ಮಡಿಕೇರಿಯಲ್ಲಿ ಬಿಜೆಪಿ ಪ್ರಗತಿ ರಥಯಾತ್ರೆ” ಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ
27/02/2023

ಮಡಿಕೇರಿ ಫೆ.27 : ಸರ್ಕಾರದ ಸಾಧನೆಗಳನ್ನು ರಾಜ್ಯದ ಜನತೆಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಸಂಚಲಿಸಲಿರುವ ” ಪ್ರಗತಿ ರಥಯಾತ್ರೆ” ಗೆ ಮಡಿಕೇರಿಯಲ್ಲಿ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು.
ಈ ಸಂದರ್ಭ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ, ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಸಭಾ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
