Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕಕ್ಕಬೆಯಲ್ಲಿ ರಾಜ್ಯಮಟ್ಟದ ಕ್ಯಾಟರ್ ಬಿಲ್ ಕ್ರೀಡಾಕೂಟ : ಗ್ರಾಮೀಣ ಕ್ರೀಡೆಗೆ ಮತ್ತೆ ಜೀವ ತುಂಬುವ ಕೆಲಸ ಆಗಿದೆ : ಶಾಸಕ ಕೆ.ಜಿ.ಬೋಪಯ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಕ್ಕಬೆಯಲ್ಲಿ ರಾಜ್ಯಮಟ್ಟದ ಕ್ಯಾಟರ್ ಬಿಲ್ ಕ್ರೀಡಾಕೂಟ : ಗ್ರಾಮೀಣ ಕ್ರೀಡೆಗೆ ಮತ್ತೆ ಜೀವ ತುಂಬುವ ಕೆಲಸ ಆಗಿದೆ : ಶಾಸಕ ಕೆ.ಜಿ.ಬೋಪಯ್ಯ

ಫೆಬ್ರವರಿ 27, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಫೆ.27 : ಗ್ರಾಮೀಣ ಭಾಗದಲ್ಲಿ ಕ್ಯಾಟರ್ ಬಿಲ್ ಸ್ಪರ್ಧೆಯನ್ನು ಆಯೋಜಿಸುವುದರ ಮೂಲಕ ಗ್ರಾಮೀಣ ಕ್ರೀಡೆಗೆ ಮತ್ತೆ ಜೀವ ತುಂಬ ಕೆಲಸವನ್ನು ಸ್ಟೆಪ್ಸ್ ಸಂಸ್ಥೆ ಮಾಡಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.
ಕಕ್ಕಬೆಯ ಪ್ರೌಢಶಾಲಾ ಮೈದಾನದಲ್ಲಿ ಸ್ಟೆಪ್ಸ್ ಸಂಸ್ಥೆ ವತಿಯಿಂದ ಆಯೋಜಿಸಲಾದ ರಾಜ್ಯಮಟ್ಟದ ಕ್ಯಾಟರ್ ಬಿಲ್ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊಡಗು ಕ್ರೀಡೆಯ ತವರೂರು. ಕ್ರೀಡೆ ಇಲ್ಲಿನ ಜನರ ಸಂಸ್ಕೃತಿಯಾಗಿದ್ದು, ಗ್ರಾಮೀಣ ಕ್ರೀಡೆಯೊಂದಕ್ಕೆ ಹೊಸತನ ನೀಡುವ ಕೆಲಸವನ್ನು ಸ್ಟೆಪ್ಸ್ ಸಂಸ್ಥೆ ಮಾಡಿದೆ. ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ನಾನಾ ಭಾಗಗಳಿಂದ ಕ್ರೀಡಾಪಟುಗಳು ಆಗಮಿಸಿರುವುದು ಸಂತಸದ ವಿಷಯ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಕ್ಯಾಟರ್ ಬಿಲ್ ಸ್ಪರ್ಧೆಯ ಮೂಲಕ ಉತ್ತಮ ಗುರಿ ಸಾಧಿಸಲು ಸಾಧ್ಯ. ಕೊಡಗಿನಲ್ಲಿ ಹಾಕಿ ಉತ್ಸವ ಆರಂಭಗೊಂಡ ಬಳಿಕ ವಿವಿಧ ಗ್ರಾಮೀಣ ಕ್ರೀಡೆಗಳು ಕ್ರೀಡಾಸಕ್ತರಿಗೆ ರಸದೌತಣ ನೀಡುತ್ತಿವೆ. ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಸೌಹಾರ್ದತೆಯನ್ನು ಮೆರೆಯಬೇಕು ಎಂದರು.

ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಕಲ್ಯಾಟಂಡ ಶಾರದ ಅಪ್ಪಣ್ಣ ಮಾತನಾಡಿ, ಗುರಿ ಇದ್ದಾಗ ಯಶಸ್ಸು ಪಡೆಯಲು ಸಾಧ್ಯ ಗ್ರಾಮೀಣ ಭಾಗಗಳಲ್ಲಿ ವಿವಿಧ ಕ್ರೀಡೆಗಳು ಜನಪ್ರಿಯವಾಗುತ್ತಿವೆ. ಗ್ರಾಮೀಣ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಸಾಮರ್ಥ್ಯ ಹಾಗೂ ಧೈರ್ಯ ವೃದ್ಧಿಸುತ್ತದೆ. ಇಂತಹ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮುಂದಿನ ತಯಾರಿಗೆ ಬುನಾದಿಯಾಗುತ್ತದೆ ಎಂದರು.
ಕಿಡ್ನಿ ದಾನಿ ಕಲಿಯಂಡ ಮಿಲನ ಮಂದಣ್ಣ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿ ಸಮಾಜದಲ್ಲಿ ನಾವು ಇತರರಿಗೆ ನೆರವು ನೀಡುವುದು ಅವಶ್ಯಕ.ದೇಹದ ಅಂಗಗಳನ್ನು ದಾನ ಮಾಡುವುದರಿಂದ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಆಗುವುದಿಲ್ಲ. ಯುವಜನರು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು .ದಾನ ಮಾಡುವುದರಿಂದ ಇತರರಿಗೂ ಸ್ಪೂರ್ತಿ ನೀಡಿದಂತಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಟೆಪ್ಸ್ ಸಂಸ್ಥೆಯ ಆಯೋಜಕ ಬೊಳಿಯಾಡಿರ ಸಂತು ಸುಬ್ರಮಣಿ ಪ್ರಸ್ತಾವಿಕವಾಗಿ ಮಾತನಾಡಿ ದೇಶಿಯ ಕ್ರೀಡೆಯಾದ ಕ್ಯಾಟರ್ ಬಿಲ್ ಸ್ಪರ್ಧೆಯಲ್ಲಿ ಕ್ಯಾಟರ್ ಬಿಲ್ ಅನ್ನು ಬೇಟೆ ರೀತಿಯಲ್ಲಿ ಬಳಸದೆ ಜಾಗೃತಿ ಮೂಡಿಸುವುದರೊಂದಿಗೆ ಗುರಿ ಇಡುವ ಸ್ಪರ್ಧೆಯಾಗಿ ಜನಪ್ರಿಯಗೊಳಿಸುವ ಉದ್ದೇಶದಿಂದ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದರು
ಕಾರ್ಯಕ್ರಮದಲ್ಲಿ ಕಿಡ್ನಿ ದಾನ ಮಾಡಿದ ಕಲಿಯಂಡ ಮಿಲನ ಮಂದಣ್ಣ ಅವರನ್ನು ವೇದಿಕೆಯಲ್ಲಿದ್ದ ಗಣ್ಯರು ಸಾಲು ಓದಿಸಿ ಕಿರು ಕಾಣಿಕೆ ನೀಡಿ ಸನ್ಮಾನಿಸಲಾಯಿತು .

ಕಕ್ಕಬ್ಬೆ ವಿಎಸ್ಎಸ್ ಎನ್ ಅಧ್ಯಕ್ಷ ಕಲ್ಯಾಟಂಡ ರಘು ತಮ್ಮಯ್ಯ ಮಡಿಕೇರಿ ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೋಡಿರ ಪ್ರಸನ್ನ, ರ‍್ಯಾಲಿ ಪಟು ಮಾಲೇಟಿರ ಜಗತ್ ನಂಜಪ್ಪ, ಆರ್ ಎಂ ಸಿ ಮಾಜಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ , ಕಕ್ಕಬ್ಬೆ ಗ್ರಾ.ಪಂ ಮಾಜಿ ಅಧ್ಯಕ್ಷ ಕಲಿಯಂಡ ಸುನಂದ, ಡಾಕ್ಟರ್ ಮಂಜಣ್ಣ ಮೈಸೂರಿನ, ಕಕ್ಕಬ್ಬೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂಡಿರ ಜಗದೀಶ್ ,ಕುಂಜಿಲ ಪೈನರಿ ಜಮಾಯತ್ ಮಾಜಿ ಅಧ್ಯಕ್ಷ ಸೌಕತ್ ಆಲಿ, ಕಕ್ಕಬ್ಬೆ ವಿಎಸ್ಎಸ್ ಏನ್ ಉಪಾಧ್ಯಕ್ಷ ಬಡಕಡ ಸುರೇಶ್ ಬೆಳ್ಯಪ್ಪ, ರಾಷ್ಟ್ರೀಯ ಕ್ರೀಡಾಪಟು ಕೋಟೆರ ಮುದ್ದು ಮತ್ತಿತರರು ಪಾಲ್ಗೊಂಡಿದ್ದರು.
ಕೋಡಿಮಣಿಯಂಡ ತಮ್ಮುಣಿ ಬೋಪಯ್ಯ ಪಾರ್ಥಿಸಿ ಅಂಜಪರವಂಡ ಕುಶಾಲಪ್ಪ ಸ್ವಾಗತಿಸಿದರು.ಕುಲ್ಲೇಟಿರ ಅರುಣ್ ಬೇಬ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ರಾಜ್ಯಮಟ್ಟದ ಮುಕ್ತ ಸ್ಪರ್ಧೆಯಲ್ಲಿ 18 ವರ್ಷದ ಒಳಗಿನ ಒಂದು ವಿಭಾಗ ಹಾಗೂ 18 ವರ್ಷ ಮೇಲ್ಪಟ್ಟವರ ಮತ್ತೊಂದು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸ್ಪರ್ಧಿಗಳು ನಿಗದಿತ ಟಾರ್ಗೆಟ್ ಗೆ 25 ಮೀಟರ್ ಅಂತರದಲ್ಲಿ ಸ್ಪರ್ಧಿಗಳು ಗುರಿ ಇಟ್ಟರು.

