Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಎಮ್ಮೆಮಾಡು ಉರೂಸ್ : :ಫೆ.27 ಮತ್ತು ಮಾ.3ರಂದು ಪಟ್ಟಣದಲ್ಲಿ ವಾಹನ ನಿಲುಗಡೆ ನಿಷೇಧ : C I ಶೇಖರ್
ಇತ್ತೀಚಿನ ಸುದ್ದಿಗಳು

ಎಮ್ಮೆಮಾಡು ಉರೂಸ್ : :ಫೆ.27 ಮತ್ತು ಮಾ.3ರಂದು ಪಟ್ಟಣದಲ್ಲಿ ವಾಹನ ನಿಲುಗಡೆ ನಿಷೇಧ : C I ಶೇಖರ್

February 23, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಫೆ.23 :  ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಫೆ.27  ಮತ್ತು ಮಾ.3 ರಂದು ಬೆಳಗ್ಗೆ 6ಗಂಟೆಯಿಂದ ರಾತ್ರಿ 9ರ ವರೆಗೆ ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದ್ದು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಶೇಖರ್ ಮನವಿ ಮಾಡಿದರು.

ಉರೂಸ್ ಪ್ರಯುಕ್ತ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಕರೆಯಲಾಗಿದ್ದ ಸರ್ವಜನಿಕರ ಸಭೆಯಲ್ಲಿ ಮಾತನಾಡಿದ ಅವರು, ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಹಲವಾರು ಭಕ್ತಾದಿಗಳು ಆಗಮಿಸುತ್ತಿದ್ದು ಫೆ.27 ರಂದು ನಾಪೋಕ್ಲು ಸಂತೆ ದಿನಕೂಡ ಆಗಿದ್ದು ಪಟ್ಟಣದಲ್ಲಿ ವಾಹನದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನು ನಿಯಂತ್ರಿಸಲು ನಾಪೋಕ್ಲು ವ್ಯಾಪ್ತಿಯ ಎಲ್ಲಾ ಸಾರ್ವಜನಿಕರು ತಮ್ಮ ತಮ್ಮ ವಾಹನಗಳನ್ನು ಹಳೆ ತಾಲೂಕುವಿನಿಂದ ನಾಪೋಕ್ಲು ಸಂತೆ ಮಾರುಕಟ್ಟೆಯವರೆಗಿನ ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ವಾಹನಗಳನ್ನು ನಿಲ್ಲಿಸದೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.

ಈ ದಿನ  ವಾಹನಗಳ ನಿಲುಗಡೆಗೆ ಬದಲಿ ವ್ಯವಸ್ಥೆಮಾಡಲಾಗಿದ್ದು, ನೆಲಜಿ,ಕೊಳಕೇರಿ,ಕಕ್ಕಬ್ಬೆ ಭಾಗದಿಂದ ಸಂತೆಗೆ ಬರುವ ಜನರು ಹಳೆ ತಾಲೂಕು ಸರ್ಕಾರಿ ಶಾಲಾ ಮೈದಾನದಲ್ಲಿ ತಮ್ಮ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಬೇತು ರಸ್ತೆ, ಪೊಲೀಸ್ ಠಾಣಾ ಮೈದಾನ, ನಾಡ ಕಛೇರಿ ಆವರಣ, ಚೆರಿಯ ಪರಂಬು ರಸ್ತೆಯಲ್ಲಿ ಇತರೆ ಕಡೆಗಳಿಂದ ಬರುವ ಸಾರ್ವಜನಿಕರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಸಭೆಯಲ್ಲಿ ಸಾರ್ವಜನಿಕರ ಪರವಾಗಿ ಮಾತನಾಡಿದ ಬಿಜೆಪಿ ಮುಖಂಡ ಕುಂದ್ಯೋಳಂಡ ರಮೇಶ್ ಮುದ್ದಯ್ಯ ಎಮ್ಮೆಮಾಡು ಉರೂಸ್ ಸಮಾರಂಭವು ಎಲ್ಲಾ ಜನಾಂಗದವರನ್ನು ಒಗ್ಗೂಡಿಸುವ ಒಂದು ಕೇಂದ್ರವಾಗಿದೆ. ಇದ್ದಕ್ಕೆ ನಾವು ಎಲ್ಲಾರೀತಿಯಲ್ಲಿ ಪ್ರತಿ ವರ್ಷ ಸಹಕಾರ ನೀಡುತ್ತಾಬಂದಿದ್ದೇವೆ ಎಂದರು. ನಾಪೋಕ್ಲು ಪಟ್ಟಣದಲ್ಲಿ ಅಂಗಡಿ ಮಾಲೀಕರು ತಮ್ಮ ವಾಹನಗಳನ್ನು ಬೆಳಗ್ಗೆಯಿಂದ ಸಂಜೆವರೆಗೆ ಅಂಗಡಿಗಳ ಮುಂದೆ ನಿಲ್ಲಿಸುವುದರಿಂದ ಸಾರ್ವಜನಿಕರ ವಾಹನ ನಿಲುಗಡೆಗೆ ತೊಂದರೆಯಾಗುತ್ತಿದೆ. ಇದರಿಂದ ಪ್ರತಿ ದಿನ ಪಟ್ಟಣದಲ್ಲಿ ವಾಹನ ದಟ್ಟನೆ ಹೆಚ್ಚಾಗುತ್ತಿದೆ ಇದಕ್ಕೆ ಕ್ರಮವಹಿಸಬೇಕೆಂದರು.

