಯನ್ನು ಅನುಭವಿಸುವಂತಹವರೇ. ಹೆಚ್ಚು ಆರ್ಥಿಕ ತೊಂದರೆಯಿಂದ ಬಳಲುವವರಿಗಾಗಿಯೇ ಸರ್ಕಾರಿ ಆಸ್ಪತ್ರೆಗಳು ಎನ್ನುವಂತಾಗಿದೆ. ಸರ್ಕಾರವೂ ಕೂಡ ಸಕಲ ರೀತಿಯ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಲಾಗುತ್ತಿದ್ದು, ಅವುಗಳನ್ನು ರೋಗಿಗಳಿಗೆ ತಲುಪಿಸುವ ಕಾರ್ಯವನ್ನು ವೈದ್ಯಕೀಯ ಸಿಬ್ಬಂದಿಗಳು ಮಾಡುತ್ತಿದ್ದಾರೆ ಎಂದರು.
ಮಲ್ಟಿ ಸ್ಪೆಶಾಲಿಟಿ ಖಾಸಗಿ ಆಸ್ಪತ್ರೆಗಳಿಗೂ ಕಡಿಮೆ ಇಲ್ಲವೆನ್ನುವ ರೀತಿಯಲ್ಲಿ ಶುಚಿತ್ವ ಕಾಪಾಡಿಕೊಳ್ಳಲಾಗಿದ್ದು ರಕ್ತತಪಾಸಣೆ, ಎಕ್ಸ್‍ರೇ, ಡಯಾಲಿಸಿಸ್, ಆಪರೇಶನ ಥೇಟರ್ ಸೇರಿದಂತೆ ನಾಯಿ ಮತ್ತು ಹಾವು ಕಡಿತಕ್ಕೆ ಚಿಕಿತ್ಸಾ ಸೌಲಭ್ಯಗಳನ್ನು ಇಲ್ಲಿ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಗಂಟಲು-ಕಿವಿ, ಎಲುಬು-ಕೀಲು, ಚರ್ಮ, ನೇತ್ರ, ಮಕ್ಕಳು ಮತ್ತು ಮಹಿಳೆಯರಿಗೆ, ಆಯುಷ್ಯ ಜನರಲ್ ಫಿಸಿಶಿಯನ್ ಇನ್ನಿತರ ರೋಗಗಳಿಗೆ ತಜ್ಞ ವೈದ್ಯರುಗಳು ಲಭ್ಯವಿದ್ದು, ಇದೊಂದು ಸಕಲ ಸೌಲಭ್ಯಗಳಿರುವ ಸರ್ಕಾರಿ ಆಸ್ಪತ್ರೆಯಾಗಿದ್ದು ತಾಲೂಕಿನ ಎಲ್ಲ ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಮುಖ್ಯ ಆಡಳಿತ ವೈದ್ಯಾಧಿಕಾರಿ ಜೆ.ಶ್ರೀನಿವಾಸ್ ಮಾತನಾಡಿ, ಆಸ್ಪತ್ರೆಯ ಅಬಿವೃದ್ಧಿ ಬಗ್ಗೆ ಮಾಹಿತಿ ನೀಡಿದರು. ಬಳಿಕ ಮಾತನಾಡಿದ ಅವರು ಹೊರ ರೋಗಿಗಳಿಗೆ ಸಂದರ್ಶನ ಶುಲ್ಕ ಹತ್ತು ರೂಪಾಯಿ ಹೇರಿಕೆ ಮಾಡುವಂತೆ ಕೋರಿ ಕೊಂಡ ಹಿನ್ನೆಲೆಯಲ್ಲಿ ಶಾಸಕ ಬೋಪಯ್ಯ ಮತ್ತು ವಿಧಾನ ಪರಿಷತ್ತ್ ಸದಸ್ಯರಾದ ಸುಜಾ ಕುಶಾಲಪ್ಪ ಸಮ್ಮತಿ ಸೂಚಿಸಿದರು.
ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ಕೆಲವರು ದರ್ಪದಿಂದ ಮತ್ತು ವೈದ್ಯರನ್ನು ಅವಹೇಳನ ಮಾಡುವುದು, ಹೆದರಿಸುವುದು, ಆಸ್ಪತ್ರೆ ಒಳಗೆ ನುಗ್ಗಿ ದಾಂದಲೆ ನಡೆಸುವುದು, ಗಲಾಟೆ ಮಾಡುವುದು, ಆಸ್ಪತ್ರೆಯ ಉಪಕರಣಗಳಿಗೆ ಹಾನಿಮಾಡುವುದು ಜಾಸ್ತಿಯಾಗಿದೆ ಎಂದು ಶಾಸಕರ ಗಮನಕ್ಕೆ ತಂದರು.
ಸಭೆಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೂ ಕೂಡ ಯಾರು ಸಭೆಗೆ ಆಗಮಿಸಲಿರಲಿಲ್ಲ. ಇದಕ್ಕೆ ಶಾಸಕರು ಪೊಲೀಸ್ ಇಲಾಖೆಯ ಯಾವುದೇ ಅಧಿಕಾರಿಗಳು ಸಭೆಗೆ ಆಗಮಿಸದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ರಾತ್ರಿ ಪಾಳಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಪೇದೆಗಳು ಏಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದರು.
ಪ್ರತಿದಿನವೂ ರಾತ್ರಿ ವೇಳೆಯಲ್ಲಿ ಆಸ್ಪತ್ರೆ ಬಳಿ ಗಸ್ತು ಬರಲು ಡಿವೈಎಸ್‍ಪಿ ಬಳಿ ಚರ್ಚಿಸುತ್ತೇನೆ. ರಾತ್ರಿ ಪಾಳಯದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡುವ ಪುರುಷ ವಾಚ್ ಮ್ಯಾನ್ ಕೊಡಿಸಲು ಹಾಗೂ ಎರಡು ವೈದ್ಯರ ಕೊರತೆ ಮತ್ತು ಆಸ್ಪತ್ರೆಗೆ ಅಗತ್ಯವಾದ ಎಲ್ಲ ವ್ಯವಸ್ಥೆ ಕಲ್ಪಿಸಲು ಪ್ರಯತ್ನ ಮಾಡುವುದಾಗಿ ಹೇಳಿದರಲ್ಲದೆ ಇತ್ತೀಚೆಗೆ ಬಂದ ಮುಖ್ಯ ಆಡಳಿತ ವೈದ್ಯಾಧಿಕಾರಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಈ ಹಿಂದೆ ಆಸ್ಪತ್ರೆ ಹಣಕಾಸು ವ್ಯವಹಾರ ನೋಡಿಕೊಳ್ಳುತ್ತಿದ್ದ ಎರಡನೇ ದರ್ಜೆ ಮಹಿಳಾ ನೌಕರರೊಬ್ಬರು ಕೆಲವು ಸಂಸ್ಥೆಗಳಿಗೆ ಹಾಗೂ ಆಸ್ಪತ್ರೆಗೆ ಸಾಮಾಗ್ರಿಗಳನ್ನು ಖರೀದಿಸಿ ಹಣವನ್ನು ನೀಡದೆ ಅನೇಕ ಮಂದಿಗೆ ಹಣ ನೀಡದೆ ವಂಚನೆ ಮಾಡಿರುವುದಾಗಿ, ಈ ಹಿಂದೆ ಕೂಡ ಇತರ ಎರಡು ಕಡೆಗಳಲ್ಲಿ ಇದೇ ರೀತಿ ವಂಚನೆ ಮಾಡಿ ಅಮಾನತ್ತುಗೊಂಡಿದ್ದರು. ಮತ್ತೆ ಇದೇ ಕೆಲಸ ಇಲ್ಲಿಯೂ ಮಾಡಿದ್ದಾರೆಂದು ಇರುವ ಬಗ್ಗೆ ಸಭೆಯ ಗಮನಕ್ಕೆ ತರಲಾಯಿತು. ಶಾಸಕರು ತಕ್ಷಣವೇ ಲೆಕ್ಕ ಪರಿಶೋದನೆ ಮಾಡಿ ಯಾರು ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಅವರಿಂದ ಹಣ ಕೊಡಿಸಲು ಕ್ರಮವನ್ನು ಕೈಗೊಳ್ಳಿ ಎಂದು ಮುಖ್ಯ ಆಡಳಿತ ವೈದ್ಯರಿಗೆ ತಿಳಿಸಿದರು.
