Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಕೊಡಗು ಪ್ರಾಚೀನ ಕಾಲದಿಂದಲೂ ಬಹುಭಾಷಿಕ ನೆಲ : ಡಾ.ತೀತಿರ ರೇಖಾ ವಸಂತ್
ಇತ್ತೀಚಿನ ಸುದ್ದಿಗಳು

16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಕೊಡಗು ಪ್ರಾಚೀನ ಕಾಲದಿಂದಲೂ ಬಹುಭಾಷಿಕ ನೆಲ : ಡಾ.ತೀತಿರ ರೇಖಾ ವಸಂತ್

March 4, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಗೋಣಿಕೊಪ್ಪಲು ಮಾ.4 :   ‘ಕನ್ನಡ’ದ ಅರಿವನ್ನು ಹೊಂದದೆ ಈ ನಾಡಿನಲ್ಲಿ ಬದುಕಲು ಸಾಧ್ಯವಿಲ್ಲವೆಂಬ ವಾತಾವರಣವನ್ನು ನಾವು ಸೃಷ್ಟಿಸಿಕೊಳ್ಳಲು ಸಮರ್ಥರಾಗುವುದು ಅತ್ಯವಶ್ಯ, ಇವೆಲ್ಲವೂ ನಮ್ಮಿಂದಲೆ ಆರಂಭವಾಗಬೇಕೆಂಬ ಆಶಯವನ್ನು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಡಾ. ತೀತಿರ ರೇಖಾ ವಸಂತ್ ವ್ಯಕ್ತಪಡಿಸಿದರು.

ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ ಡಾ. ಐ.ಮಾ.ಮುತ್ತಣ್ಣನವರ ಭವ್ಯ ವೇದಿಕೆಯಲ್ಲಿ ಆಯೋಜಿತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೊರಗಿನ ಜನ ಕೊಡಗಿನಲ್ಲಿ ಬಂದಿರುವುದು ಕೊಡಗಿನವರು ಹೊರಭಾಗಗಳಲ್ಲಿ ಇರಬೇಕಾಗುವ ಜಾಗತಿಕ ಅನಿವಾರ್ಯತೆಗಳನ್ನು ನಾವು ತಪ್ಪಿಸಲಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಹೊರ ಊರಲ್ಲಿರುವವರು ಮಾತೃ ಸಂಸ್ಕೃತಿ ಯನ್ನು ಮರೆಯದಿರಬೇಕು. ಹೊರಗಿಂದ ಬಂದವರು ನಿಂತನೆಲದ, ಭಾಷೆ, ಸಂಸ್ಕೃತಿಯನ್ನು ಪ್ರೀತಿಸಬೇಕು, ಗೌರವಿಸಬೇಕೆಂದು ಅಭಿಪ್ರಾಯಿಸಿದರು.

ಇತರ ಭಾಷೆಗಳ ಉತ್ತ ಮಿಕೆಯನ್ನು ನಮ್ಮದಾಗಿಸಿಕೊಳ್ಳೋಣ-ನೆರೆಯವರ ತೋಟದ ಮಲ್ಲಿಗೆಯೂ ಕೂಡ ಪರಿಮಳವನ್ನೇ ಸೂಸುತ್ತದೆ ಎಂಬ ಭಾವದೊಂದಿಗೆ ಎಲ್ಲ ಭಾಷೆಗಳಲ್ಲೂ, ಸಾಹಿತ್ಯದಲ್ಲೂ ಇರುವ ಸೊಗಸನ್ನು, ಉತ್ತಮಿಕೆಯನ್ನು, ನಮ್ಮದಾಗಿಸಿಕೊಳ್ಳುವ ವಿಶಾಲ ಮನಸ್ಸು ನಮ್ಮೆಲ್ಲರದಾಗಬೇಕು. ನಮ್ಮ ಮಕ್ಕಳದ್ದಾಗಬೇಕು. ಈ ಎಲ್ಲಾ ಕಾರ್ಯಗಳನ್ನು ಮುಂಚೂಣಿಯಲ್ಲಿ ನಿಂತು ನಡೆಸುವ ಕಾಮನಬಿ್ಲು ‘ಸಾಹಿತ್ಯ ಪರಿಷತ್ತು’ ಆಗಬೇಕು. ಜೊತೆಗೆ ಎಲ್ಲಾ ಭಾಷೆ ಅಕಾಡೆಮಿಗಳು, ಸಂಘ, ಸಂಸ್ಥೆಗಳು, ಸರ್ಕಾರ, ಮುಖ್ಯವಾಗಿ ವಿಶ್ವವಿದ್ಯಾನಿಲಯಗಳು ಕೈ ಜೋಡಿಸಬೇಕೆಂದು ತಿಳಿಸಿದರು.

