Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಗೋಣಿಕೊಪ್ಪಲಿನಲ್ಲಿ ಕೇಸರಿ ಹವಾ : ವಿಜಯ ಸಂಕಲ್ಪ ಯಾತ್ರೆಗೆ ಸಾಕ್ಷಿಯಾದ ಸಾವಿರಾರು ಕಾರ್ಯಕರ್ತರು : ಬಿಜೆಪಿ ಜಾತಿವಾದಿ ಪಕ್ಷವಲ್ಲ : ಈಶ್ವರಪ್ಪ ಗುಡುಗು
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಗೋಣಿಕೊಪ್ಪಲಿನಲ್ಲಿ ಕೇಸರಿ ಹವಾ : ವಿಜಯ ಸಂಕಲ್ಪ ಯಾತ್ರೆಗೆ ಸಾಕ್ಷಿಯಾದ ಸಾವಿರಾರು ಕಾರ್ಯಕರ್ತರು : ಬಿಜೆಪಿ ಜಾತಿವಾದಿ ಪಕ್ಷವಲ್ಲ : ಈಶ್ವರಪ್ಪ ಗುಡುಗು

ಮಾರ್ಚ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.10 : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆ ಇಂದು ಕೊಡಗು ಜಿಲ್ಲೆಯನ್ನು ಪ್ರವೇಶಿಸಿತು. ಕೇಸರಿಮಯವಾದ ಗೋಣಿಕೊಪ್ಪಲಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಾವಿರಾರು ಕಾರ್ಯಕರ್ತರು ಸಾಕ್ಷಿಯಾದರು.
ಜಯಘೋಷಗಳೊಂದಿಗೆ ಮುಖ್ಯ ರಸ್ತೆಯಲ್ಲಿ ಯಾತ್ರೆ ಸಾಗಿತು. ಸಾವಿರಾರು ಕಾರ್ಯಕರ್ತರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರಮೋದಿ ಅವರಿಗೆ ಜಯಕಾರ ಹಾಕಿದರು.
ನಂತರ ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಭಾರತೀಯ ಜನತಾ ಪಾರ್ಟಿ ಜಾತಿವಾದಿ ಪಕ್ಷವಲ್ಲ ರಾಷ್ಟ್ರವಾದಿ ಪಕ್ಷ, ಬಿಜೆಪಿಗೆ ಕೋಮುವಾದಿ ಪಟ್ಟ ಕಟ್ಟಿದವರೇ ಜಾತಿವಾದಿಗಳು ಎಂದು ಗುಡುಗಿದರು.
ಸಿದ್ದರಾಮಯ್ಯ ಅವರು ಕುರುಬರೆಲ್ಲ ನನ್ನ ಹಿಂದೆ ಬನ್ನಿ ಎಂದರೆ, ಡಿ.ಕೆ.ಶಿವಕುಮಾರ್ ಅವರು ಒಕ್ಕಲಿಗರೆಲ್ಲ ನನ್ನ ಹಿಂದೆ ಬನ್ನಿ ಎಂದು ಕರೆ ನೀಡುತ್ತಿದ್ದಾರೆ. ಇದರಲ್ಲೇ ಅರ್ಥವಾಗುತ್ತದೆ ಜಾತಿಯ ವಾದಿಗಳು ಯಾರೆಂದು. ಸಿದ್ದರಾಮಯ್ಯ ಅವರಿಗೆ ಕುರುಬರು, ದಲಿತರು, ಇತರ ಜನಾಂಗಗಳ ಬೆಂಬಲ ಇಲ್ಲ ಎನ್ನುವುದು ಖಾತ್ರಿಯಾಗಿ ಅಲ್ಪಸಂಖ್ಯಾತರು ಹೆಚ್ಚು ಸಂಖ್ಯೆಯಲ್ಲಿರುವ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರ ದೇಶವನ್ನು ಭಯೋತ್ಪಾದಕ ಮುಕ್ತ ಮಾಡಬೇಕೆಂದು ಸಂಕಲ್ಪ ತೊಟ್ಟಿದೆ, ಆದರೆ ಕಾಂಗ್ರೆಸ್ಸಿಗರು ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಬಂದಾಗ ರಾಷ್ಟ್ರೀಯವಾದಿ ಕೊಡಗಿನ ಜನ ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಮೊಟ್ಟೆ ಎಸೆದರು. ಮತ್ತೆ ಬರುತ್ತೇನೆ ಎಂದು ತೊಡೆ ತಟ್ಟಿದ ಸಿದ್ದರಾಮಯ್ಯ ಮರಳಿ ಯಾಕೆ ಬರಲಿಲ್ಲ ಎಂದು ಈಶ್ವರಪ್ಪ ಪ್ರಶ್ನಿಸಿದರು.
ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಬಲವಂತದ ಮತಾಂತರದ ವಿರುದ್ಧದ ಕಾಯ್ದೆಯನ್ನು ಸಿದ್ದರಾಮಯ್ಯ ಅವರಂತಹ ನೂರು ಜನ ಬಂದರೂ ತೆಗೆದು ಹಾಕಲು ಸಾಧ್ಯವಿಲ್ಲ ಎಂದರು.
