Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಬಿಟ್ಟಂಗಾಲದಲ್ಲಿ ‘ಒತ್ತೋರ್ಮೆ ಕೂಟ’ ಕಾರ್ಯಕ್ರಮ : ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರದ ಸಹಮತವಿದೆ : ಕೋಟ ಶ್ರೀನಿವಾಸ ಪೂಜಾರಿ
ಇತ್ತೀಚಿನ ಸುದ್ದಿಗಳು

ಬಿಟ್ಟಂಗಾಲದಲ್ಲಿ ‘ಒತ್ತೋರ್ಮೆ ಕೂಟ’ ಕಾರ್ಯಕ್ರಮ : ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರದ ಸಹಮತವಿದೆ : ಕೋಟ ಶ್ರೀನಿವಾಸ ಪೂಜಾರಿ

February 19, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.19 : ಪರಿಶಿಷ್ಟ 101 ಜಾತಿಗೆ ಒಳ ಮೀಸಲಾತಿ ಕಲ್ಪಿಸಬೇಕೆಂದು ಹಲವು ದಶಕಗಳಿಂದ ಹೋರಾಟ ಮಾಡಿಕೊಂಡು ಬಂದಿರುವ ಹಿನ್ನೆಲೆ, ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರದ ಸಹಮತ ಇದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.
ಕೊಡವ 18 ಭಾಷಿಕ ಜನಾಂಗದ ಸಮುದಾಯಗಳ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಗ್ರಾಮದ ಕೊಡಗು ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ಭಾನುವಾರ ನಡೆದ ‘ಒತ್ತೋರ್ಮೆ ಕೂಟ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ಸದಾಶಿವ ಆಯೋಗ ವರದಿ ಜಾರಿ ಸಂಬoಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ, ಧ್ವನಿ ಇಲ್ಲದವರಿಗೆ ಧ್ವನಿ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ಸಮಾಜ ಕಲ್ಯಾಣ ಸಚಿವರು ನುಡಿದರು.
ಕೊಡಗು ಜಿಲ್ಲೆಯಲ್ಲಿ ಕೊಡವ ಭಾಷೆ ಮಾತನಾಡುವ 18 ಸಣ್ಣ ಸಣ್ಣ ಸಮಾಜಗಳು ಇದ್ದು, ಈ ಸಮಾಜಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಬೇಡಿಕೆಗೆ ಸ್ಪಂದಿಸಿ ಸಚಿವರು ಈ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
ಒಳ ಮೀಸಲಾತಿ ಎಂಬುದು ಮತ್ತಷ್ಟು ಜಟಿಲ ಸಮಸ್ಯೆ ಆಗುತ್ತಿದೆ. ಆದರೂ ಸರ್ಕಾರದ ಸೌಲಭ್ಯಗಳು ಇದುವರೆಗೆ ಯಾರಿಗೆ ತಲುಪಿಲ್ಲ, ಅಂತಹ ಕಟ್ಟ ಕಡೆಯ ಸಮಾಜಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂಬುದು ಸರ್ಕಾರದ್ದಾಗಿದೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡಬೇಕು ಎಂಬುದೇ ಪ್ರಸ್ತುತ ಸರ್ಕಾರದ ಉದ್ದೇಶವಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.
ಕೊಡವ ಭಾಷಿಕರ ಎಲ್ಲಾ ಸಮಾಜಗಳ ಕುರಿತು ಕುಲಶಾಸ್ತ್ರ ಅಧ್ಯಯನ ಮಾಡಲು 25 ಲಕ್ಷ ರೂ ಬಿಡುಗಡೆ ಮಾಡಲಾಗುವುದು. ಆ ನಿಟ್ಟಿನಲ್ಲಿ ಮೈಸೂರು ಬುಡಕಟ್ಟು ಸಂಶೋಧನಾ ಸಂಸ್ಥೆ ಅಥವಾ ಹಂಪಿ ವಿಶ್ವವಿದ್ಯಾನಿಯಕ್ಕೆ ಅಧ್ಯಯನದ ಹೊಣೆ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರು ವಿವರಿಸಿದರು.
