Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕುಶಾಲನಗರ : ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ “ಕರ್ನಾಟಕ ದರ್ಶನ” ಉಚಿತ ಪ್ರವಾಸಕ್ಕೆ ಚಾಲನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ : ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ “ಕರ್ನಾಟಕ ದರ್ಶನ” ಉಚಿತ ಪ್ರವಾಸಕ್ಕೆ ಚಾಲನೆ

ಫೆಬ್ರವರಿ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಫೆ.23: ಕೋವಿಡ್‌ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವನ್ನು, ಈ ವರ್ಷ ಮತ್ತೆ ಆರಂಭಿಸಲಾಗಿದೆ.

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಸರ್ಕಾರಿ ಪ್ರೌಢಶಾಲಾ 8ನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿರುವ ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ  ಕುಶಾಲನಗರ ತಾಲ್ಲೂಕಿನ ಮಕ್ಕಳ ಪ್ರವಾಸಕ್ಕೆ ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾವರಣದಲ್ಲಿ ಚಾಲನೆ ನೀಡಿ ಬೀಳ್ಕೊಡಲಾಯಿತು.
ಪ್ರವಾಸದ ವಿದ್ಯಾರ್ಥಿಗಳಿಗೆ ಕಿಟ್ ವಿತರಿಸುವ ಮೂಲಕ ಪ್ರವಾಸಕ್ಕೆ ಚಾಲನೆ ನೀಡಿದ
ಕುಶಾಲನಗರ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್ (ಕೇಶವ) ಮಾತನಾಡಿ, “ಕರ್ನಾಟಕ ದರ್ಶನ” ಎಂಬ ಉಚಿತ ಶೈಕ್ಷಣಿಕ ಪ್ರವಾಸದಲ್ಲಿ ಮಕ್ಕಳು ರಾಜ್ಯದ ವಿವಿಧ ಧಾರ್ಮಿಕ, ಐತಿಹಾಸಿಕ ಹಾಗೂ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಅವುಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಪ್ರವಾಸದ ಬಸ್ ಗಳಿಗೆ ಹಸಿರು ನಿಶಾನೆ ನೀಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮದ ಉದ್ದೇಶ, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪರಿಪೂರ್ಣವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಖ್ಯವಾದ ಸ್ಥಳಗಳು ಅಂದರೆ ಸ್ಥಳೀಯ ವೈಜ್ಞಾನಿಕ, ಧಾರ್ಮಿಕ, ಭೌಗೋಳಿಕ, ನೈಸರ್ಗಿಕ, ಐತಿಹಾಸಿಕ, ವಿಜ್ಞಾನ ಮತ್ತು ಕೈಗಾರಿಕೆಗಳು, ಉದ್ಯಾನವನ, ಮ್ಯೂಸಿಯಂ, ಪ್ರಖ್ಯಾತ ವ್ಯಕ್ತಿಗಳು ಹುಟ್ಟಿದ ಊರುಗಳು ಇತ್ಯಾದಿಗಳ ಬಗ್ಗೆ ಅರಿವು ಮೂಡಿಸುವುದಾಗಿದೆ ಎಂದರು.