ಬಿಜೆಪಿಯಲ್ಲಿ ಅಭ್ಯರ್ಥಿ ಯಾರೇ ಆಗಿರಲಿ ಇಡೀ ವಿಶ್ವವೇ ಮೆಚ್ಚಿದ ನಾಯಕ ಪ್ರಧಾನಿ ನರೇಂದ್ರಮೋದಿ ಹಾಗೂ ತಾವರೆ ಗುರುತು ಮಾತ್ರ ನಮ್ಮ ಕಣ್ಣ ಮುಂದೆ ಬರಬೇಕು ಎಂದು ಈಶ್ವರಪ್ಪ ಹೇಳಿದರು.
ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಾತನಾಡಿ 120 ದೇಶಗಳಿಗೆ ಕೋವಿಡ್ ನಿರೋಧಕ ಲಸಿಕೆ ನೀಡಿದ ಖ್ಯಾತಿ ಭಾರತದ್ದು, ವಿಶ್ವದಲ್ಲಿಯೇ ಈಗ ಭಾರತವನ್ನು ಅಗ್ರಗಣ್ಯ ದೇಶವನ್ನಾಗಿ ಗುರುತಿಸಲ್ಪಡುತ್ತಿರುವುದಕ್ಕೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರಮೋದಿ ಅವರ ನಾಯಕತ್ವವೇ ಕಾರಣವೆಂದು ಹೇಳಿದರು.
ಕೇಂದ್ರದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಯುತ್ತಿದೆ, ಕಳೆದ 9 ವರ್ಷಗಳಲ್ಲಿ ಯಾವುದೇ ಭ್ರಷ್ಟಾಚಾರ ಆರೋಪಗಳು ಬಂದಿಲ್ಲ. ಈ ದೇಶಕ್ಕೆ ಬೇಕಾಗಿರುವುದು ಉತ್ತಮ ಆಡಳಿತ, ಅದನ್ನು ಮೋದಿ ಅವರ ನಾಯಕತ್ವದ ಸರ್ಕಾರ ನೀಡಿದೆ. ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಬಿಜೆಪಿ ಸರ್ಕಾರದ ಕೊಡುಗೆಯಾಗಿದೆ. ಮೈಸೂರು- ಕುಶಾಲನಗರಕ್ಕೆ ಚತುಷ್ಟಥ ರಸ್ತೆಯಾಗಲಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ನೀವು ನೀಡಿದ ಯಾವ ಭರವಸೆ ಈಡೇರಿಸಿದ್ದೀರಿ ಹೇಳಿ ಎಂದು ಪ್ರಶ್ನಿಸಿದ ಸದಾನಂದಗೌಡ, ಸಾಧನೆಗಳ ಆಧಾರದಲ್ಲಿ ಈ ಬಾರಿಯ ಚುನಾವಣೆಯನ್ನು ಬಿಜೆಪಿ ಸಮರ್ಥವಾಗಿ ಎದುರಿಸಲಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ, ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಡಗು ಜಿಲ್ಲೆಗೆ ಅತ್ಯಧಿಕ ಅನುದಾನ ಬಂದಿದೆ ಎಂದರು.
ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರದ ಕಾರ್ಯ ವೈಖರಿಯನ್ನು ಕೊಂಡಾಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಕೊಡಗು ಉಸ್ತುವಾರಿ ಪ್ರತಾಪ್ ಸಿಂಹ ನಾಯಕ್, ಎಂ.ಎಲ್.ಸಿ. ಸುಜಾಕುಶಾಲಪ್ಪ, ಪ್ರಮುಖರಾದ ರವಿಕುಶಾಲಪ್ಪ, ರೀನಾ ಪ್ರಕಾಶ್, ನೆಲ್ಲೀರ ಚಲನ್, ಸಿ.ಕೆ.ಬೋಪಣ್ಣ, ಕಿಲನ್ ಗಣಪತಿ, ಬಿ.ಎನ್.ಪ್ರಕಾಶ್, ರಾಜೇಂದ್ರ, ಮನುಮುತ್ತಪ್ಪ, ಸುನೀಲ್ ಸುಬ್ರಹ್ಮಣಿ, ತಿಮ್ಮಪ್ಪ ಶೆಟ್ಟಿ, ಬಿ.ಬಿ.ಭಾರತೀಶ್, ತಳೂರು ಕಿಶೋರ್ ಕುಮಾರ್, ಸತೀಶ್, ದತ್ತಾತ್ರಿ, ಕಿಶೋರ್, ಮಾದಪ್ಪ, ಅರುಣ್ ಕುಮಾರ್, ವಾಟೇರಿರ ಬೋಪಣ್ಣ, ಪ್ರಸನ್ನ ಸೇರಿದಂತೆ ಅಧಿಕ ಸಂಖ್ಯೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ಈಶಾ ಔಟ್‌ರೀಚ್ ಸಹಕಾರ ಮತ್ತು ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ನಾಪೋಕ್ಲುವಿನ ಪೊನ್ನಾಡ್ ರೈತ ಉತ್ಪಾದಕ…

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.