ನಾಪೋಕ್ಲು ಗ್ರಾ.ಪಂ.ಸದಸ್ಯ ಪ್ರತೀಪ್ ಮಾತನಾಡಿ ಉರೂಸ್ ಅಂಗವಾಗಿ ಸೋಮವಾರ ಎಮ್ಮೆಮಾಡು ಕೂರುಳಿ ಮಾರ್ಗವಾಗಿ ಏಕ ಮುಖ ಸಂಚಾರಕ್ಕೆ ಪ್ರತಿ ವರ್ಷ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆದರೆ ಈ ವರ್ಷ ಕೂರುಳಿ ರಸ್ತೆಯು ನೂತನವಾಗಿ ಕಾಂಕ್ರೆಟ್ ಡಾಂಬರೀಕರಣವಾಗಿದ್ದು ವಾಹನಗಳ ಸಂಚಾರದ ವೇಗ ಹೆಚ್ಚಾಗಿದೆ. ಇದರಿಂದ ಆಪಘಾತ ವಾಗುವ ಸಾಧ್ಯತೆ ಹೆಚ್ಚಾಗಿದ್ದು ಇದಕ್ಕೆ ವೇಗ ನಿಯಂತ್ರಿಸಲು ಬ್ಯಾರಿಗೇಟ್ ವ್ಯವಸ್ಥೆ ಕಲ್ಪಿಸಬೇಕೆಂದು ಗಮನ ಸೆಳೆದರು.

ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ ಮಾತನಾಡಿ ಎಮ್ಮೆಮಾಡು ಊರೂಸ್ ಕಾರ್ಯಕ್ರಮಕ್ಕೆ ನಾಪೋಕ್ಲು ವಿಭಾಗದ ಸರ್ವಜನಾಂಗದವರು ಎಲ್ಲಾರೀತಿಯಲ್ಲಿ ಸಹಕಾರ ನಿಡುತ್ತಿದ್ದಾರೆ.ಹೊರ ಜಿಲ್ಲೆ, ರಾಜ್ಯಗಳಿಂದ ಸಮಾರಂಭಕ್ಕೆ ಬರುವ ಭಕ್ತಾದಿಗಳಿಗೆ ಜಿಲ್ಲೆಯ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಇಲಾಖೆಯವರು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಇದಕ್ಕೆ ಗ್ರಾ. ಪಂ.ಸದಸ್ಯ ಚಕ್ಕೇರ ಇಸ್ಮಾಯಿಲ್ ದ್ವನಿಗೂಡಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ವೃತ ನಿರೀಕ್ಷಕ ಶೇಖರ್ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ನಡೆಯುತ್ತವೆ, ಉರೂಸ್ ಸಮಾರಂಭಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆಯಾಗದಂತೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು.ನಾಪೋಕ್ಲು ಪಟ್ಟಣದ ಸಂಚಾರಿ ಅವ್ಯವಸ್ಥೆಗಳ ಬಗ್ಗೆ ಉರೂಸ್ ಸಮಾರಂಭ ಮುಗಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭ ನಾಪೋಕ್ಲು ಪೊಲೀಸ್ ಠಾಣೆಯ ಪ್ರಭಾರ ಠಾಣಾಧಿಕಾರಿ ಗೋಪಾಲಕೃಷ್ಣ,ನಾಪೋಕ್ಲು ಗ್ರಾ.ಪಂ.ಉಪಾಧ್ಯಕ್ಷ ಮಹಮ್ಮದ್, ಸದಸ್ಯ ಸಾಬಾ ತಿಮ್ಮಯ್ಯ, ನಾಪೋಕ್ಲು ವಾಹನ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್, ಉಪಾಧ್ಯಕ್ಷ ನಾಗರಾಜ್,ಎಮ್ಮೆಮಾಡು ಗ್ರಾ. ಪಂ. ಮಾಜಿ ಅಧ್ಯಕ್ಷ ಆಲಿ ಕುಟ್ಟಿ, ಎಮ್ಮೆಮಾಡು ಗ್ರಾ.ಪಂ. ಸದಸ್ಯರಾದ ಗಫೂರ್, ಯೂಸುಫ್,ಭಜರಂಗ ದಳದ ರಾಧಾಕೃಷ್ಣ ರೈ,ಪ್ರವೀಣ್,ಆಟೋ ಚಾಲಕರು, ವರ್ತಕರು, ಠಾಣೆಯ ಸಿಬ್ಬಂದಿಗಳು ಮತ್ತಿತರರು ಹಾಜರಿದ್ದರು.

ವರದಿ :ಝಕರಿಯ ನಾಪೋಕ್ಲು  

Share. Facebook Twitter Pinterest LinkedIn Tumblr Email WhatsApp
Previous Articleನಾಪೋಕ್ಲು ಪೊಲೀಸ್ ಠಾಣೆಗೆ ನೂತನ ಠಾಣಾಧಿಕಾರಿ
Next Article ಯುವಕ ನೇಣಿಗೆ ಶರಣು : ಕಲ್ಲುಬಾಣೆಯಲ್ಲಿ ಘಟನೆ

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.