Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬರಹ : ಡಾ|| ಕೆ. ಬಿ.ಸೂರ್ಯ ಕುಮಾರ್ …* *ಭಾರತೀಯ ಸೇನೆಯ ಧ್ರುವತಾರೆ ಜನರಲ್ ಕೆ. ಎಸ್.ತಿಮ್ಮಯ್ಯ*
  • *ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*
  • *ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*
  • *ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*
  • *ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*
  • *ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*
  • *ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*
  • *ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»‘ಫಲಾನುಭವಿಗಳ ಸಮ್ಮೇಳನ’ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

‘ಫಲಾನುಭವಿಗಳ ಸಮ್ಮೇಳನ’ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸೂಚನೆ

ಫೆಬ್ರವರಿ 16, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.16 : ಜಿಲ್ಲೆಯಲ್ಲಿ ಫಲಾನುಭವಿಗಳ ಆಧಾರಿತ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ‘ಫಲಾನುಭವಿಗಳ ಸಮ್ಮೇಳನ’ ಆಯೋಜಿಸಲು ಸರ್ಕಾರ ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಸಮಾಜ ಕಲ್ಯಾಣ, ಐಟಿಡಿಪಿ, ಹಿಂದುಳಿದ ವರ್ಗ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಕಂದಾಯ, ಜಿಲ್ಲಾ ಪಂಚಾಯತ್, ಸಹಕಾರ, ಬೃಹತ್ ಮತ್ತು ಸಣ್ಣ ನೀರಾವರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಿವಿಧ ನಿಗಮಗಳು ಹೀಗೆ ಹಲವು ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯಲ್ಲಿನ ಫಲಾನುಭವಿಗಳನ್ನು ಸಮ್ಮೇಳನಕ್ಕೆ ಆಹ್ವಾನಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಬಜೆಟ್ ಅಧಿವೇಶನ ನಂತರ ಮುಖ್ಯಮಂತ್ರಿ ಅವರು ಕೊಡಗು ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ‘ಫಲಾನುಭವಿಗಳ ಸಮ್ಮೇಳನ’ ಮತ್ತು ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮಾಡಿಸಬೇಕಿದೆ. ಆ ನಿಟ್ಟಿನಲ್ಲಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.
ಒಟ್ಟಾರೆ ಫಲಾನುಭವಿಗಳ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಹಂತದ ಇಲಾಖಾ ಅಧಿಕಾರಿಗಳು ಜಿಲ್ಲಾಡಳಿತದ ಜೊತೆ ಕೈಜೋಡಿಸಬೇಕು ಮತ್ತು ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಫಲಾನುಭವಿಗಳ ಸಮ್ಮೇಳನ ಸಂದರ್ಭದಲ್ಲಿ ಅರ್ಹರಿಗೆ ಅರಣ್ಯ ಹಕ್ಕು ಪತ್ರ ವಿತರಣೆ, ನಿವೇಶನ ಹಕ್ಕುಪತ್ರ, ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಆಯೋಜಿಸಬೇಕಿದೆ. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ ಅವರು ಮಾಹಿತಿ ನೀಡಿ ಐಟಿಡಿಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಬೇಕಿದೆ. ಹಾಗೆಯೇ ಅರಣ್ಯ ಹಕ್ಕು ಕಾಯ್ದೆಯಡಿ ಅರ್ಹರಿಗೆ ಹಕ್ಕು ಪತ್ರ ವಿತರಿಸಬಹುದಾಗಿದೆ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾಹಿತಿ ನೀಡಿ ವಿರಾಜಪೇಟೆ, ಸೋಮವಾರಪೇಟೆ ಮತ್ತು ಕೊಡ್ಲಿಪೇಟೆಯಲ್ಲಿ ಅಂಬೇಡ್ಕರ್ ಭವನ ಉದ್ಘಾಟನೆಗೆ ಸಿದ್ಧವಾಗಿದೆ. ಹಾಗೆಯೇ ಕುಶಾಲನಗರದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆಗೆ ಸಿದ್ಧವಾಗಿದೆ ಎಂದರು.
ಬಿಸಿಎಂ. ಇಲಾಖೆಯ ಅಧಿಕಾರಿ ಎನ್.ಮಂಜುನಾಥ್ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ, ಜೊತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಭಾಗ್ಯಲಕ್ಷ್ಮಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮ ಅನುóಷ್ಠಾನಗೊಳಿಸಲಾಗುತ್ತಿದ್ದು, ಈ ಸಂಬಂಧ ಫಲಾನುಭವಿಗಳನ್ನು ಆಹ್ವಾನಿಸಲಾಗುವುದು ಎಂದರು. ಕಾನೂನು ಪದವೀದರರಿಗೆ ಶಿಷ್ಯ ವೇತನ ನೀಡಲಾಗುತ್ತದೆ ಎಂದರು.
ಸಹಕಾರ ಇಲಾಖೆಯ ಸಹಾಯಕ ನಿಬಂಧಕರಾದ ಮೋಹನ್ ಅವರು ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸರ್ಕಾರ ಮರು ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಗೆ 50 ಸಾವಿರ ಸದಸ್ಯರ ನೋಂದಣಿ ಗುರಿ ಇದ್ದು, ಜಿಲ್ಲೆಯಲ್ಲಿ 57 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗಿದೆ ಎಂದು ಸಹಾಯಕ ನಿಬಂಧಕರಾದ ಎಂ.ಇ.ಮೋಹನ್ ಮಾಹಿತಿ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಮಾತನಾಡಿ 65 ವಿವೇಕ ಕೊಠಡಿಗಳನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 35 ಶಾಲೆಗಳ ಕಾಮಗಾರಿಗಳು ಆರಂಭವಾಗಿ, ವಿವಿಧ ಹಂತದಲ್ಲಿದೆ ಎಂದು ತಿಳಿಸಿದರು.
ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ಸುರೇಶ್ ಭಟ್ ಅವರು ಕುಶಾಲನಗರದ ಪಶುವೈದ್ಯಕೀಯ ಆಸ್ಪತ್ರೆ ನಿರ್ಮಾಣವಾಗಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ. ಹಾಗೆಯೇ ಸೋಮವಾರಪೇಟೆ ತಾಲ್ಲೂಕಿನ ನಾಗಾವಾರದಲ್ಲಿ ಗೋಶಾಲೆ ನಿರ್ಮಾಣಕ್ಕೆ ಚಾಲನೆ ನೀಡಬಹುದಾಗಿದೆ ಎಂದು ಹೇಳಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ತಿಳಿಸಿದರು.