ಆಧುನಿಕೋತ್ತರ ಕೊಡಗಿನ ದೂರದರ್ಶತ್ವದ ಕುರಿತು ಉತ್ಸಾಹಿ ಯುವ ಸಮುದಾಯಕ್ಕೆ ಕಾರ್ಯಾಗಾರಗಳು, ಗುಂಪು ಚರ್ಚೆಗಳನ್ನು ನಡೆಸಬೇಕು. ಬಹಳಷ್ಟು ಪ್ರಕಟವಾಗುವ ಪುಸ್ತಕಗಳು ಸಾಹಿತ್ಯ ವಲಯದಲ್ಲಿ ಚರ್ಚೆಗೆ, ವಿಮರ್ಶೆಗೆ ಒಳಗಾಗಬೇಕು. ಸಂಪಾದನೆಗೆ ಬೇಕಾದ ಶಿಕ್ಷಣ ಮಾತ್ರ ಮುಖ್ಯವಲ.್ಲ ಬದುಕಿನ ಸವಾಲುಗಳು-ಸೋಲುಗಳನ್ನು ಎದುರಿಸ ನಿಲ್ಲುವ ಆತ್ಮವಿಶ್ವಾಸವನ್ನು ಕೊಡುವ ಸಾಹಿತ್ಯ ಕೂಡ ಮುಖ್ಯವೆಂದು ಅಭಿಪ್ರಾಯಿಸಿದರು.

ಬಹುಭಾಷೆಗಳು ಈ ನಾಡಿನ ಸಂಪತ್ತು. ಸಾಹಿತ್ಯದಲ್ಲಿ ದೊಡ್ಡವರು-ಸಣ್ಣವರೆಂದು ಗುರುತಿಸುವುದಕ್ಕಿಂತ ಇಲ್ಲಿ ಯಾರೂ ಅಮುಖ್ಯರಲ್ಲ ಎಂಬುದು ಸೂಕ್ತವೆಂದು ತಿಳಿಸಿದರು.

ಉದ್ಘಾಟನೆ-ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶಾಸಕರಾದ ಕೆ. ಜಿ. ಬೋಪಯ್ಯ ಜ್ಯೋತಿ ಬೆಳಗಿ ಉದ್ಘಾಟಿಸಿ ಮಾತನಾಡಿ, ಈ ನೆಲದ ಕನ್ನಡ ಭಾಷೆಯ ಬಗ್ಗೆ ಅಭಿಮಾನವನ್ನು ಪ್ರತಿಯೊಬ್ಬರು ಹೊಂದಬೇಕು. ಕನ್ನಡ ಭಾಷೆಯಲ್ಲಿ ಎಲ್ಲಾ ಕಚೇರಿಗಳಲ್ಲಿ ಕೆಲಸ ಕಾರ್ಯ ಇನ್ನು ಹೆಚ್ಚು ಹೆಚ್ಚಾಗಿ ನಡೆಯಬೇಕೆಂದು ತಿಳಿಸಿದರು.

ಕನ್ನಡ ಭಾಷೆಯ ಅಭಿವೃದ್ಧಿಗೆ ಪೂರಕವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿ ವರ್ಷ ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆಯುತ್ತಿದೆ.ಕನ್ನಡ ಪರವಾದ ಕಾರ್ಯಕ್ರಮಗಳು ಇನ್ನು ಹೆಚ್ಚಾಗಿ ನಡೆಯಬೇಕೆಂದು ಆಶಯ ವ್ಯಕ್ತಪಡಿಸಿದರು.

ಧ್ವಜ ಹಸ್ತಾಂತರ-ಕಾರ್ಯಕ್ರಮದಲ್ಲಿ ಹಿಂದಿನ ಜಿಲ್ಲಾ ಸಮ್ಮೇಳನದ ಅಧ್ಯಕ್ಷರಾದ ಗೀತಾ ಮಂದಣ್ಣ ಅವರು, ಇಂದಿನ ಸಮ್ಮೇಳನ ಅಧ್ಯಕ್ಷರಾದ ರೇಖಾ ವಸಂತ್ ರವರಿಗೆ ಕನ್ನಡ ಧ್ವಜವನ್ನು ಹಸ್ತಾಂತರಿಸಿದರು.

ಮೆರವಣಿಗೆ- ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಇಂದು ಬೆಳಗ್ಗೆ ಪಟ್ಟಣದ ಪಾಲಿಬೆಟ್ಟ ರಸ್ತೆಯ ವೃತ್ತದಲ್ಲಿ ಚಾಲನೆ ನೀಡಲಾಯಿತು. ಸಮ್ಮೇಳನಾಧ್ಯಕ್ಷರಾದ ತೀತಿರ ರೇಖಾ ವಸಂತ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೇಶವ ಕಾಮತ್, ತಾಲ್ಲೂಕು ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಅವರನ್ನು ಒಳಗೊಂಡ ಅಲಂಕೃತ ವಾಹನದ ಮೆರವಣಿಗೆ, ವಿವಿಧ ಕಲಾ ತಂಡಗಳೊಂದಿಗೆ ನಡೆದು ಗಮನ ಸೆಳೆಯಿತು.

ಸಮ್ಮೇಳನದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷರಾದ ಮನು ಬಳಿಗಾರ್, ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಪೊನ್ನಂಪೇಟೆ ತಾ. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಮೊದಲಾದವರು ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಸೋಮವಾರಪೇಟೆಯಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ : ಟ್ರೋಫಿ ಅನಾವರಣ
Next Article ಸಿಎನ್‌ಸಿಯಿಂದ ಮಹಿಳಾ ದಿನಾಚರಣೆಯಂದು ಕೊಡವ ಮಹಿಳಾ ಸಬಲೀಕರಣಕ್ಕಾಗಿ ಒತ್ತಾಯ

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.