Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮೂಲ ಸಂಸ್ಕೃತಿ ಮತ್ತು ಕನ್ನಡ ಸಂಸ್ಕೃತಿ ಉಳಿಸಿ ಬೆಳೆಸಿ : ಜಗದೀಶ್ ಹಿರೇಮನಿ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂಲ ಸಂಸ್ಕೃತಿ ಮತ್ತು ಕನ್ನಡ ಸಂಸ್ಕೃತಿ ಉಳಿಸಿ ಬೆಳೆಸಿ : ಜಗದೀಶ್ ಹಿರೇಮನಿ ಕರೆ

ಮಾರ್ಚ್ 7, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.7 : ‘ರಾಷ್ಟ್ರದ ಮೂಲ ಸಂಸ್ಕೃತಿಯ ಬೇರು, ಭವ್ಯ ಭಾರತದ ತೇರು’ ಎಂಬುದನ್ನು ಯಾರೂ ಸಹ ಮರೆಯಬಾರದು ಎಂದು ಮೂಲ ಸಂಸ್ಕೃತಿ ಮತ್ತು ಕನ್ನಡ ಸಂಸ್ಕೃತಿ ರಾಜ್ಯ ಸಂಚಾಲಕ ಜಗದೀಶ್ ಹಿರೇಮನಿ ಪ್ರತಿಪಾದಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ‘ಮೂಲ ಸಂಸ್ಕೃತಿ -ಕನ್ನಡ ಸಂಸ್ಕೃತಿ ’ ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಕಲೆಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಸ್ತುತ ಕಾಲದಲ್ಲಿ ಕಲಾ ಸಾಹಿತ್ಯದಲ್ಲಿ ಭಾವನಾತ್ಮಕತೆ ಕಡಿಮೆಯಾಗುತ್ತದೆ. ಇದರಿಂದ ಮೂಲ ಸಂಸ್ಕೃತಿ ಉಳಿಯಲು ಸಾಧ್ಯವೇ ಎಂಬುದನ್ನು ಚಿಂತಿಸಬೇಕಿದೆ. ಆ ನಿಟ್ಟಿನಲ್ಲಿ ವಿವಿಧ ಕಲಾಪ್ರಕಾರಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮೂಲ ಸಂಸ್ಕೃತಿ -ಕನ್ನಡ ಸಂಸ್ಕೃತಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
ಪ್ರತಿಯೊಬ್ಬರೂ ಒಂದಲ್ಲ ಒಂದು ಜಾನಪದ ಕಲೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸನ್ನು ಹಗುರ ಮಾಡಿಕೊಳ್ಳಬಹುದು. ಇದರಿಂದ ಉತ್ತಮ ಆರೋಗ್ಯ ಪಡೆಯಬಹುದು. ಸದಾ ಧನಾತ್ಮಕವಾಗಿ ಚಿಂತಿಸಬಹುದು ಎಂದು ಜಗದೀಶ್ ಹಿರೇಮನಿ ಅವರು ಹೇಳಿದರು.
ಜಾನಪದ ಕಲಾ ಪ್ರಕಾರಗಳಲ್ಲಿ ಸಮಾಜದ ಬದುಕನ್ನು ಬದಲಿಸುವ ಶಕ್ತಿ ಇದೆ. ಮೂಲ ಸಂಸ್ಕೃತಿ -ಕನ್ನಡ ಸಂಸ್ಕೃತಿ ಹೆಸರಿನಲ್ಲಿ ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 31 ಜಿಲ್ಲೆಗಳಲ್ಲಿ ತಲಾ 5 ಕಲಾತಂಡಗಳಿಗೆ ಅವಕಾಶ ಮಾಡಿ, 20 ದಿನಗಳ ಕಾಲ ತರಬೇತಿ ಆಯೋಜಿಸಲಾಗಿತ್ತು ಎಂದು ಜಗದೀಶ್ ಹಿರೇಮನಿ ಅವರು ತಿಳಿಸಿದರು.
31 ಜಿಲ್ಲೆಗಳ 155 ಕಲಾತಂಡಗಳು ತಮ್ಮ ತಮ್ಮ ಕಲಾಪ್ರಕಾರಗಳ ತರಬೇತಿ ಪಡೆದು ನಶಿಸಿ ಹೋಗುತ್ತಿರುವ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸಲಾಗಿದೆ. ಆ ನಿಟ್ಟಿನಲ್ಲಿ ರಾಜ್ಯದ 155 ಕಲಾತಂಡಗಳಲ್ಲಿ 31 ಜಿಲ್ಲೆಯ ತಲಾ 2 ತಂಡಗಳು ಇದೇ ಮಾರ್ಚ್, 9 ಮತ್ತು 10 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ ಎಂದು ಮೂಲ ಸಂಸ್ಕೃತಿ ಮತ್ತು ಕನ್ನಡ ಸಂಸ್ಕೃತಿ ರಾಜ್ಯ ಸಂಚಾಲಕರು ವಿವರಿಸಿದರು.