ವಂಚನೆಗೊಳಗಾದವರು ಸಭೆಯ ಗಮನಕ್ಕೆ ತಂದಾಗ ಶಾಸಕರು ಕಳೆದ ಮೂರು ವರ್ಷಗಳ ಬ್ಯಾಂಕ್ ಇತಿಹಾಸ ತೆಗೆದು ನಂತರ ಕ್ರಮವನ್ನು ಕೈಗೊಳ್ಳಿ ಎಂದು ತಿಳಿಸಿದರು.
ಆಸ್ಪತ್ರೆಯಲ್ಲಿ ಪುರುಷ ಡಿ ಗ್ರೂಪ್‍ನ ಸದಸ್ಯರ ಕೊರತೆ ಬಗ್ಗೆ ಸಭೆಯ ಗಮನಕ್ಕೆ ತಂದಾಗ, ಶಾಸಕರು ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವಂತೆ ಸೂಚಿಸಿದರು.
ವಿಧಾನ ಪರಿಷತ್ತ್ ಸದಸ್ಯ ಸುಜಾ ಕುಶಲಪ್ಪ ಎಲ್ಲಾ ವೈದ್ಯರನ್ನು ಕರೆಯಿಸಿ ಸಭೆ ನಡೆಸಿ ವೈದ್ಯರು ಬಳಿ ತಮ್ಮ ಅಹವಾಲು ಕೇಳಿದಾಗ ವೈದ್ಯರಾದ ಪ್ರಜ್ವಲ್ ಅವರು ಕಳೆದ ಇಪ್ಪತ್ತೈದು ವರ್ಷಗಳ ಹಿಂದೆ ಇದ್ದ ಉಪಕರಣ ರೀಪೇರಿಯಾಗಿದ್ದು ಅದರಿಂದ ಶಸ್ತ್ರಚಿಕಿತ್ಸೆ ಮಾಡಲು ತೊಂದರೆಯಾಗುತ್ತಿದೆ ಎಂದು ತಿಳಿಸಿದರು,
ನೇತ್ರ ತಜ್ಞ ವೈದ್ಯರಾದ ಹೇಮಪ್ರಿಯ ಮಾತನಾಡಿ ತಾನು ಕೆಲಸ ನಿರ್ವಹಿಸುವ ಕೋಣೆಯಲ್ಲಿ ವ್ಯಕ್ತಿಯೊಬ್ಬ ನುಗ್ಗಿ ತಾನು ಉಪಯೋಗಿಸುವ ಎಲ್ಲಾ ಪರಿಕರಗಳನ್ನು ನಾಶ ಮಾಡಿದ್ದಾನೆ ಎಂದು ಸುಜಾಕುಶಾಲಪ್ಪ ಅವರ ಗಮನಕ್ಕೆ ತಂದರು. ಅದಕ್ಕೆ ಶಾಸಕರು ಯಾವ ಪರಿಕರಗಳು ಅವಶ್ಯಕತೆ ಇದೆ ಅದರ ಬಗ್ಗೆ ಮಾಹಿತಿ ಕೊಡಿ. ಆರೋಗ್ಯ ಮಂತ್ರಿಗಳ ಮಾತನಾಡಿ ಉಪಕರಣದ ವ್ಯವಸ್ಥೆ ಮಾಡುವುದಾಗಿ, ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲು ವೈದ್ಯರನ್ನು ನೇಮಿಸಲು ಕ್ರಮವನ್ನು ಕೈಗೊಳ್ಳುವುದಾಗಿ ತಿಳಿಸಿದರು.
ಸಭೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪುರಸಭೆ ಮುಖ್ಯಾಧಿಕಾರಿ ಎ. ಚಂದ್ರಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್, ಚೆಸ್ಕಾಂ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಆಸ್ಪತ್ರೆಯ ಎಲ್ಲ ವೈಧ್ಯರುಗಳು ಸಿಬ್ಬಂದಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.