Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮಳೆಹಾನಿ ಸಂತ್ರಸ್ತರಿಗಾಗಿ ಪೀಪಲ್ಸ್ ಫೌಂಡೇಷನ್ ನಿಂದ 25 ಮನೆಗಳ ನಿರ್ಮಾಣ : ಮಾ.13 ರಂದು ಹಸ್ತಾಂತರ
ಇತ್ತೀಚಿನ ಸುದ್ದಿಗಳು

ಮಳೆಹಾನಿ ಸಂತ್ರಸ್ತರಿಗಾಗಿ ಪೀಪಲ್ಸ್ ಫೌಂಡೇಷನ್ ನಿಂದ 25 ಮನೆಗಳ ನಿರ್ಮಾಣ : ಮಾ.13 ರಂದು ಹಸ್ತಾಂತರ

March 10, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.10 : ಮೂರು ವರ್ಷಗಳ ಹಿಂದೆ ಕೊಡಗಿನಲ್ಲಿ ಸಂಭವಿಸಿದ ಮಹಾಮಳೆ ಹಾನಿಯಿಂದ ಮನೆಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ನೆಲ್ಯಹುದಿಕೇರಿಯ ನಲ್ವತ್ತುಎಕರೆ ಗ್ರಾಮದಲ್ಲಿ ಪೀಪಲ್ಸ್ ಫೌಂಡೇಷನ್ ವತಿಯಿಂದ 25 ಮನೆಗಳನ್ನು ನಿರ್ಮಿಸಲಾಗಿದೆ. ಇದರ ಹಸ್ತಾಂತರ ಕಾರ್ಯಕ್ರಮ ಮಾ.13 ರಂದು ನಡೆಯಲಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್‍ನ ವಲಯ ಸಂಚಾಲಕರು ಹಾಗೂ ಯೋಜನೆಯ ವಲಯ ಮೇಲ್ವಿಚಾರಕರಾದ ಯು. ಅಬ್ದುಸ್ಸಲಾಮ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮಾಅತೆ ಇಸ್ಲಾಮಿ ಹಿಂದ್‍ನ ಅಧೀನ ಸಂಸ್ಥೆ ಪೀಪಲ್ಸ್ ಫೌಂಡೇಶನ್ ಮೂಲಕ ಸುಮಾರು 6 ಲಕ್ಷ ವೆಚ್ಚದ 25 ಮನೆಗಳ ‘ಪೀಪಲ್ಸ್ ವಿಲೇಜ್ ಕೊಡಗು’ವನ್ನು ಎಂ.ಕೆ. ಅಶ್ರಫ್ ಅವರ ಉಸ್ತುವಾರಿಯಲ್ಲಿ ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ. ಪ್ರತಿ ಮನೆ 500 ಚದರ ಅಡಿ ವಿಸ್ತೀರ್ಣದ್ದಾಗಿದ್ದು, 3.50 ಸೆಂಟ್ಸ್ ಜಾಗವನ್ನು ಹೊಂದಿದೆ. ಈ ಮನೆಗಳನ್ನು ಜಾತಿ ಮತ ಭೇದವಿಲ್ಲದೆ ಎಲ್ಲಾ ಸಮುದಾಯಕ್ಕೆ ಸೇರಿದ ಸಂತ್ರಸ್ತ ಕುಟುಂಬಗಳಿಗೆ ವಿತರಿಸಲಾಗುವುದೆಂದು ಹೇಳಿದರು.
ನೆರೆ ಹಾವಳಿಯಿಂದ ಜಿಲ್ಲೆಯಲ್ಲಿ ಸಂಕಷ್ಟಗಳು ತಲೆದೋರಿ ಮನೆಗಳನ್ನು ಕಳೆದುಕೊಂಡು ಹಲವರು ನಿರಾಶ್ರಿತರಾದ ಸಂದರ್ಭ ಜಮಾಅತೆ ಇಸ್ಲಾಮೀ ಹಿಂದ್ ಕೊಡಗು ಜಿಲ್ಲೆ, ಹೆಚ್.ಆರ್.ಎಸ್ ಕರ್ನಾಟಕ ಹಾಗೂ ಕೊಡಗು ರಿಲೀಫ್ ಸೆಲ್ ಸಂಯುಕ್ತವಾಗಿ ವಸತಿ ಯೋಜನೆ ರೂಪಿಸಿದವು. ಕೇರಳ ರಾಜ್ಯದ ಉದ್ಯಮಿ ಅಬ್ದುಲ್ ಅವರಿಗೆ ಈ ವಿಚಾರ ತಿಳಿಸಿದ ಸಂದರ್ಭ ಅವರು, ನಲ್ವತ್ತೇಕರೆ ಪ್ರದೇಶದಲ್ಲಿ ಎರಡು ಏಕರೆ ಜಮೀನನ್ನು ಮನೆ ನಿರ್ಮಾಣಕ್ಕಾಗಿ ಖರೀದಿಸಿ, ಸಂಸ್ಥೆಗೆ ಉದಾರವಾಗಿ ನೀಡಿದರು ಎಂದು ಅಬ್ದುಸ್ಸಲಾಮ್ ಸ್ಮರಿಸಿದರು.
ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸಿದ ಬಳಿಕವೂ ಉಳಿದಿರುವ ಜಾಗದಲ್ಲಿ ಸಮುದಾಯ ಭವನ, ಅಂಗನವಾಡಿ, ನ್ಯಾಯ ಬೆಲೆ ಅಂಗಡಿಗಳನ್ನು ನಿರ್ಮಿಸಿ ಅನುಕೂಲ ಕಲ್ಪಿಸಲು ಸಂಸ್ಥೆ ನಿರ್ಧರಿಸಿದೆ ಎಂದರು.
::: ಮನೆಗಳ ಹಸ್ತಾಂತರ :::
ಮಾರ್ಚ್ 13ರಂದು ಸಂಜೆ 4.30 ಗಂಟೆಗೆ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ಕೇರಳದ ಪೀಪಲ್ಸ್ ಫೌಂಡೇಶನ್ ಅಧ್ಯಕ್ಷ ಎಂ.ಕೆ.ಮುಹಮ್ಮದಲಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. 25 ಮನೆಗಳನ್ನು ಒಳಗೊಂಡಿರುವ “ಪೀಪಲ್ಸ್ ವಿಲೇಜ್’ನ್ನು ಸಮಾಜದ ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುತ್ತದೆ ಎಂದು ತಿಳಿಸಿದರು.
ಸಭಾ ಕಾರ್ಯಕ್ರಮವನ್ನು ಅರಮೇರಿ ಕಳಂಚೇರಿ ಮಠದ ಶ್ರೀಶಾಂತಮಲ್ಲಿಕಾರ್ಜುನ ಸ್ವಾಮಿ ಉದ್ಘಾಟಿಸಲಿದ್ದಾರೆ. ಶಾಸಕರುಗಳಾದ ಎಂ.ಪಿ.ಅಪ್ಪಚ್ಚುರಂಜನ್, ಯು.ಟಿ.ಖಾದರ್, ಮಾಜಿ ಅಡ್ವೋಕೇಟ್ ಜನರಲ್ ಹಾಗೂ ಸಮಾಜ ಸೇವಕ ಎ.ಎಸ್.ಪೊನ್ನಣ್ಣ, ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ.ಬೆಳ್ಗಾಮೀ ಮುಹಮ್ಮದ್ ಸಾದ್, ಕೇರಳ ರಾಜ್ಯಾಧ್ಯಕ್ಷ ಎಂ.ಐ.ಅಬ್ದುಲ್ ಅಝೀಜ್, ಉಪಾಧ್ಯಕ್ಷ ಪಿ.ಮುಜೀಬುರ್ರಹ್ಮಾನ್, ಕರ್ನಾಟಕ ರಾಜ್ಯ ಕಾರ್ಯದರ್ಶಿಗಳಾದ ಎಂ.ಹೆಚ್.ಮುಹಮ್ಮದ್ ಕುಂಞ, ಅಕ್ಬರ್ ಅಲಿ ಉಡುಪಿ ಮುಂತಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
::: ಸಂಸ್ಥೆಯ ಸೇವೆ :::
2019ರ ಮಳೆಗಾಲದಲ್ಲಿ ಸಂಭವಿಸಿದ ನೆರೆ ಹಾವಳಿಯಿಂದ ಸಿದ್ದಾಪುರ ಸಮೀಪದ ಕರಡಿಗೋಡು-ಹೊಳೆಕರೆ ಪೈಸಾರಿ, ಬೆಟ್ಟದಕಾಡು, ಬರಡಿ, ನೆಲ್ಲಿಹುದಿಕೇರಿ ಮುಂತಾದೆಡೆಗೆ ವ್ಯಾಪಕ ಹಾನಿಗಳು ಸಂಭವಿಸಿ, ಸಾಕಷ್ಟು ಮಂದಿ ತೊಂದರೆಗೆ ಸಿಲುಕಿದ್ದರು. ಈ ಸಂದರ್ಭ ಜಮಾಅತೇ ಇಸ್ಲಾಮಿ ಹಿಂದ್ ಮತ್ತು ಹೆಚ್.ಆರ್.ಎಸ್.ಸ್ವಯಂ ಸೇವಕರು ಸಂತ್ರಸ್ತರಿಗೆ ಅಗತ್ಯ ವೆರವನ್ನು ಒದಗಿಸಿದ್ದರು.
