Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಅಕ್ಷರ ದಾಸೋಹ : ಬಿಸಿ ಊಟ ಆಹಾರದ ಗುಣಮಟ್ಟ ಕಾಯ್ದುಕೊಳ್ಳಿ : ಜಿ.ಪಂ ಸಿಇಒ ಡಾ.ಆಕಾಶ್ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅಕ್ಷರ ದಾಸೋಹ : ಬಿಸಿ ಊಟ ಆಹಾರದ ಗುಣಮಟ್ಟ ಕಾಯ್ದುಕೊಳ್ಳಿ : ಜಿ.ಪಂ ಸಿಇಒ ಡಾ.ಆಕಾಶ್ ಸೂಚನೆ

ಫೆಬ್ರವರಿ 24, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.24 : ಅಕ್ಷರ ದಾಸೋಹದಡಿ ಮಧ್ಯಾಹ್ನದ ಬಿಸಿ ಊಟಕ್ಕೆ ಬಳಸುವ ಆಹಾರ ಪದಾರ್ಥ ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ದೂರುಗಳು ಬರದಂತೆ ಎಚ್ಚರವಹಿಸಬೇಕು ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ 2022-23 ನೇ ಸಾಲಿನ ಜಿಲ್ಲಾ ವಲಯದ ಇಲಾಖಾ ಕಾರ್ಯಕ್ರಮಗಳ ಜನವರಿ ಅಂತ್ಯದವರೆಗಿನ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.
ಯಾವುದೇ ಕಾರಣಕ್ಕೂ ಅವಧಿ ಮೀರಿದ ಆಹಾರ ಪದಾರ್ಥ ದಾಸ್ತಾನು ಮಾಡಬಾರದು ಮತ್ತು ಉಪಯೋಗಿಸದಂತೆ ಮುನ್ನೆಚ್ಚರ ವಹಿಸುವಂತೆ ಅಕ್ಷರ ದಾಸೋಹ ಶಿಕ್ಷಣಾಧಿಕಾರಿಗೆ ಜಿ.ಪಂ.ಸಿಇಒ ಅವರು ತಾಕೀತು ಮಾಡಿದರು.
ಉತ್ತಮ ಗುಣಮಟ್ಟದ ಬೇಳೆ, ಅಕ್ಕಿ, ಎಣ್ಣೆ ಹಾಗೂ ಉತ್ತಮ ತರಕಾರಿ ಇತರ ಆಹಾರ ಪದಾರ್ಥಗಳನ್ನು ಬಳಸಬೇಕು ಎಂದು ಅವರು ಸೂಚಿಸಿದರು.
ಪ್ರಸಕ್ತ ಆರ್ಥಿಕ ವರ್ಷ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳ್ಳುವುದರಿಂದ ಜಿ.ಪಂ.ವತಿಯಿಂದ ಲಿಂಕ್ ಡಾಕ್ಯುಮೆಂಟ್ ಮೂಲಕ ಬಿಡುಗಡೆಯಾಗಿರುವ ಹಣವನ್ನು ಸಮರ್ಪಕವಾಗಿ ಬಳಸಿ, ಶೇ.100 ರಷ್ಟು ಪ್ರಗತಿ ಸಾಧಿಸುವಂತೆ ಜಿ.ಪಂ.ಸಿಇಒ ಅವರು ಅವರು ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿ ಊಟ ಯೋಜನೆ, ಅತಿಥಿ ಶಿಕ್ಷಕರಿಗೆ ಕಾಲ ಮಿತಿಯಲ್ಲಿ ವೇತನ ಪಾವತಿಸುವುದು, ವಿವೇಕ ಯೋಜನೆಯಡಿ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಮತ್ತಿತರ ಸಂಬಂಧ ಪ್ರಗತಿ ಸಾಧಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ವಿವೇಕ ಯೋಜನೆಯಡಿ 60 ಕೊಠಡಿಗಳು ನಿರ್ಮಾಣವಾಗುತ್ತಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಮಾಹಿತಿ ನೀಡಿದರು.
ಜಿ.ಪಂ.ಎಂಜಿನಿಯರ್ ವಿಭಾಗಕ್ಕೆ ವಹಿಸಲಾಗಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಆರ್ಥಿಕ ಪ್ರಗತಿ ಸಾಧಿಸುವಂತೆ ಜಿ.ಪಂ.ಸಿಇಒ ಡಾ.ಆಕಾಶ್ ಅವರು ಸೂಚಿಸಿದರು.