ವಿಜೇತರರು : 18 ವರ್ಷದ ಒಳಗಿನ ವಿಭಾಗದಲ್ಲಿ : ವಿಘ್ನೇಶ್ ಪ್ರಥಮ ಸ್ಥಾನ ಪಡೆದಿದ್ದು, ರೂ.5 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ಪಡೆದುಕೊಂಡರು. ದ್ವಿತೀಯ ಸ್ಥಾನವನ್ನು ಕೋಡಿಮಣಿಯಂಡ ನಾಣಯ್ಯ ತಮ್ಮದಾಗಿಸಿಕೊಂಡಿದ್ದು, ರೂ.3 ಸಾವಿರ ನಗದು ಹಾಗೂ ಟ್ರೋಫಿ ನೀಡಲಾಯಿತು. ಅಲ್ಲರಂಡ ಧನುಷ್ ತೃತೀಯಸ್ಥಾನ ಪಡೆದುಕೊಂಡಿದ್ದು, ರೂ.2 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ಪಡೆದುಕೊಂಡರು.

18 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ : ತಮಿಳುನಾಡಿನ ಶೇಖರ್ ಪ್ರಥಮ ಬಹುಮಾನ ಪಡೆದುಕೊಂಡಿದ್ದು, ರೂ.5 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು. ಮರ0ದೋಡ ಗ್ರಾಮದ ಪೂವಣ್ಣ ದ್ವಿತೀಯ ಸ್ಥಾನ ಪಡೆದುಕೊಂಡು ರೂ.3 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ಪಡೆದುಕೊಂಡರು.
ತೃತೀಯ ಬಹುಮಾನ ಪಡೆದುಕೊಂಡ ಕಾನಂಡ ಸಜ್ಜನ್ ಪೂವಯ್ಯ ಅವರಿಗೆ ರೂ.2 ಸಾವಿರ ಹಾಗೂ ಆಕರ್ಷಕ ಟ್ರೋಫಿ ನೀಡಲಾಯಿತು.

ಸಮಾರೋಪ ಸಮಾರಂಭ : ಸಂಜೆ ಜರುಗಿದ ಸಮರೋಪ ಸಮಾರಂಭದಲ್ಲಿ ಸ್ಟೆಪ್ಸ್ ಸಂಸ್ಥೆಯ ಅಧ್ಯಕ್ಷ ಹಾಗೂ ಆಯೋಜಕ ಬೊಳಿಯಾಡಿರ ಸಂತು ಸುಬ್ರಮಣಿ ಅಧ್ಯಕ್ಷತೆ ವಹಿಸಿದ್ದುರು. ಈ ಕಾರ್ಯಕ್ರಮದಲ್ಲಿ ಟ್ರೋಫಿ ದಾನಿಗಳಾದ ಪೊನ್ನೋಳ್ತಂಡ ಅಶೋಕ್ ನಂಜಪ್ಪ, ಕಲ್ಯಾಟಂಡ ಸಚಿನ್ ಭೀಮಯ್ಯ, ಮೇಚಂಡ ಜಯ ಜೋಯಪ್ಪ , ಕರೋಟಿರ ಚರ್ಮನ, ಸೇರಿದಂತೆ ಇತರರು ಉಪಸ್ಥಿತರಿದ್ದು ವಿಜೇತರರಿಗೆ ಬಹುಮಾನ ಮತ್ತು ನಗದು ನೀಡಿ ಗೌರವಿಸಿದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.