Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕಾಡು ಹಣ್ಣುಗಳ ಸಂರಕ್ಷಣೆ ಮತ್ತು ಅಧ್ಯಯನಕ್ಕೆ ಕ್ರಮ : ನಾಪಂಡ ರವಿ ಕಾಳಪ್ಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾಡು ಹಣ್ಣುಗಳ ಸಂರಕ್ಷಣೆ ಮತ್ತು ಅಧ್ಯಯನಕ್ಕೆ ಕ್ರಮ : ನಾಪಂಡ ರವಿ ಕಾಳಪ್ಪ

ಮಾರ್ಚ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.6 : ಕಾಡು ಹಣ್ಣುಗಳು ಅಳಿವಿನಂಚಿಗೆ ಬಂದಿರುವುದು ಬಹಳ ಆತಂಕಕಾರಿ ಬೆಳವಣಿಗೆ. ಕೊಡಗಿನಲ್ಲಿ ಮರೆಯಾಗುತ್ತಿರುವ ಅಪರೂಪದ ಕಾಡುಹಣ್ಣುಗಳನ್ನು ಬೆಳೆದು ಸಂರಕ್ಷಿಸಲು ಆಸಕ್ತಿ ವಹಿಸಬೇಕಾಗಿ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಎನ್.ಎಂ. ರವಿ ಕಾಳಪ್ಪ ಮನವಿ ಮಾಡಿದರು.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೆಲವು ವರ್ಷಗಳ ಹಿಂದೆ ಕೊಡಗಿನ ಕಾಡು ಮೇಡುಗಳ ಬಗ್ಗೆ ಜನರಿಗೆ ವಿಶೇಷ ಸೆಳೆತ, ಆಸಕ್ತಿ ಇತ್ತು. ಬೇಸಿಗೆಕಾಲ ಮಳೆಗಾಲ, ಚಳಿಗಾಲ ಹೀಗೆ ವಿವಿಧ ಸಮಯದಲ್ಲಿ ಕಾಡಿನತ್ತ ನಾವು ಹೆಜ್ಜೆ ಹಾಕುತ್ತಿದ್ದೆವು. ಕಾಡಿನ ಪರಿಸರ ಮನಸ್ಸನ್ನು ಉಲ್ಲಸಿತವಾಗಿಸುವ ಜತೆಗೆ ಅಲ್ಲಿ ಸಿಗುತ್ತಿದ್ದ ಬಗೆಬಗೆಯ, ರುಚಿ ರುಚಿಯಾದ ಹಣ್ಣುಗಳು ಕಾಡಿನತ್ತ ನಾವು ಹೆಚ್ಚಾಗಿ ಹೋಗುವುದಕ್ಕೆ ಮುಖ್ಯ ಕಾರಣವಾಗಿತ್ತು. ನಮ್ಮ ಆರೋಗ್ಯ ವೃದ್ಧಿಗೂ ಕಾಡುಹಣ್ಣುಗಳು ಬಹು ದೊಡ್ಡ ಕೊಡುಗೆ ನೀಡುತ್ತಿದ್ದವು. ಆದರೆ ಬದಲಾಗುತ್ತಿರುವ ದಿನಮಾನದಲ್ಲಿ ಕಾಡಿನೆಡೆಗೆ ಹೋಗುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಜತೆಗೆ ಕಾಡು ಹಣ್ಣುಗಳ ಬಗೆಗಿದ್ದ ಆಸಕ್ತಿ ಇಂದಿನ ತಲೆಮಾರಿನಲ್ಲಿ ಕಾಣುತ್ತಿಲ್ಲ. ವಿಪರ್ಯಾಸ ಎಂದರೆ ಕೊಡಗಿನಲ್ಲಿ ಸಿಗುತ್ತಿದ್ದ ಅದೇಷ್ಟೋ ಬಗೆಯ ಕಾಡು ಹಣ್ಣುಗಳು ಇಂದು ಅಳಿವಿನಂಚಿಗೆ ಬಂದು ನಿಂತಿದೆ. ಇದಕ್ಕೆ ಕಾರಣಗಳು ಅನೇಕ.
