Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ವಿರಾಜಪೇಟೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದರೆ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲ್ಲ
ಇತ್ತೀಚಿನ ಸುದ್ದಿಗಳು

ವಿರಾಜಪೇಟೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದರೆ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲ್ಲ

February 24, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.24 : ಜಾತ್ಯತೀತ ಮುಖವಾಡದ ಕಾಂಗ್ರೆಸ್ ಪಕ್ಷ ವಿರಾಜಪೇಟೆ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಸ್ಪರ್ಧಿಸಲು ಟಿಕೆಟ್ ನೀಡಿದರೆ ಜಾತ್ಯತೀತ ಜನತಾದಳ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಬೆಂಬಲ ಸೂಚಿಸಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮಾಡುತ್ತಲೆ ಬರುತ್ತಿರುವ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರಿಗೆ ಸ್ಪರ್ಧಿಸಲು ಅವಕಾಶ ನೀಡದೆ ವಂಚಿಸುತ್ತಲೇ ಬರುತ್ತಿದೆ. ಆದರು ನಮ್ಮದು ‘ಜಾತ್ಯತೀತ’ ಸಿದ್ಧಾಂತದ ಪಕ್ಷ ಎಂದು ಹೇಳಿಕೊಳ್ಳುತ್ತಿದೆ. ನಿಜವಾದ ಜಾತ್ಯತೀತ ಮನೋಭಾವ ಕಾಂಗ್ರೆಸ್ಸಿಗಿದ್ದರೆ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿರುವ ವಿರಾಜಪೇಟೆ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಸ್ಪರ್ಧಿಸಲು ಅವಕಾಶ ನೀಡಲಿ ಎಂದು ಸವಾಲೆಸೆದರು.
ಒಂದು ವೇಳೆ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಜೆಡಿಎಸ್ ಸ್ಪರ್ಧೆಯಿಂದ ಹಿಂದೆ ಸರಿದು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲಿದೆ. ಪ್ರತಿ ಚುನಾವಣಾ ಹಂತದಲ್ಲಿ ಜೆಡಿಎಸ್ ಸ್ಪರ್ಧೆ ಬಿಜೆಪಿ ಗೆಲುವಿಗೆ ಸಹಕಾರಿಯಾಯಿತು ಎನ್ನುವ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ. ವಿರಾಜಪೇಟೆ ಕ್ಷೇತ್ರದಲ್ಲಿ 45 ಸಾವಿರಕ್ಕು ಹೆಚ್ಚಿನ ಮುಸ್ಲಿಂ ಬಾಂಧವರಿದ್ದು, ಈ ಬಾರಿ ಅಲ್ಪಸಂಖ್ಯಾತರಿಗೆ ಸ್ಪರ್ಧೆಗೆ ಅವಕಾಶ ನೀಡಿ ಕಾಂಗ್ರೆಸ್ ನ್ನು ಗೆಲ್ಲಿಸಲಿ ಎಂದರು.
ವಿರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಮೂಲಕ ಸ್ಪರ್ಧಿಸಲು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವಂತೆ ಈಗಾಗಲೇ ವರಿಷ್ಠರಿಗೆ ಮನವಿ ಮಾಡಿರುವುದಾಗಿ ಗಣೇಶ್ ಹೇಳಿದರು.

::: ಆಕಾಂಕ್ಷಿಗಳು :::
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ತಲಾ ನಾಲ್ವರು ಆಕಾಂಕ್ಷಿಗಳಿದ್ದಾರೆ. ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಗೆಲುವಿಗೆ ಶ್ರಮಿಸಲಾಗುವುದು. ಈಗಾಗಲೇ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂದು ಪ್ರತಿಬಿಂಬಿಸಿಕೊಳ್ಳುತ್ತಿರುವ ನಾಪಂಡ ಮುತ್ತಪ್ಪ ಅವರಿಗೆ ಟಿಕೆಟ್ ನೀಡಿದರು ಅವರನ್ನು ಬೆಂಬಲಿಸುವುದಾಗಿ ತಿಳಿಸಿದ ಗಣೇಶ್, ಪಕ್ಷದೊಳಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳಿಲ್ಲವೆಂದು ಸ್ಪಷ್ಟಪಡಿಸಿದರು.
