Advertisement
2:55 AM Saturday 2-December 2023

ಮಡಿಕೇರಿ : ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

25/02/2023

ಮಡಿಕೇರಿ ಫೆ.25 :  ಕೊಡಗು ಪತ್ರಕರ್ತರ ಸಂಘದ ವತಿಯಿಂದ ಮಡಿಕೇರಿ ಲಯನ್ಸ್ ಕ್ಲಬ್ ಹಾಗೂ ಮೈಸೂರಿನ ಸುಯೋಗ್ ಆಸ್ಪತ್ರೆ ಸಹಯೋಗದಲ್ಲಿ  ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕೆಪಿಸಿಸಿ ಪ್ರಮುಖರು, ಹೈಕೋರ್ಟಿನ ನಿಕಟಪೂರ್ವ ಅಭಿಯೋಜಕ  ಹೆಚ್.ಎಸ್.ಚಂದ್ರಮೌಳಿ‌ ಉದ್ಘಾಟಿಸಿದರು.

ಮಡಿಕೇರಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ  ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪಂಡ.ಪಿ.ಸುನಿಲ್ ಸುಬ್ರಮಣಿ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್, ಲಯನ್ಸ್ ಕ್ಲಬ್ ಅಧ್ಯಕ್ಷೆ ಕನ್ನಂಡ ಕವಿತ, ಕೊಡಗು ಪತ್ರಕರ್ತರ ಸಂಘದ ಉಪಾಧ್ಯಕ್ಷ ಜಿ.ವಿ.ರವಿಕುಮಾರ್  ಹಾಜರಿದ್ದರು.

ಮೌಲ್ಯ ಪ್ರಾರ್ಥಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಸ್ವಾಗತಿಸಿದರು.  ಸದಸ್ಯ ರಂಜಿತ್ ಕವಲಪಾರ ನಿರೂಪಿಸಿದರು. ಕ್ಷೇಮಾಭಿವೃದ್ಧಿ ಸಮಿತಿ ಖಜಾಂಚಿ ಕೆ.ತಿಮ್ಮಪ್ಪ ಸರ್ವರನ್ನು ವಂದಿಸಿದರು.

ಮೈಸೂರು ಸುಯೋಗ್ ಆಸ್ಪತ್ರೆಯ ಹೃದಯ ತಜ್ಞರು, ಸ್ತ್ರೀರೋಗ ತಜ್ಞರು, ಫಿಜಿಷಿಯನ್ ವೈದ್ಯರುಗಳು ತಪಾಸಣೆ ನಡೆಸಲಿದ್ದಾರೆ. ಇಕೊ ಪರೀಕ್ಷೆ, ಇಸಿಜಿ, ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷೆ ನಡೆಯಿತು.