ಅವುಗಳನ್ನು ಸಂರಕ್ಷಣೆ ಮಾಡುವ ಜತೆಗೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆಸಿ ಪೋಷಿಸುವ ಅನಿವಾರ್ಯತೆ ಬಂದೊದಗಿದೆ. ಅಂಥವುಗಳನ್ನು ಗುರುತಿಸಿ, ಅವುಗಳ ಬಗ್ಗೆ ಅಧ್ಯಯನ ಮಾಡಲು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಮುಂದಾಗಿದೆ. ಅದರ ಭಾಗವಾಗಿ ಪೊನ್ನಂಪೇಟೆ ಅರಣ್ಯ ಕಾಲೇಜಿನ ಪ್ರಾಧ್ಯಾಪಕ ಡಾ. ಸತೀಶ್ ಅವರಿಗೆ ಜವಾಬ್ದಾರಿ ವಹಿಸಲಾಗಿದ್ದು, ಅವರು ಕಾರ್ಯವನ್ನು ಕೈಗೆತ್ತಿಕೊಂಡು ಈಗಾಗಲೆ ಅಧ್ಯಯನ ನಡೆಸಿದ್ದಾರೆ. ಇವರಿಗೆ ಕರ್ನಾಟಕ ಜೀವ ವೈವಿಧ್ಯ ಮಂಡಳಿಯಿಂದ ಪೋತ್ಸಾಹ ನೀಡಿದ್ದು, ಅನೇಕ ಬಗೆಯ ಕಾಡು ಹಣ್ಣುಗಳನ್ನು ಬೆಳೆಯಲು ಇವರು ಸಸಿ ಮಡಿಗಳನ್ನು ಸಹ ಮಾಡಿ, ರೈತರಿಗೆ ವಿತರಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ. ಹಾಗೂ ಈ ಹಣ್ಣಿನಲ್ಲಿರುವ ಗುಣಲಕ್ಷಣಗಳು, ಔಷಧೀಯ ಗುಣಗಳು ಹಾಗೂ ಅವುಗಳಲ್ಲಿರುವ ಪೌಷ್ಠಿಕಾಂಶಗಳ ಬಗ್ಗೆಯೂ ಅಧ್ಯಯನ ಮಾಡಿ ಪುಸ್ತಕ ರೂಪದಲ್ಲಿ ಪ್ರಕಟಿಸಿದ್ದಾರೆ. ಇವರು ಮಾಡಿರುವ ಅಧ್ಯಯನದ ಲಾಭವನ್ನು ಜಿಲ್ಲೆಯ ರೈತರು ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಓಂಕಾರೇಶ್ವರ ಜೀವವೈವಿಧ್ಯ ತಾಣ : : ಕೊಡಗು ಜಿಲ್ಲೆಯ ಉದ್ದಗಲಕ್ಕೂ ಸಾವಿರಾರು ಜೀವವೈವಿಧ್ಯ ಪ್ರದೇಶಗಳಿವೆ. ಅವುಗಳಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿ ನಗರಕ್ಕೆ ಕುಡಿಯುವ ನೀರು ಸರಬರಾಜಿನ ಮೂಲವಾಗಿರುವ ಕೆ.ನಿಡುಗಣೆ ಗ್ರಾಮದ ಕೂಟುಪೊಳೆ ಜಲ ಸಂಗ್ರಹಾಗಾರದ ಮೆಲ್ಭಾಗ ಇರುವ ಅರಣ್ಯ ಪ್ರದೇಶ ಕೂಡಾ ಒಂದು. ಇಲ್ಲಿನ ಸರ್ವೆ ನಂಬರ್ 9/1ರ 27.08 ಎಕ್ರೆ ಪ್ರದೇಶದಲ್ಲಿ ಉತ್ತಮ ಅರಣ್ಯ, ಸಾಕಷ್ಟು ಬಗೆಯ ಅಪರೂಪದ ಜೀವ ವೈವಿಧ್ಯ, ಜಲಚರಗಳು, ಅಮೂಲ್ಯ ಗಿಡಮೂಲಿಕೆಗಳಿವೆ. ಈ ಪರಿಸರಕ್ಕೆ ಯಾವುದೇ ರೀತಿಯಲ್ಲಿ ಹಾನಿಯಾಗದಂತೆ ನೋಡಿಕೊಂಡು ರಕ್ಷಣೆ ಮಾಡುವ ಜತೆಗೆ ಸಂರಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ಸಹಕಾರದೊಂದಿಗೆ ಕರ್ನಾಟಕ ಜೀವವೈವಿಧ್ಯ ಮಂಡಳಿ ಕಾರ್ಯಕ್ರಮ ರೂಪಿಸಲು ಮುಂದಾಗಿದೆ.
ಈ ವಿಚಾರವನ್ನು ಮಂಡಳಿಯ ಸಭೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಅದರ ಫಲಿತಾಂಶವಾಗಿ ಈ ಸ್ಥಳವನ್ನು ‘ಓಂಕಾರೇಶ್ವರ ಜೀವವೈವಿಧ್ಯ ರಕ್ಷಿತ ತಾಣ’ ಎಂಬುದಾಗಿ ಘೋಷಿಸಲು ಕ್ರಮ ಕೈಗೊಳ್ಳಲು ಸಭೆ ತೀರ್ಮಾನಿಸಿದೆ.
ಸದ್ಯ ಮಡಿಕೇರಿ ನಗರ ತನ್ನ ವ್ಯಾಪ್ತಿಯನ್ನು ವರ್ಷದಿಂದ ವರ್ಷಕ್ಕೆ ವಿಸ್ತರಿಸಿಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ನಗರೀಕರಣ ಮತ್ತಷ್ಟು ವಿಸ್ತರಣೆಯಾದಾಗ ಈ ಅತ್ಯಮೂಲ್ಯ ಪ್ರದೇಶಕ್ಕೆ ಯಾವುದೇ ರೀತಿಯ ಧಕ್ಕೆಯಾಗಬಾರದೆಂಬ ದೂರಾಲೋಚನೆಯನ್ನೂ ಮಂಡಳಿ ಹೊಂದಿದೆ. ಹೀಗಾಗಿ ಈಗಿನಿಂದಲೇ ಇದಕ್ಕೆ ಬೇಕಾದ ಚಿಂತನೆಯನ್ನು ಮಂಡಳಿ ಹರಿಸಿದೆ. ಶಾಸಕರ ಮಾರ್ಗದರ್ಶನದೊಂದಿಗೆ ಕೊಡಗು ಜಿಲ್ಲಾಡಳಿತದ ಜತೆ ಸೇರಿಕೊಂಡು ಮುಂದಿನ ದಿನದಲ್ಲಿ ವಿಶೇಷ ಜೀವ ವೈವಿಧ್ಯ ಸಂಪತ್ತಿನ ಆಗರವಾಗಿರುವ ಈ ಜಾಗದ ಸಂರಕ್ಷಣೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.