Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ರಾಜ್ಯಮಟ್ಟದ ಕಾರ್ಯಕ್ರಮ : ಸಹಕಾರ ಕ್ಷೇತ್ರಕ್ಕೆ ವಿಧಾನಪರಿಷತ್ ಸ್ಥಾನ ಮೀಸಲಿರಿಸಬೇಕು : ಎ.ಕೆ. ಮನು ಮುತ್ತಪ್ಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ರಾಜ್ಯಮಟ್ಟದ ಕಾರ್ಯಕ್ರಮ : ಸಹಕಾರ ಕ್ಷೇತ್ರಕ್ಕೆ ವಿಧಾನಪರಿಷತ್ ಸ್ಥಾನ ಮೀಸಲಿರಿಸಬೇಕು : ಎ.ಕೆ. ಮನು ಮುತ್ತಪ್ಪ

ಮಾರ್ಚ್ 2, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.2 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಆದಾಯ ತೆರಿಗೆ, ಜಿ.ಎಸ್.ಟಿ., ಮತ್ತು ಸಹಕಾರ ಸಂಘಗಳ ಚುನಾವಣೆ ಕುರಿತು ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮ ನಡೆಯಿತು.

ನಗರದ ಹೊಟೇಲ್ ಮಯೂರ ವ್ಯಾಲಿ ವ್ಯೂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಸಹಕಾರಿಗಳು ಹಾಗೂ ಪದ್ಮಶ್ರೀ ಪ್ರಶಸ್ತಿ ಭಾಜನರಾದ ರಾಣಿ ಮಾಚಯ್ಯ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಸಹಕಾರ ಕ್ಷೇತ್ರವು ಎಲ್ಲಾ ವರ್ಗದವರನ್ನು ಮುಕ್ತವಾಗಿ ಆಹ್ವಾನಿಸುತ್ತಿದ್ದು, ತಾನು ಸಹ ಕೋಟೆ ಮಹಿಳಾ ಸಹಕಾರ ಸಂಘ, ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಇನ್ನಿತರೆ ಸಹಕಾರ ಸಂಘದಲ್ಲಿ ಅಧ್ಯಕ್ಷೆಯಾಗಿ, ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಆ ಮೂಲಕ ಸಮಾಜ ಸೇವೆಯಲ್ಲಿ ಸಹ ತೊಡಗಿಸಿಕೊಳ್ಳಲು ಸಹಕಾರಿಯಾಯಿತೆಂದು ತಿಳಿಸಿದರು.
ತಾನು ಸಲ್ಲಿಸಿದ ಸೇವೆಗಾಗಿ ಭಾರತ ಸರ್ಕಾರವು ‘ಪದ್ಮಶ್ರೀ’ ಪ್ರಶಸ್ತಿಗೆ ಗುರುತಿಸಿರುವುದು ತನಗೆ ಹಾಗೂ ಪರೋಕ್ಷವಾಗಿ ಬೆಂಬಲವಾಗಿ ನಿಂತವರಿಗೂ, ವಿದ್ಯಾರ್ಥಿಗಳಿಗೂ, ಪೋಷಕರಿಗೆ ಎಲ್ಲರಿಗೂ ಸಂದ ಗೌರವವೆಂದು ಹೇಳಿದರು.
ಸಣ್ಣ ಜಿಲ್ಲೆಯಾದ ಕೊಡಗು ಜಿಲ್ಲೆಯನ್ನು ಸಹ ಇತ್ತೀಚೆಗೆ ಪ್ರಶಸ್ತಿಗೆ ಪರಿಗಣಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸುತ್ತಾ ತಾನು ಈ ನೆಲದ ಕಲೆ, ಸಂಸ್ಕೃತಿಯನ್ನು ಬೆಳೆಸುವಲ್ಲಿ ಅಲ್ಪ ಕಾಣಿಕೆಯನ್ನು ನೀಡಿದ್ದು ಜಿಲ್ಲೆಯ ಜನತೆ ಕಲೆ, ಸಂಸ್ಕೃತಿಯನ್ನು ಬೆಳೆಸಬೇಕಾಗಿ ತಿಳಿಸುತ್ತಾ, ಕಾರ್ಯಕ್ರಮದಲ್ಲಿ ಸನ್ಮಾನಿಸಿದಕ್ಕಾಗಿ ಯೂನಿಯನ್‍ನ ಅಧ್ಯಕ್ಷರು ಮತ್ತು ಸಮಸ್ತ ಆಡಳಿತ ಮಂಡಳಿ ಸದಸ್ಯರಿಗೆ ಧನ್ಯವಾದ ಸಲ್ಲಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಜಯಕರಶೆಟ್ಟಿ ಇಂದ್ರಾಳಿ ಮಾತನಾಡಿ, ಪ್ರತಿಯೊಂದು ಸಹಕಾರ ಸಂಘವು ಕಾಯ್ದೆ-ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾಯ್ದೆ-ಕಾನೂನಿನಲ್ಲಾಗುವ ಬದಲಾವಣೆಗಳ ಅರಿವು ಇರಬೇಕಾಗುತ್ತದೆ. ಅಂತೆಯೇ ಪ್ರತಿಯೊಂದು ಸಂಘವು ಇಂದು ಜಿ.ಎಸ್.ಟಿ. ಮತ್ತು ಆದಾಯ ತೆರಿಗೆಯ ವ್ಯಾಪ್ತಿಗೊಳಪಡುವುದರಿಂದ ಅವುಗಳ ಜ್ಞಾನ ಇರಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲೆಯ ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವುಗಳು ಇನ್ನಷ್ಟು ಪ್ರಗತಿ ಸಾಧಿಸಿ ದೇಶಕ್ಕೆ ಕೊಡುಗೆಯನ್ನು ನೀಡಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ, ಜಿಲ್ಲೆಯಲ್ಲಿ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸುತ್ತಿದ್ದು, ಸದರಿ ಕಾರ್ಯಕ್ರಮದಲ್ಲಿ ಜಿ.ಎಸ್.ಟಿ. ಮತ್ತು ಆದಾಯ ತೆರಿಗೆ ಕುರಿತು ಉಪನ್ಯಾಸ ನೀಡಲಾಗುತ್ತಿದೆ. ಈ ವಿಷಯಗಳು ನಮ್ಮ ದೈನಂದಿನ ವ್ಯವಹಾರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದು, ಸಂಘಗಳು ಕಾನೂನುಬದ್ಧವಾಗಿ ಪಾವತಿಸಬೇಕಾದಂತಹ ತೆರಿಗೆಗಳ ಕುರಿತು ಮಾಹಿತಿಯನ್ನು ಅರಿತುಕೊಳ್ಳುವಂತಾಗಬೇಕು.