ರಸ್ತೆ ಮತ್ತು ಸೇತುವೆಗಳ ನಿರ್ಮಾಣಕ್ಕಾಗಿ 354.72 ಲಕ್ಷ ರೂ. ಒದಗಿಸಲಾಗಿದ್ದು. ಶೇ.50 ರಷ್ಟು ಪ್ರಗತಿ ಸಾಧಿಸಲಾಗಿದೆ. ಆದ್ದರಿಂದ ಆದಷ್ಟು ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಆರ್ಥಿಕ ಪ್ರಗತಿ ಸಾಧಿಸುವಂತೆ ಜಿ.ಪಂ.ಸಿಇಒ ಅವರು ಹೇಳಿದರು.
ಕೆರೆಗಳ ಅಭಿವೃದ್ಧಿ, ವಿವಿಧ ಇಲಾಖೆಗಳ ಕಚೇರಿಗಳ ನಿರ್ವಹಣೆ ಮತ್ತು ದುರಸ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಈಗಾಗಲೇ ಆಗಿರುವ ಕಾಮಗಾರಿ, ಜೊತೆಗೆ ವಿವಿಧ ಯೋಜನೆಗಳು ಸಂಬಂಧ ತ್ವರಿತವಾಗಿ ವರದಿ ನೀಡುವಂತೆ ಸೂಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಪ್ರಾಥಮಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಆ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ಆರೋಗ್ಯ ಸೌಲಭ್ಯ ಕಲ್ಪಿಸಬೇಕು. ಆಸ್ಪತ್ರೆಗಳನ್ನು ಸುವ್ಯವಸ್ಥಿತವಾಗಿ ನಿರ್ವಹಣೆ ಮಾಡುವುದು, ಜೊತೆಗೆ ಜಿಲ್ಲಾ ಆಯುಷ್ ಇಲಾಖೆ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಲಹೆ ಮಾಡಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಕಲ್ಪಿಸುವುದು, ವಿದ್ಯಾರ್ಥಿ ನಿಲಯಗಳ ನಿರ್ವಹಣೆ, ವಸತಿ ಶಾಲೆಗಳ ನಿರ್ವಹಣೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಈ ಇಲಾಖೆಗಳಿಗೆ ಜಿ.ಪಂ.ವತಿಯಿಂದ ಅನುದಾನ ನೀಡಲಾಗಿದ್ದು, ಸರಿಯಾಗಿ ವಿನಿಯೋಗಿಸುವಂತೆ ಜಿ.ಪಂ.ಸಿಇಒ ಅವರು ಹೇಳಿದರು.
ಅಲ್ಪಸಂಖ್ಯಾತರ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳ ನಿರ್ವಹಣೆ, ಹೀಗೆ ಹಲವು ಯೋಜನೆಗಳನ್ನು ಪೂರ್ಣಗೊಳಿಸುವಂತೆ ಜಿ.ಪಂ.ಸಿಇಒ ಅವರು ನಿರ್ದೇಶನ ನೀಡಿದರು.
ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ರೇಷ್ಮೆ, ಸಾಮಾಜಿಕ ಅರಣ್ಯ, ಸಹಕಾರ, ಹೀಗೆ ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿ ಪ್ರಗತಿ ಸಾಧಿಸುವಂತೆ ಸೂಚಿಸಿದರು.
ಕೈಗಾರಿಕೆ ಮತ್ತು ಕೈಮಗ್ಗ ಇಲಾಖೆಗೆ ಬಿಡುಗಡೆ ಮಾಡಿರುವ ಅನುದಾನ ಸಂಬಂಧ ಸಾಧಿಸಿರುವ ಪ್ರಗತಿ ಬಗ್ಗೆ ವರದಿ ಸಲ್ಲಿಸುವಂತೆ ಜಿ.ಪಂ.ಸಿಇಒ ಅವರು ಸೂಚಿಸಿದರು.
ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಯೋಜನಾ ನಿರ್ದೇಶಕರಾದ ರಾಜಗೋಪಾಲ್, ಮುಖ್ಯ ಲೆಕ್ಕಾಧಿಕಾರಿ ಝೀವಲ್‍ಖಾನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಯ್ಯ, ಜಿ.ಪಂ. ಇಇ ನಾಗೇಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಬಿಸಿಎಂ ಇಲಾಖಾ ಅಧಿಕಾರಿ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್ ಭಟ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ನಾಯಕ್, ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಸಿ.ಎನ್.ರಘು, ಕೈಮಗ್ಗ ಮತ್ತು ಜವಳಿ ಇಲಾಖೆಯ ಗುರುಸ್ವಾಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಸ್ನೇಹ, ಇತರರು ಹಲವು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.