ಕೊಡಗಿನ ಸಂಸ್ಕೃತಿ, ಆಚಾರ ವಿಚಾರಗಳನ್ನು ಪ್ರತಿಬಿಂಬಿಸುವಲ್ಲಿ ಐನ್‌ಮನೆಗಳು ಪ್ರಮುಖ ಪಾತ್ರ ವಹಿಸಿದ್ದು, ಆ ದಿಸೆಯಲ್ಲಿ ಐನ್‌ಮನೆಗಳ ಅಭಿವೃದ್ಧಿಗೆ 5 ಕೋಟಿ ರೂ ಬಿಡುಗಡೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಇದೇ ಸಂದರ್ಭದಲ್ಲಿ ಪ್ರಕಟಿಸಿದರು.
ಭಾಷೆ ಮತ್ತು ಸಂಸ್ಕೃತಿಗೆ ಹೆಚ್ಚಿನ ಒತ್ತು ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲಸ ಮಾಡುತ್ತಿದ್ದು, ಆ ನಿಟ್ಟಿನಲ್ಲಿ ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಿ, ತೆರೆಮರೆಯಲ್ಲಿ ಇರುವ ಗ್ರಾಮೀಣ ಪ್ರದೇಶದವರನ್ನು ಗುರ್ತಿಸಿ ಪದ್ಮಶ್ರೀ ಅಂತಹ ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ನೀಡುತ್ತಿರುವುದು ಆಡಳಿತ ವ್ಯವಸ್ಥೆ ಎಷ್ಟು ಬದಲಾವಣೆ ಆಗಿದೆ ಎಂಬುದನ್ನು ತಿಳಿಯಬೇಕಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ನುಡಿದರು.
ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಪೌಷ್ಟಿಕ ಆಹಾರ ವಿತರಣೆಯನ್ನು ಬೆಟ್ಟ ಗುಡ್ಡಗಳಲ್ಲಿ ವಾಸಿಸುವ ಕುಡಿಯ ಸಮಾಜಕ್ಕೂ ತಲುಪಿಸಲು ಪ್ರಯತ್ನಿಸಿಲಾಗುವುದು ಎಂದರು.
ಕೊಡವ ಭಾಷಿಕ ಸಮಾಜಗಳ ಆಚಾರ ವಿಚಾರದಲ್ಲಿ ಒಂದೇ ಇದ್ದು, ಅನೇಕತೆಯಲ್ಲಿ ಏಕತೆಯನ್ನು ಕಾಣುತ್ತೇವೆ. ಆ ನಿಟ್ಟಿನಲ್ಲಿ ಕೊಡವ ಭಾಷಿಕ ಸಮಾಜಗಳ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಎಲ್ಲರ ಸಲಹೆ ಪಡೆದು ಅನುಷ್ಠಾನಕ್ಕೆ ಶ್ರಮಿಸಲಾಗುವುದು. ಎಲ್ಲರ ನೋವುಗಳಿಗೆ ಸ್ಪಂದಿಸಲಾಗುವುದು ಎಂದು ಕೆ.ಜಿ.ಬೋಪಯ್ಯ ಅವರು ಹೇಳಿದರು.
ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲು ಅವರು ಮಾತನಾಡಿ ಕೊಡವ ಮತ್ತು ತುಳು ಭಾಷೆ ಒಂದಕ್ಕೊಂದು ಸಾಮ್ಯತೆ ಇದ್ದು, ಶ್ರೀಮಂತಿಕೆ ಹೊಂದಿದೆ ಎಂದರು.
ಐನ್‌ಮನೆಗಳಿಗೆ ವಿಶೇಷ ಪ್ರಾದನ್ಯತೆ ನೀಡುವಲ್ಲಿ ಸರ್ಕಾರ ಮುಂದಾಗಿದೆ. ಆ ದಿಸೆಯಲ್ಲಿ ಕೊಡವ ಭಾಷೆ, ಪರಂಪರೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು.