ಹಾಗೆಯೇ ಪವರ್ ಟಿಲ್ಲರ್, ಡೀಸೆಲ್ ಪಂಪ್‍ಸೆಟ್, ಸೌಲಭ್ಯ ಕಲ್ಪಿಸಲಾಗಿರುವ ಫಲಾನುಭವಿಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಕಾರ್ಯಪ್ಪ ಅವರು ಜೇನು ಪೆಟ್ಟಿಗೆ ಫಲಾನುಭವಿಗಳಿಗೆ ವಿತರಿಸಲಾಗಿದೆ. ಹಾಗೆಯೇ ಗ್ರೇಟರ್ ರಾಜಾಸೀಟು ಉದ್ಘಾಟನೆಗೆ ಸಿದ್ಧವಾಗಿದೆ ಎಂದು ಹೇಳಿದರು.
ಸಾಮಾಜಿಕ ಭದ್ರತಾ ಯೋಜನೆ ಕಾರ್ಯಕ್ರಮಗಳು, ಆಹಾರ ಇಲಾಖೆಯಿಂದ ಬಿಪಿಎಲ್ ಕಾರ್ಡ್‍ಗಳ ವಿತರಣೆ, ಕಾರ್ಮಿಕ ಇಲಾಖೆಯಿಂದ ಇ-ಶ್ರಮ್ ಯೋಜನೆಯಡಿ ಕಾರ್ಡುಗಳ ವಿತರಣೆ,
ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಇತರರು ತಮ್ಮ ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಫಲಾನುಭವಿಗಳ ಸಮ್ಮೇಳನವನ್ನು ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಕೈಜೋಡಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬರಹ : ಡಾ|| ಕೆ. ಬಿ.ಸೂರ್ಯ ಕುಮಾರ್ …* *ಭಾರತೀಯ ಸೇನೆಯ ಧ್ರುವತಾರೆ ಜನರಲ್ ಕೆ. ಎಸ್.ತಿಮ್ಮಯ್ಯ*

ಮಾರ್ಚ್ 31, 2026

*ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026

*ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.30 NEWS DESK  : ಅಮ್ಮತ್ತಿ ಕೊಡವ ಸಮಾಜದ ಪ್ರಮುಖರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ…

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*

ಮಾರ್ಚ್ 30, 2026

*ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*

ಮಾರ್ಚ್ 30, 2026

*ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*

ಮಾರ್ಚ್ 30, 2026

*ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*

ಮಾರ್ಚ್ 30, 2026

*ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*

ಮಾರ್ಚ್ 30, 2026

*ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*

ಮಾರ್ಚ್ 30, 2026

*”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*

ಮಾರ್ಚ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.