ಮಡಿಕೇರಿ ಕ್ಷೇತ್ರದಲ್ಲಿ ಇಸಾಕ್ ಖಾನ್, ಬಿ.ಬಿ.ಪುಷ್ಪಾವತಿ, ವಿಠಲ್ ಗೌಡ, ನಾಪಂಡ ಮುತ್ತಪ್ಪ ಅವರುಗಳು ಆಕಾಂಕ್ಷಿಗಳಾಗಿದ್ದಾರೆ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಮನ್ಸೂರ್ ಅಲಿ, ಬಲ್ಲಚಂಡ ಗೌತಮ್, ಯೂಸುಫ್ ಕೊಂಡಂಗೇರಿ ಹಾಗೂ ಮಂಜುನಾಥ್ ಅವರು ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದದಾರೆ.
ಇಲ್ಲಿಯವರೆಗೂ ಪಕ್ಷದ ವರಿಷ್ಠರು ಅಭ್ಯರ್ಥಿ ಯಾರೆಂದು ಘೋಷಿಸಿಲ್ಲ. ಹೀಗಿದ್ದೂ ತಾವೇ ಅಭ್ಯರ್ಥಿಯೆಂದು ಪ್ರಚಾರದಲ್ಲಿ ತೊಡಗಿರುವವರು ಟಿಕೆಟ್ ದೊರಕದಿದ್ದಲ್ಲಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಈ ರೀತಿ ಪಕ್ಷದ ತತ್ತ್ವ ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ ಯಾರೇ ಆಗಿರಲಿ ಅವರನ್ನು ಅಮಾನತುಗೊಳಿಸಲಾಗುವುದು ಎಂದರು.
::: ಮನೆ ಮನೆಗೆ ಕುಮಾರಣ್ಣ :::
ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕೈಗೊಂಡ ಜನಪರ ಕಾರ್ಯಗಳನ್ನು ಮನೆ ಮನೆಗೆ ತಿಳಿಸುವ ಸಲುವಾಗಿ ಕೊಡಗು ಜಿಲ್ಲೆಯಲ್ಲಿ “ಮನೆ ಮನೆಗೆ ಕುಮಾರಣ್ಣ” ಕಾರ್ಯಕ್ರಮವನ್ನು ಫೆ.27 ರಿಂದ ನಡೆಸಲಾಗುವುದು. ಅತಿವೃಷ್ಟಿ ಸಂದರ್ಭ ಕೊಡಗಿನ ಸಂಕಷ್ಟಕ್ಕೆ ಸ್ಪಂದಿಸಿದ್ದ ಕುಮಾರಣ್ಣ, ರೈತರ ಸಾಲಮನ್ನಾದಂತಹ ಗಮನಾರ್ಹ ಕಾರ್ಯಕ್ರಮಗಳ ಮೂಲಕ ಗಮನ ಸೆಳೆದಿದ್ದರು. ಇದನ್ನು ಕೊಡಗಿನ ಜನ ಮರೆತಿಲ್ಲ ಎಂದು ಗಣೇಶ್ ಹೇಳಿದರು.