ಹಂಪಿ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕೊಡವ ಭಾಷೆ ಮಾತನಾಡುವ ಎಲ್ಲಾ ಸಮಾಜಗಳಿಗೆ ‘ಒಳ ಮೀಸಲಾತಿ’ ಜಾರಿಗೊಳಿಸಿ, ರಾಜಕೀಯ, ಸಾಮಾಜಿಕ ನ್ಯಾಯ ದೊರಕಿಸಬೇಕು ಎಂದು ಅವರು ಒತ್ತಾಯಿಸಿದರು.
ಕೊಡವ ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರ್ಪಡೆ ಮಾಡಬೇಕು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಲ್ಲಿ ಕೊಡವ ಭಾಷೆ ಮಾತನಾಡುವ ಇತರೆ ಸಣ್ಣ ಪುಟ್ಟ ಸಮಾಜಗಳಿಗೂ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಅವರು ಮನವಿ ಮಾಡಿದರು.
ಕೊಡವ ಭಾಷಿಕ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ, ಹಾಗೆಯೇ ಸ್ಮಶಾನ ಭೂಮಿ ಒದಗಿಸಬೇಕು. ಸರ್ಕಾರದ ಸೌಲಭ್ಯಗಳು ಕೊಡವ ಭಾಷಿಕ ಎಲ್ಲಾ ಜನಾಂಗಗಳಿಗೂ ತಲುಪಬೇಕು ಎಂದು ಡಾ.ವಿಜಯ್ ಪೂಣಚ್ಚ ತಂಬಂಡ ಕೋರಿದರು.
ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ ಅವರು ಮಾತನಾಡಿ ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ಜನರಿಗೂ ತಲುಪಬೇಕು ಎಂದು ಅವರು ಪ್ರತಿಪಾದಿಸಿದರು.
ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷರಾದ ಡಾ.ಮೇಚಿರ ಸುಭಾಶ್ ನಾಣಯ್ಯ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ಮಾಜಿ ಅಡ್ವಕೇಟ್ ಜನರಲ್ ಎ.ಎಸ್.ಪೊನ್ನಣ್ಣ, ಸಮಾಜ ಸೇವಕರಾದ ಕೆ.ಎಂ.ಬಿ.ಗಣೇಶ್, ಕೊಡವ ತಕ್ಕ್ ಜನಾಂಗಕಾರಡ ಒಕ್ಕೂಟದ ಅಧ್ಯಕ್ಷರಾದ ಕೊರಕುಟ್ಟಿರ ಸರಾ ಚಂಗಪ್ಪ, ಜಿ.ಪಂ.ಮಾಜಿ ಸದಸ್ಯರಾದ ಬಬ್ಬೀರ ಸರಸ್ವತಿ ಅವರು ಮಾತನಾಡಿದರು.