ಆಡಳಿತ ಮಂಡಳಿ ಸದಸ್ಯರು ಸದರಿ ಎಲ್ಲಾ ಮಾಹಿತಿಗಳನ್ನು ಸೂಕ್ಷ್ಮವಾಗಿ ತಿಳಿದುಕೊಂಡಲ್ಲಿ ಸಂಘದ ಸುಲಲಿತ ಬೆಳವಣಿಗೆ ಸಾಧ್ಯವಾಗುತ್ತದೆ. ಅಂತೆಯೇ ಈ ಬಾರಿ ಅನೇಕ ಸಂಘಗಳಿಗೆ ಚುನಾವಣೆ ಇರುವುದರಿಂದ ಯಾವುದೇ ಗೊಂದಲಗಳಾಗದ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಹಕಾರಿಯಾಗಲೆಂದು ಇಂದು ಕಾರ್ಯಕ್ರಮವನ್ನು ಆಯೋಜಿಸಿದ್ದು ತರಬೇತಿ ಮತ್ತು ಶಿಕ್ಷಣ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕೆಂದು ಹೇಳಿದರು. ಅಲ್ಲದೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಸಹಕಾರ ಕ್ಷೇತ್ರದಿಂದಲೂ ಆಯ್ಕೆ ಮಾಡುವಂತೆ ಸ್ಥಾನಗಳನ್ನು ಮೀಸಲಿರಿಸಬೇಕೆಂದು ತಿಳಿಸಿದುದನ್ನು ಹಾಜರಿದ್ದ ಎಲ್ಲಾ ಪ್ರತಿನಿಧಿಗಳು ಒಪ್ಪಿ ಈ ಕುರಿತು ನಿರ್ಣಯ ಅಂಗೀಕರಿಸಲಾಯಿತು.
ಸನ್ನದು ಲೆಕ್ಕಿಗರಾದ ಎಸ್.ವಿ. ಶಂಭುಲಿಂಗಪ್ಪ ಆದಾಯ ತೆರಿಗೆ, ಜಿ.ಎಸ್.ಟಿ., ಮತ್ತು ಸಂಘದ ಆರ್ಥಿಕತೆ ಹಾಗೂ ಸಿಬ್ಬಂದಿ ವೇತನ ಸಮನ್ವಯತೆ ಬಗ್ಗೆ ಸುದೀರ್ಘ ಉಪನ್ಯಾಸ ನೀಡಿದರು.
ಸಹಕಾರ ಸಂಘಗಳ ಚುನಾವಣೆ ಕುರಿತು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಂ.ಈ. ಮೋಹನ್‍ರವರು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಪಿ.ಸಿ. ಮನು ರಾಮಚಂದ್ರ, ನಿರ್ದೇಶಕರಾದ ಎನ್.ಎ. ರವಿ ಬಸಪ್ಪ, ಪ್ರೇಮ ಸೋಮಯ್ಯ, ಕೆ.ಎಂ. ತಮ್ಮಯ್ಯ, ಪಿ.ಸಿ. ಅಚ್ಚಯ್ಯ, ಎನ್.ಎಂ. ಉಮೇಶ್ ಉತ್ತಪ್ಪ, ಪಿ.ವಿ. ಭರತ್, ಪಿ.ಬಿ.ಯತೀಶ್, ಕನ್ನಂಡ ಸಂಪತ್ ಉಪಸ್ಥಿತರಿದ್ದರು.
ಯೂನಿಯನ್ ನಿರ್ದೇಶಕ ಕೆ.ಎಸ್. ಗಣಪತಿ ಸ್ವಾಗತಿಸಿ, ವ್ಯವಸ್ಥಾಪಕಿ ಆರ್. ಮಂಜುಳ ಪ್ರಾರ್ಥಿಸಿ, ವಂದಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ ಕಾರ್ಯಕ್ರಮ ನಿರೂಪಿಸಿ, ಬಿ.ಸಿ. ಅರುಣ್ ಕುಮಾರ್ ಕಾರ್ಯಕ್ರಮ ನಿರ್ವಹಣೆಗೆ ಸಹಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.