::: ಜೆಡಿಎಸ್ ತೊರೆಯಲ್ಲ :::
ಕಳೆದ ಮೂರೂವರೆ ವರ್ಷಗಳಿಂದ ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಪಕ್ಷದ ಏಳಿಗೆಗಾಗಿ ಶ್ರಮಿಸುತ್ತಿದ್ದೇನೆ. ಪಕ್ಷ ಸಂಘಟನೆಯನ್ನು ಸಹಿಸದ ಕೆಲವರು ತಾನು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತೇನೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಹೆಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ, ಪಕ್ಷದ ಸಿದ್ಧಾಂತಗಳಿಗೆ ಬದ್ಧನಾಗಿದ್ದೇನೆ. ಯಾವುದೇ ಕಾರಣಕ್ಕು ಪಕ್ಷ ಬಿಡುವುದಿಲ್ಲ, ಈ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಬೇಡ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕೆನ್ನುವ ಚಿಂತನೆಯಡಿ ಎಲ್ಲರೂ ಕಾರ್ಯಕರ್ತರಂತೆ ಶ್ರಮವಹಿಸಿ ಜೆಡಿಎಸ್ ಗೆಲುವಿಗಾಗಿ ಶ್ರಮಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ತೊರೆದಿರುವ ಸಂಕೇತ್ ಪೂವಯ್ಯ ಅವರು ಬಿಜೆಪಿಯನ್ನು ಮಣಿಸಲು ಜಾತ್ಯತೀತರೆಲ್ಲ ಒಂದಾಗಿರಬೇಕೆನ್ನುವ ಕಾರಣದಿಂದ ಕಾಂಗ್ರೆಸ್‍ಗೆ ಸೇರ್ಪಡೆಯಾಗಿರುವುದಾಗಿ ಕಾರಣ ನೀಡಿದ್ದಾರೆ. ಕಾಂಗ್ರೆಸ್ ನಲ್ಲಿ ನಿಜವಾದ ಜಾತ್ಯತೀತತೆ ಇದ್ದರೆ ವಿರಾಜಪೇಟೆಯಲ್ಲಿ ಅಲ್ಪಸಂಖ್ಯಾತರು, ಪರಿಶಿಷ್ಟರು ಅಥವಾ ಹಿಂದುಳಿದ ವರ್ಗದವರಿಗೆ ಟಿಕೆಟ್ ನೀಡಿ ಅದನ್ನು ಸಾಬೀತುಪಡಿಸಲಿ. ಸಂಕೇತ್ ಅವರ ನಿರ್ಗಮನ ಬೇಸರ ತಂದಿದೆ, ಜೆಡಿಎಸ್ ಪಕ್ಷ ಅವರಿಗೆ ಎಲ್ಲಾ ಸ್ಥಾನಮಾನಗಳನ್ನು ನೀಡಿ ನಾಯಕತ್ವವನ್ನು ತುಂಬಿತ್ತು ಎಂದರು.
ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಾತನಾಡಿ, ಸಂಕೇತ್ ಪೂವಯ್ಯ ಅವರು ಚುನಾವಣೆಗೆ ನಿಂತಾಗ ಅಲ್ಪಸಂಖ್ಯಾತ ಸಮೂಹ ತಮ್ಮ ಪೂರ್ಣ ಬೆಂಬಲವನ್ನು ನೀಡಿದ್ದರು. ಇದೀಗ ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರಿಗೆ ಸ್ಪರ್ಧೆಗೆ ಅವಕಾಶ ದೊರಕುವ ಸಂದರ್ಭ ಬೆಂಬಲಿಸಬೇಕಿದ್ದ ಸಂಕೇತ್ ಅವರು, ಪಕ್ಷ ತೊರೆದು ಅಲ್ಪಸಂಖ್ಯಾತರ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ್ ಮೌರ್ಯ, ಜಿಲ್ಲಾ ಉಪಾಧ್ಯಕ್ಷ ಬಲ್ಲಚಂಡ ಗೌತಮ್, ಜಿಲ್ಲಾ ಖಜಾಂಚಿ ಡೆನ್ನಿ ಬರೋಸ್ ಹಾಗೂ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಬಿ.ಬಿ.ಪುಷ್ಪಾವತಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಭಕ್ತರ ಇಷ್ಟಾರ್ಥಗಳನ್ನು ನೆರವೇರಿಸುವ ಕಲ್ಗುಂಡಿ ಶ್ರೀ ಗುರು ಮರುಳಸಿದ್ಧೇಶ್ವರ ಸ್ವಾಮಿ ದೇವಾಲಯ
Next Article ಜೆಡಿಎಸ್ ತೊರೆಯಲ್ಲ : ಕೆ.ಎಂ.ಗಣೇಶ್ ಸ್ಪಷ್ಟನೆ

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.