ಹೆಗ್ಗಡೆ ಸಮಾಜದ ಅಧ್ಯಕ್ಷರಾದ ಪಡಿಞರಂಡ ಅಯ್ಯಪ್ಪ, ಅಖಿಲ ಅಮ್ಮಕೊಡವ ಸಮಾಜದ ಅಧ್ಯಕ್ಷರಾದ ಬಾನಂಡ ಪ್ರಥ್ಯು, ಐರಿ ಸಮಾಜದ ಅಧ್ಯಕ್ಷರಾದ ಮೇಲತ್ತಂಡ ರಮೇಶ್, ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಕಸ್ತೂರಿ ಗೋವಿಂದಮ್ಮಯ್ಯ, ಕೊಡಗು ಕೆಂಬಟ್ಟಿ ಸಮಾಜದ ಅಧ್ಯಕ್ಷರಾದ ದೊಡ್ಡಕುಟ್ಟಡ ರಾಮು ಅಯ್ಯಪ್ಪ, ಕೊಯವ ಸಮಾಜದ ಅಧ್ಯಕ್ಷರಾದ ಜಿಲ್ಲಂಡ ದಾದು ಮಾದಪ್ಪ, ಸವಿತ ಸಮಾಜದ ಅಧ್ಯಕ್ಷರಾದ ವೇದಪ್ಪಂಡ ಬಿದ್ದಪ್ಪ, ಕುಡಿಯ ಸಮಾಜದ ಅಧ್ಯಕ್ಷರಾದ ಕುಡಿಯರ ಮುತ್ತಪ್ಪ, ಕಣಿಯ ಸಮಾಜದ ಮುಖಂಡರಾದ ಕಣಿಯರ ಪ್ರಕಾಶ, ಪಣಿಕ ಸಮಾಜದ ಅಧ್ಯಕ್ಷರಾದ ಪೊನ್ನಜ್ಜೀರ ದಿನೇಶ್ ಸೋಮಯ್ಯ, ಕೊಲೇಯ ಸಮಾಜದ ಅಧ್ಯಕ್ಷರಾದ ಕೊಲೇಯಂಡ ಗಿರೀಶ್, ಬೂಣೆಪಟ್ಟಮ ಸಮಾಜದ ಮುಖಂಡರಾದ ಜೋಕೀರ ಜೀವನ್, ಬಣ್ಣ ಸಮಾಜದ ಮುಖಂಡರಾದ ಬೀಕಚಂಡ ಬೆಳ್ಯಪ್ಪ, ಮಡಿವಾಳ ಸಮಾಜದ ಮುಖಂಡರಾದ ಪಾತಂಡ ಸಂತೋಷ್, ಗೊಲ್ಲ ಸಮಾಜದ ಅಧ್ಯಕ್ಷರಾದ ಪೊನ್ನುಕಂಡ ಚಿತ್ರಾ ಮಾದಪ್ಪ, ಮಲೀಯ ಸಮಾಜದ ಅಧ್ಯಕ್ಷರಾದ ಮಲೆಯಡ ರಾಜಾ ಮುತ್ತಪ್ಪ, ಕೊಡಗು ನಾಯರ್ ಸಮಾಜದ ಮುಖಂಡರಾದ ರನ್ನ ಮೇದಪ್ಪ, ಕಾಪಾಳ ಸಮಾಜದ ಮುಖಂಡರಾದ ಕೆ.ಮಿಲನ್, ಮೇದ ಸಮಾಜದ ಮುಖಂಡರಾದ ಎಂ.ಚಂದ್ರ, ಅರಮನೆ ಪಾಲೆ ಸಮಾಜದ ಅಧ್ಯಕ್ಷರಾದ ಎ.ಮಂದಣ್ಣ ಇದ್ದರು.
ಒತ್ತೋರ್ಮೆ ಕೂಟದ ಜಾನಪದ ಕಲಾ ಮೆರವಣಿಗೆ ನಡೆಯಿತು. ವಸ್ತುಪ್ರದರ್ಶನ ಹಾಗೂ ಜಾನಪದ ಸಾಂಸ್ಕೃತಿಕ ಮತ್ತು ಕಲಾ ಪ್ರದರ್ಶನ ಗಮನ ಸೆಳೆಯಿತು.

Share. Facebook Twitter Pinterest LinkedIn Tumblr Email WhatsApp
Previous Articleಬಾಳೆಯಡ ಕಿಶನ್ ಪೂವಯ್ಯ ರಚಿತ ಪುಸ್ತಕಗಳ ಬಿಡುಗಡೆ : ಬೆಟ್ಟ ಗುಡ್ಡಗಳಲ್ಲಿ ರೆಸಾರ್ಟ್ ನಿರ್ಮಿಸಿ ಕೊಡಗನ್ನು ನಾಶ ಮಾಡಲಾಗುತ್ತಿದೆ : ಮಾಜಿ ಸಚಿವ ಎಂ.ಸಿ.ನಾಣಯ್ಯ ಬೇಸರ
Next Article ಸುಂಟಿಕೊಪ್ಪ ಬಿಜೆಪಿ ಶಕ್ತಿ ಕೇಂದ್ರದಿಂದ ವಿಜಯ ಸಂಕಲ್ಪ ಅಭಿಯಾನ

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.