ಕೋವಿಡ್‌ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವನ್ನು, ಈ ವರ್ಷ ಮತ್ತೆ ಆರಂಭಿಸಲಾಗಿದೆ. ಪ್ರತಿ ತಾಲೂಕಿನಿಂದ ನಾಲ್ಕು ದಿನಗಳ ಪ್ರವಾಸಕ್ಕೆ ಒಂದು ಬಸ್‌ ಸೌಲಭ್ಯ ಕಲ್ಪಿಸಲಾಗಿದ್ದು, 50 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ತೆರಳಿದ್ದಾರೆ ಎಂದು ಶಿಕ್ಷಣ ಸಂಯೋಜಕ ರಾಧಾಕೃಷ್ಣ ತಿಳಿಸಿದರು.
ಶಿಕ್ಷಣ ಸಂಯೋಜಕರಾದ ಕೆ.ಬಿ.ರಾಧಾಕೃಷ್ಣ, ಎಚ್.ಆರ್ ಶೇಖರ್, ಪ್ರವಾಸದ ಜಿಲ್ಲಾ ನೋಡಲ್ ಅಧಿಕಾರಿ ವೆಂಕಟೇಶ್, ಮಾರ್ಗದರ್ಶಕರಾದ ಮಹೇಶ್, ಚನ್ನರಸ, ಪ್ರವಾಸ ಮಾರ್ಗದರ್ಶಿ ಶಿಕ್ಷಕರು ಸೇರಿದಂತೆ ವಿವಿಧ ಶಾಲಾ ಶಿಕ್ಷಕರು ಇದ್ದರು.
ಮಕ್ಕಳು 4 ದಿನಗಳ ಕಾಲದ ಪ್ರವಾಸಕ್ಕೆ ಖುಷಿಯಿಂದ ತೆರಳಿದರು. ಶಿಕ್ಷಕರು ಹಾಗೂ ಪೋಷಕರು ಮಕ್ಕಳ ಪ್ರವಾಸಕ್ಕೆ ಶುಭ ಕೋರಿದರು.
ಕರ್ನಾಟಕ ದರ್ಶನ ಪ್ರವಾಸ ಕುರಿತು ಮಾಹಿತಿ ನೀಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್,
ಮಕ್ಕಳಲ್ಲಿ ಶೈಕ್ಷಣಿಕ ಜೀವನ ರೂಪಿಸಿಕೊಳ್ಳುವ ಮಾರ್ಗದರ್ಶನ ಸಿಗುವ ನಿಟ್ಟಿನಲ್ಲಿ ರಾಜ್ಯದ ಶೈಕ್ಷಣಿಕ ಮತ್ತು ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ವಿಕ್ಷಣೆ ಮಾಡಲು ಅವಕಾಶ ನೀಡಲಾಗಿದೆ ಎಂದರು.
ಕುಶಾಲನಗರದಿಂದ ಮೂರು ಬಸ್ಸಿನಲ್ಲಿ 150 ಮಕ್ಕಳು ಹಾಗೂ ಸೋಮವಾರಪೇಟೆಯಿಂದ ಎರಡು ಬಸ್ಸಿನಲ್ಲಿ 100 ಮಕ್ಕಳು ಸೇರಿದಂತೆ ಸೋಮವಾರಪೇಟೆ ತಾಲ್ಲೂಕು ಬಿಇಓ ಕಛೇರಿ ಮೂಲಕ ಒಟ್ಟು 250 ವಿದ್ಯಾರ್ಥಿಗಳು ಕರ್ನಾಟಕ ದರ್ಶನ ಪ್ರವಾಸಕ್ಕೆ ತೆರಳಿದ್ದಾರೆ ಎಂದರು.
ಪ್ರವಾಸಿ ವೀಕ್ಷಣೆ ಸ್ಥಳಗಳು:
ವಿದ್ಯಾರ್ಥಿಗಳ 4 ದಿನಗಳ ಕಾಲದ ಪ್ರವಾಸದ ವೀಕ್ಷಣೆ ಸ್ಥಳಗಳು:
1 ನೇ ದಿನ : ಬೇಲೂರು,ಹಳೇಬೀಡು, ಶ್ರವಣಬೆಳಗೊಳ( ವಾಸ್ತವ್ಯ)
2 ನೇ ದಿನ : ಚಿತ್ರದುರ್ಗ & ಟಿ.ಬಿ.ಡ್ಯಾಂ( ವಾಸ್ತವ್ಯ)
3 ನೇ ದಿನ : ಹಂಪಿ & ಸುತ್ತಮುತ್ತ & ಐಹೊಳೆ ( ವಾಸ್ತವ್ಯ)
4 ನೇ ದಿನ : ಪಟ್ಟದಕಲ್ಲು, ಬಾದಾಮಿ & ಮಹಾಕೂಟ ವೀಕ್ಷಣೆ ನಂತರ ಭಾನುವಾರ ರಾತ್ರಿ ಮರಳಿ ಸೋಮವಾರ ಬೆಳಿಗ್ಗೆ 6 ಗಂಟೆಗೆ ಜಿಲ್ಲೆಗೆ ಹಿಂತಿರುಗುವುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ವಿರಾಜಪೇಟೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ಪಿ.ಕವಿತಾ ಅಧಿಕಾರ…

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.