ಮೂಲ ಸಂಸ್ಕೃತಿ -ಕನ್ನಡ ಸಂಸ್ಕೃತಿ ಯನ್ನು 180 ಶಿಕ್ಷಕರು ತರಬೇತಿ ನೀಡಿದ್ದು, 1800 ಹೊಸ ವಿದ್ಯಾರ್ಥಿಗಳು ನಶಿಸಿ ಹೋಗುತ್ತಿರುವ ಕಲಾ ತರಬೇತಿಯ ಶಿಕ್ಷಣ ಪಡೆದಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರ್, ಸೇರಿದಂತೆ ವಿವಿಧ ಪದವಿ ವಿದ್ಯಾರ್ಥಿಗಳು ಜಾನಪದ ಕಲಾ ತರಬೇತಿ ಪಡೆದಿದ್ದಾರೆ ಎಂದು ಜಗದೀಶ್ ಹಿರೇಮನಿ ಅವರು ಹೇಳಿದರು.
ಮೂಲ ಜಾನಪದ ಸಂಸ್ಕೃತಿಯು ಪ್ರದೇಶದಿಂದ ಪ್ರದೇಶಕ್ಕೆ ಬೇರೆ ಬೇರೆ ಆಗಿರುವುದರಿಂದ ಜಾನಪದ ಕಲೆ ಎಲ್ಲರನ್ನೂ ಒಟ್ಟುಗೂಡಿಸುತ್ತದೆ ಎಂಬುದನ್ನು ಮರೆಯಬಾರದು ಎಂದು ಜಗದೀಶ್ ಹಿರೇಮನಿ ಅವರು ಪ್ರತಿಪಾದಿಸಿದರು.
ಮೂಲ ಸಂಸ್ಕೃತಿ ಮತ್ತು ಕನ್ನಡ ಸಂಸ್ಕೃತಿ ಪ್ರಾದೇಶಿಕ ಸಂಚಾಲಕರಾದ ಎಂ.ಎಸ್.ಪರಮಾನಂದ ಅವರು ಮಾತನಾಡಿ ಕಲೆಗಳಲ್ಲಿ ಲಲಿತ ಕಲೆ, ಜಾನಪದ ಕಲೆ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಲಲಿತ ಕಲೆಯಲ್ಲಿ ಭರತನಾಟ್ಯ ಒಳಗೊಂಡರೆ. ಜಾನಪದದಲ್ಲಿ ಸಾಂಪ್ರದಾಯಿಕ ಕಲಾಪ್ರಕಾರಗಳನ್ನು ಒಳಗೊಂಡಿದೆ ಎಂದರು.
ಯಾವುದೇ ಸಾಂಪ್ರದಾಯಿಕ ಕಲೆಗಳನ್ನು ನೋಡಿ ಕಲಿಯುವುದು ಮೂಲ ಸಂಸ್ಕೃತಿಯಾಗಿದೆ. ಇದಕ್ಕೆ ಶುಲ್ಕ ನೀಡಿ ಕಲಿಯುವ ಅಗತ್ಯವಿಲ್ಲ ಎಂದು ಅವರು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಮೂಲ ಸಂಸ್ಕೃತಿ ಕಡಿಮೆಯಾಗಿ ಮೊಬೈಲ್‍ಗಳಿಗೆ ದಾಸರಾಗುತ್ತಿದ್ದೇವೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಸಾಂಪ್ರದಾಯಿಕ ಕಲೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಲಿದೆ ಎಂದರು.
‘ಸಾಂಪ್ರದಾಯಿಕ ಕಲೆಗಳನ್ನು ಪ್ರತಿಯೊಬ್ಬರೂ ಕಲಿಯುವಂತಾಗಬೇಕು. ಕಲಿತು ಉಳಿಸುವಂತಾಗಬೇಕು. ಕಲಾಪ್ರಕಾರಗಳಿಗೆ ಯಾರೂ ಸಹ ಬೇಲಿ ಹಾಕಬಾರದು. ಸಮುದಾಯಗಳ ಸಮಾನತೆ, ಸಾಮರಸ್ಯ, ಭ್ರಾತೃತ್ವ ಅತೀ ಮುಖ್ಯ ಎಂದು ಪರಮಾನಂದ ಅವರು ಒತ್ತಿ ಹೇಳಿದರು.
ಮೂಲ ಸಂಸ್ಕೃತಿ-ಕನ್ನಡ ಸಂಸ್ಕೃತಿಯನ್ನು ಉಳಿಸದಿದ್ದರೆ, ಮುಂದಿನ ದಿನಗಳಲ್ಲಿ ಟಿವಿ ಅಥವಾ ಮೊಬೈಲ್‍ನಲ್ಲಿ ನೋಡುವ ಕಾಲ ಸನ್ನಿಹಿತವಾಗಲಿದೆ ಎಂದು ಎಚ್ಚರಿಸಿದರು.
ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ನಶಿಸಿ ಹೋಗುತ್ತಿರುವ ಕಲೆಗಳನ್ನು ಸಂರಕ್ಷಣೆ ಮಾಡಬೇಕಿದೆ. ಪ್ರತಿಯೊಬ್ಬರೂ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸುವಂತಾಗಬೇಕು. ಜೊತೆಗೆ ಕಲಿಸುವಂತಾಗಬೇಕು ಎಂದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಎಲ್ಲಾ ಜನಾಂಗಗಳಲ್ಲಿಯೂ ಒಂದಲ್ಲ ಒಂದು ಕಲೆಗಳು ಇರುತ್ತವೆ. ಅದನ್ನು ಉಳಿಸಿಕೊಂಡು ಹೋಗಬೇಕು. ಜಾನಪದ ಕಲೆ, ಸಂಸ್ಕೃತಿಯನ್ನು ಅನಾದಿ ಕಾಲದಿಂದಲೂ ಉಳಿಸಿಕೊಂಡು ಬಂದಿರುವ ಮೂಲ ಸಂಸ್ಕೃತಿಯನ್ನು ಈಗಲೂ ಉಳಿಸುತ್ತಿರುವವರನ್ನು ಪ್ರೋತ್ಸಾಹಿಸಬೇಕು ಎಂದರು.
ಮೂಲ ಸಂಸ್ಕೃತಿ ಕಲಾಪ್ರಕಾರಗಳನ್ನು ಉಳಿಸಬೇಕು. ಆದರೆ ಆಧುನಿಕ ಸ್ಪರ್ಶ ನೀಡುವುದು ಬೇಡ. ಉರುಟ್ಟಿಕೋಟ್, ಉಮ್ಮತ್ತಾಟ್ ಕೊಡಗಿನ ಸಾಂಪ್ರದಾಯಿಕ ಕಲೆಗಳು ಸದಾ ಜನಮನ ಸೆಳೆಯುತ್ತವೆ ಎಂದು ನಗರಸಭೆ ಅಧ್ಯಕ್ಷರು ನುಡಿದರು.
ಮೂಲ ಸಂಸ್ಕೃತಿ -ಕನ್ನಡ ಸಂಸ್ಕೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಲಾವಿದರಾದ ಕುಡಿಯರ ಶಾರದ, ನಾಣಚ್ಚಿಯ ರಮೇಶ್, ಈ.ರಾಜು, ಗಣೇಶ್, ಕುಟ್ಟಪ್ಪ, ಉಮೇಶ್, ಗಿರೀಶ್ ಇತರರಿಗೆ ಶಾಲೂ, ಫಲ-ತಾಂಬೂಲ ನೀಡಿ ಸನ್ಮಾನಿಸಲಾಯಿತು.
ಕುಡಿಯರ ಶಾರದ ಮತ್ತು ತಂಡದವರಿಂದ ದುಡಿ ಹಾಡು, ರಮೇಶ್ ಮತ್ತು ತಂಡದವರಿಂದ ಗಿರಿಜನ ಹಾಡು ಹಾಗೂ ನೃತ್ಯ ಪ್ರದರ್ಶನ, ಈ.ರಾಜು ಮತ್ತು ತಂಡದವರಿಂದ ಜಾನಪದ ಹಾಡು, ಗಣೇಶ್ ಮತ್ತು ತಂಡದವರಿಂದ ಪೌರಾಣಿಕ ನಾಟಕ ಪ್ರದರ್ಶನ, ಗಿರೀಶ್ ಮತ್ತು ತಂಡದವರಿಂದ ಗೀಗೀ ಪದ ಹಾಗೂ ಲಾವಣಿ ಹಾಡು ಜನಮನ ಸೆಳೆಯಿತು.
ನಗರಸಭಾ ಸದಸ್ಯರಾದ ಸತೀಶ್, ಮೂಲ ಸಂಸ್ಕೃತಿ -ಕನ್ನಡ ಸಂಸ್ಕೃತಿ ಜಿಲ್ಲಾ ಸಂಚಾಲಕರಾದ ಜಿ.ಡಿ.ದುಶ್ಯಂತ್ ಕುಮಾರ್, ಸುಶೀಲ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಮೂಲ ಸಂಸ್ಕೃತಿ-ಕನ್ನಡ ಸಂಸ್ಕೃತಿಯ ಮಹೇಶ್, ಪ್ರತಾಪ್ ಶಾಂತಳ್ಳಿ, ಜಾನಪದ ಪರಿಷತ್ ಸದಸ್ಯರಾದ ರೇವತಿ ರಮೇಶ್, ಕವಿತಾ ರಾಮ್, ಮೀನಾಕ್ಷಿ, ಇತರರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ತು ಅಧ್ಯಕ್ಷರಾದ ಅನಿಲ್ ಎಚ್.ಟಿ. ನಿರೂಪಿಸಿದರು. ಈ. ರಾಜು ಮತ್ತು ತಂಡದವರು ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.