Advertisement
2:34 AM Thursday 7-December 2023

ವ್ಯಾಪಾರಿ ಆತ್ಮಹತ್ಯೆಗೆ ಶರಣು : ನಾಪೋಕ್ಲುವಿನಲ್ಲಿ ಘಟನೆ

24/02/2023

ಮಡಿಕೇರಿ ಫೆ.24 : ಬಟ್ಟೆ ಮಳಿಗೆ ನಡೆಸುತ್ತಿದ್ದ ವ್ಯಾಪಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಾಪೋಕ್ಲು ಪಟ್ಟಣದಲ್ಲಿ ನಡೆದಿದೆ.
ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿ ಹಡ್ಲಹಳ್ಳಿ ಗ್ರಾಮದ ನಿವಾಸಿ ಎಚ್.ಕೆ.ಸಂದೀಪ್ (40) ಮೃತ ವ್ಯಾಪಾರಿ. ಕಳೆದ 20 ವರ್ಷಗಳಿಂದ ನಾಪೋಕ್ಲುವಿನಲ್ಲಿ ಬಟ್ಟೆ ಮಳಿಗೆ ನಡೆಸುತ್ತಿದ್ದ ಸಂದೀಪ್ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದರು ಎಂದು ಹೇಳಲಾಗಿದೆ. ನಾಪೋಕ್ಲು ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಇವರು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.