ಸಂಕಷ್ಟದ ಅವಧಿಯಲ್ಲಿ ಹೆಚ್.ಆರ್.ಎಸ್ ತಂಡ ಮನೆ ಕಳೆದುಕೊಂಡವರಿಗೆ 75 ತಾತ್ಕಾಲಿಕ ಬಿಡಾರಗಳಲ್ಲಿ ಆಶ್ರಯ ನೀಡಿದ್ದು ಮಾತ್ರವಲ್ಲ, ಅವರ ಮೂಲ ಅಗತ್ಯಗಳನ್ನು ಪೂರೈಸಿದ್ದರು. ಕೊಡಗು ರಿಲೀಫ್ ಸೆಲ್‍ನ ಕಛೇರಿಯಲ್ಲಿ ಸೂಪರ್ ಮಾರ್ಕೆಟ್ ಹಾಗೂ ಭಾನುವಾರದ ಸಂತೆ ದಿವಸ ಮಹಾ ಸಂತೆಗಳನ್ನು ಏರ್ಪಡಿಸಿ ಉಚಿತವಾಗಿ ಎಲ್ಲಾ ನಿತ್ಯೋಪಯೋಗಿ ವಸ್ತುಗಳನ್ನು ಪೂರೈಸಿದ್ದರು. ಆರೋಗ್ಯ ಕಾಪಾಡುವ ದೃಷ್ಟಿಯಿಂದ ವೈದ್ಯಕೀಯ ಶಿಬಿರವನ್ನು ಏರ್ಪಡಿಸಿ ಸಂತ್ರಸ್ತರಿಗೆ ಯಾವುದರಲ್ಲೂ ಕೊರತೆಯುಂಟಾಗದಂತೆ ನೋಡಿಕೊಂಡಿತ್ತಲ್ಲದೆ, ನೆಲ್ಲಿಹುದಿಕೇರಿಯ ಹಿರಾ ಮಸೀದಿಯ ನೆಲಮಾಳಿಗೆಯನ್ನು ಐವರು ಸಂತ್ರಸ್ತ ಕುಟುಂಬಗಳಿಗೆ ನೀಡಿ ಆಸರೆ ಒದಗಿಸಿತ್ತೆಂದು ಅಬ್ದುಸ್ಸಲಾಮ್ ತಿಳಿಸಿದರು.
2018 ರಲ್ಲಿ ಸಂಭವಿಸಿದ ಭೂ ಕುಸಿತದ ಪ್ರಾಕೃತಿಕ ವಿಕೋಪದ ಸಂದರ್ಭ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾದವರಿಗೆ ಕೊಡಗು ರಿಲೀಫ್ ಸೆಲ್ ಮೂಲಕ 8 ಮನೆಗಳನ್ನು ನಿರ್ಮಿಸಿಕೊಡಲಾಗಿತ್ತು ಎಂದರು.
ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಜಮಾಅತೆ ಇಸ್ಲಾಮೀ ಹಿಂದ್‍ನ ಜಿಲ್ಲಾ ಸಂಚಾಲಕರಾದ ಪಿ.ಕೆ.ಅಬ್ದುಲ್ ರೆಹೆಮಾನ್, ಸ್ವಾಗತ ಸಮಿತಿ ಉಪಾಧ್ಯಕ್ಷರುಗಳಾದ ಎನ್.ಕೆ.ವಾಸು, ಜೋಸೆಫ್ ಶ್ಯಾಮ್, ಸದಸ್ಯರುಗಳಾದ ಬಾಬುಚಂದ್ರ ಉಳ್ಳಾಗಡ್ಡಿ ಹಾಗೂ ಬೀರಾನ್ ಕುಟ್ಟಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಮಾ.13 ರಂದು ಕೊಡವ ಹಾಕಿ ಅಕಾಡೆಮಿಯ ಮಹಾಸಭೆ : `ಅಪ್ಪಚೆಟ್ಟೋಳಂಡ’ ಹಾಕಿ ಉತ್ಸವ ಯಶಸ್ವಿಗೊಳಿಸಲು ಮನವಿ
Next Article ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ : ವಿವೇಕ್ ಪಾಯಸ್

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.